ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 15ಕ್ಕೆ ಏರಿಯಾಗಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕದಬಳ್ಳಿಯ ಶಿಕ್ಷಕರೊಬ್ಬರು ಮಹಾಮಾರಿ ಕೊರೊನಾಗೆ ಬಲಿಯಗಿದ್ದಾರೆ. ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊವಿಡ್ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಿಗೆ ಕಳೆದ ವಾರ ಕೊರೊನಾ ಪಾಸಿಟಿವ್ ಬಂದಿತ್ತು. ಕೊರೊನಾ ಪಾಸಿಟಿವ್ ಬಂದ ನಂತರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪೂಜೆ ಮಾಡುತ್ತಲೇ ಗರ್ಭಗುಡಿಯಲ್ಲಿ ಅರ್ಚಕ ಸಾವು…!
ಮಂಡ್ಯ ತಾಲೂಕಿನ ಮಂಗಲ ಗ್ರಾಮದ ಮಲ್ಲೇಶ್ವರ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿರುವಾಗಲೇ ಅರ್ಚಕರು ಮೃತಪಟ್ಟ ಘಟನೆ ನಡೆದಿದೆ. ಸಂತೆಕಸಲಗೆರೆ ಗ್ರಾಮದ ಚಂದ್ರಶೇಖರ್ (50) ಮೃತ ದುರ್ದೈವಿ. ಚಂದ್ರಶೇಖರ್ ಅವರು ಎಂದಿನಂತೆ ಇಂದು ಬೆಳಿಗ್ಗೆ ಪೂಜೆ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಗರ್ಭಗುಡಿಯಲ್ಲೆ ಸಾವನ್ನಪ್ಪಿದ್ದಾರೆ. ಗರ್ಭಗುಡಿಯಲ್ಲಿ ಅರ್ಚಕನ ಸಾವಿನಿಂದಾಗಿ ಗ್ರಾಮದಲ್ಲಿ ಆತಂಕ ಶುರುವಾಗಿದೆ. ಅರ್ಚಕರು ಹೃದಯಾಘಾತದಿಂದ ಮೃತಪಟ್ಟಿದ್ದಾರೋ ಅಥವಾ ಕೊರೊನಾ ಸೊಂಕಿನಿಂದ ಮೃತಪಟ್ಟಿದ್ದಾರೋ ಎಂಬುದು ದೃಢಪಟ್ಟಿಲ್ಲ. ಮಂಡ್ಯ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.