ದಾವಣಗೆರೆ: ಹರಿಯುತ್ತಿದ್ದ ನೀರಿನಲ್ಲಿ ಶಿಕ್ಷಕ ಕೊಚ್ಚಿ ಹೋಗಿದ್ದು, ಗ್ರಾಮಸ್ಥರ ಸಹಾಯದಿಂದ ಪ್ರಾಣಪಾಯದಿಂದ ಪಾರಾಗಿರುವ ಘಟನೆಯೊಂದು ನಡೆದಿದೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ-ಚೊರಡೋಣಿ ಮದ್ಯೆ ಈ ಘಟನೆ ನಡೆದಿದ್ದು, ಹರಿಯುವ ಸೇತುವೆ ದಾಟುತ್ತಿದ್ದ ಸಂದರ್ಭದಲ್ಲಿ ಶಿಕ್ಷಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಇದನ್ನು ಗಮನಿಸಿದ ಕೂಡಲೇ ಎಚ್ಚೆತ್ತ ಗ್ರಾಮಸ್ಥರು, ಕೂಡಲೇ ನೀರಿಗೆ ಹಾರಿ ಪ್ರಾಣ ಕಾಪಾಡಿದ್ದಾರೆ.
ಗ್ರಾಮಸ್ಥರ ಸಮಯ ಪ್ರಜ್ಞೆಯಿಂದಾಗಿ ಶಿಕ್ಷಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚನ್ನಗಿರಿ ತಾಲೂಕಿನಾದ್ಯಂತ ನಿನ್ನೆ ವಿಪರೀತವಾಗಿ ಮಳೆಯಾಗಿತ್ತು. ಹೀಗಾಗಿ ಚಿರಡೋಣಿ-ದೊಡ್ಡಘಟ್ಟ ಮಧ್ಯೆ ಹರಿಯುತ್ತಿದ್ದ ಸೇತುವೆಯಲ್ಲಿ ನೀರು ಹೆಚ್ಚಾಗಿತ್ತು. ಬಸವಪಟ್ಟಣದಿಂದ ಶಿಕ್ಷಕ ತಿಮ್ಮಯ್ಯ ಎಂಬುವವರು ದೊಡ್ಡಘಟ್ಟ ಗ್ರಾಮದ ಶಾಲೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸೇತುವೆ ದಾಟುವಾಗ ಬೈಕ್ ಸಮೇತ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದರು.