ADVERTISEMENT
Monday, December 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿರಾಟ್ ಕೊಹ್ಲಿಯವರನ್ನು ನಾಯಕತ್ವದಿಂದ ಕೇಳಗಿಳಿಸಬೇಕಾ..? ಬೇಡ್ವಾ…?

admin by admin
June 25, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

ವಿರಾಟ್ ಕೊಹ್ಲಿಯವರನ್ನು ನಾಯಕತ್ವದಿಂದ ಕೇಳಗಿಳಿಸಬೇಕಾ..? ಬೇಡ್ವಾ…?

virat kohli team india saakshatvವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್‍ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ ವಿರಾಟ್ ಕೊಹ್ಲಿಯವರಲ್ಲಿ ಯಾವುದೇ ಒಂದು ತಪ್ಪನ್ನು ಹುಡುಕಲು ಸಾಧ್ಯವಿಲ್ಲ.
ಆದ್ರೆ ನಾಯಕನಾಗಿ ವಿರಾಟ್ ಕೊಹ್ಲಿ ಇಷ್ಟವಾಗುವುದಿಲ್ಲ. ನಾಯಕತ್ವದ ಗುಣಗಳಿದ್ರೂ ವಿರಾಟ್ ಕೊಹ್ಲಿ ಸತತವಾಗಿ ಎಡವುತ್ತಿದ್ದಾರೆ. ತನ್ನ ಮನೋಭಾವನೆ ಮತ್ತು ತೆಗೆದುಕೊಳ್ಳುವ ನಿರ್ಧಾರಗಳಿಂದ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ತಾನೊಬ್ಬ ವಿಶ್ವದ ಶ್ರೇಷ್ಠ ತಂಡದ ನಾಯಕ ಎಂಬುದನ್ನು ಮರೆತುಬಿಡುತ್ತಾರೆ. ಒಬ್ಬ ಆಕ್ರಮಣಕಾರಿಯಾಗಿ ಆಟಗಾರನಾಗಿ ಕಾಣುತ್ತಾರೆ ಹೊರತು ಒಬ್ಬ ನಾಯಕನಾಗಿ ವಿರಾಟ್ ಕಾಣುವುದಿಲ್ಲ.
india virat kohli saakshatvಮಾತಿಗೆ ಮಾತು.. ಏಟಿಗೆ ಎದುರೇಟು.. ಇದು ವಿರಾಟ್ ಕೊಹ್ಲಿಯ ಸ್ವಭಾವ. ಎದುರಾಳಿ ತಂಡದ ಆಟಗಾರರ ವಿರುದ್ಧ ಸದಾ ಕಿಡಿ ಕಾರುತ್ತಲೇ ಇರೋ ವಿರಾಟ್ ಕೊಹ್ಲಿ ಸಹ ಆಟಗಾರರ ಆತ್ಮಬಲವನ್ನು ಹೆಚ್ಚಿಸುತ್ತಾರೆ. ಆದ್ರೆ ತಾಳ್ಮೆ ಕಳೆದುಕೊಳ್ಳುತ್ತಾರೆ. ತಂಡದ ಗೇಮ್ ಪ್ಲಾನ್ ಅನ್ನು ಸರಿಯಾದ ಹಾದಿಯಲ್ಲಿ ತೆಗೆದುಕೊಂಡು ಹೋಗುವಲ್ಲಿ ವಿಫಲವಾಗುತ್ತಿದ್ದಾರೆ. ವಿರಾಟ್ ಮುಖದಲ್ಲಿ ಯಾವಾಗಲೂ ಕೌರ್ಯದ ಭಾವನೆಗಳಿರುತ್ತವೆ. ತಾಳ್ಮೆ, ಸಂಯಮ ಮತ್ತು ಶಾಂತ ಚಿತ್ತತೆಯ ಮುಖಭಾವ ಇರೋದು ತುಂಬಾನೇ ಕಮ್ಮಿ. ಹೀಗಾಗಿ ವಿರಾಟ್ ಕೊಹ್ಲಿ ಗೆ ತನ್ನನ್ನು ತಾನೇ ಕಂಟ್ರೋಲ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇನ್ನು ತಂಡವನ್ನು ಕಂಟ್ರೋಲ್ ಮಾಡೋದು ಕಷ್ಟವಾಗುತ್ತಿದೆ.
ಇನ್ನು ನಾಯಕನಾಗಿ ವಿರಾಟ್ ಕೊಹ್ಲಿ ಯಶಸ್ಸು ಸಾಧಿಸಿದ್ದಾರೆ ಎಂಬುದು ಅಷ್ಟೇ ಸತ್ಯ. ತನ್ನ ಏಕಾಂಗಿ ಹೋರಾಟ ಹೊತೆಗೆ ತಂಡದ ಸಾಂಘಿಕ ಆಟವೂ ಕೂಡ ಟೀಮ್ ಇಂಡಿಯಾವನ್ನು ಯಶಸ್ಸಿನ ಉತ್ತುಂಗಕ್ಕೇರಿಸಿದೆ. ಆದ್ರೂ ವಿರಾಟ್ ಕೊಹ್ಲಿಯ ನಾಯಕತ್ವದ ಬಗ್ಗೆ ಹಲವಾರು ಟೇಕೆಗಳು ಕೇಳಿ ಬರುತ್ತಿವೆ.

Related posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

December 15, 2025
ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

December 15, 2025

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯ ನಾಯಕತ್ವವನ್ನು ಪ್ರಶ್ನೆ ಮಾಡಲಾಗುತ್ತಿದೆ. ಹಾಗಂತ ಇದು ಭಾರತ ಕ್ರಿಕೆಟ್ ತಂಡದಲ್ಲಿ ಹೊಸತೇನೋ ಅಲ್ಲ. ಬಹಳ ಹಿಂದಿನಿಂದಲೂ ಮಹತ್ತರವಾದ ಪಂದ್ಯಗಳಲ್ಲಿ ಸೋತಾಗ ಮೊದಲು ಸ್ಥಾನ ಕಳೆದುಕೊಳ್ಳುವುದು ತಂಡದ ನಾಯಕನೇ. ಸುನೀಲ್ ಗವಾಸ್ಕರ್, ಕಪಿಲ್ ದೇವ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಅಷ್ಟೇ ಯಾಕೆ, ಎರಡು ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಗೆದ್ದ ಮಹೇಂದ್ರ ಸಿಂಗ್ ಧೋನಿಯ ನಾಯಕತ್ವಕ್ಕೂ ಕುತ್ತು ಬಂದಿತ್ತು ಎಂಬುದನ್ನು ಮರೆಯುವ ಹಾಗಿಲ್ಲ. ಇದಕ್ಕೆ ವಿರಾಟ್ ಕೊಹ್ಲಿ ಸೇರ್ಪಡೆಯಷ್ಟೇ.
ಇನ್ನೊಂದೆಡೆ ಟೀಮ್ ಇಂಡಿಯಾದ ಯಶಸ್ವಿ ನಾಯಕರ ಲೀಸ್ಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅಂಕಿ ಅಂಶಗಳ ಪ್ರಕಾರ ಸೌರವ್ ಗಂಗೂಲಿ ಮತ್ತು ಧೋನಿಗಿಂತ ವಿರಾಟ್ ಕೊಹ್ಲಿ ನಾಯಕನಾಗಿ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೆ. ಆದ್ರೆ ನಾಯಕತ್ವದ ಸ್ವಭಾವ, ತಂಡವನ್ನು ಮುನ್ನಡೆಸುವ ರೀತಿಯಲ್ಲಿ ವಿರಾಟ್ ಹಿನ್ನಡೆ ಅನುಭವಿಸುತ್ತಿದ್ದಾರೆ.
virat kohli team india saakshatvಅಂದ ಹಾಗೇ ವಿರಾಟ್ ನಾಯಕನಾಗಿ ಇಲ್ಲಿಯವರೆಗೆ ಯಾವುದೇ ಐಸಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿಲ್ಲ.
2017ರಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಮೂರು ಮಾದರಿಯ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ ಪಾಕ್ ವಿರುದ್ಧ ಸೋಲು ಅನುಭವಿಸಿತ್ತು. ಅದೇ ರೀತಿ 2019ರ ಏಕದಿನ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲೂ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದೆ. ಈ ಮೂರು ಪ್ರತಿಷ್ಠಿತ ಟೂರ್ನಿಗಳಲ್ಲಿ ನಾಯಕನಾಗಿ ತಂಡಕ್ಕೆ ಗೆಲುವು ದಕ್ಕಿಸಿಕೊಡಲು ವಿರಾಟ್ ವಿಫಲರಾಗಿದ್ದಾರೆ.
virat kohli rcb ipl 2021ಇನ್ನೊಂದೆಡೆ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಆರ್ ಸಿಬಿ ತಂಡದ ಸಾರಥಿಯಾಗಿದ್ದಾರೆ. ಆದ್ರೆ ಪ್ರಶಸ್ತಿ ಗೆಲ್ಲಲು ಸತತಾಗಿ ವಿಫಲರಾಗುತ್ತಿದ್ದಾರೆ. ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವಿರಾಟ್ ಕೊಹ್ಲಿಯವರ ನಾಯಕತ್ವದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ವಿರಾಟ್ ಕೊಹ್ಲಿಯವರನ್ನು ಆರ್ ಸಿಬಿ ಮತ್ತು ಟೀಮ್ ಇಂಡಿಯಾ ತಂಡದ ನಾಯಕತ್ವದಿಂದ ಕೆಳಗಿಳಿಸಬೇಕು ಅನ್ನೋ ಕೂಗು ಕೂಡ ಕೇಳಿಬರುತ್ತಿದೆ.
ಇನ್ನು ತಂಡದ ಆಯ್ಕೆಯಲ್ಲಿ ವಿರಾಟ್ ಕೊಹ್ಲಿಗೆ ಸಂಪೂರ್ಣವಾದ ಸ್ವಾತಂತ್ರ್ಯವಿದೆ. ಕೋಚ್ ರವಿಶಾಸ್ತ್ರಿ ಮತ್ತು ವಿರಾಟ್ ನಡುವಿನ ಬಾಂಧವ್ಯವೂ ಚೆನ್ನಾಗಿದೆ. ಆಯ್ಕೆ ಸಮಿತಿಯ ಜೊತೆ ಚರ್ಚೆ ಮಾಡಿ ತಂಡವನ್ನು ಆಯ್ಕೆ ಮಾಡಿಕೊಳ್ಳುವಂತಹ ಅಧಿಕಾರವೂ ವಿರಾಟ್ ಗಿದೆ. ಆದ್ರೆ ತಂಡದ ಆಟ ಗಾರರ ವಿಶ್ವಾಸವನ್ನು ಪಡೆದುಕೊಳ್ಳಲು ವಿರಾಟ್ ಗೆ ಸಾಧ್ಯವಾಗುತ್ತಿಲ್ಲ. ಈ ನಡುವೆ, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ virat kohli team india test team saakshatvಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯವರ ಪ್ರತಿಕ್ರಿಯೆಯನ್ನು ಗಮನಿಸಿದ್ದಾಗ ಎಲ್ಲೋ ಒಂದು ಕಡೆ ತಂಡದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ತಂಡದ ಅಂತಿಮ ಹನ್ನೊಂದರ ಬಳಗದ ಆಯ್ಕೆ ವಿರಾಟ್ ಹೇಳಿದಂತೆ ಆಗುತ್ತಿಲ್ಲ ಅಂತ ಅನ್ನಿಸುತ್ತಿದೆ.
ಅದೇನೇ ಇರಲಿ, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯ ನಾಯಕತ್ವಕ್ಕೆ ಅಪತ್ತು ಬಂದಿದೆ. ಬಹುಶಃ ಮುಂದಿನ ದಿನಗಳಲ್ಲಿ ಟೆಸ್ಟ್ ತಂಡಕ್ಕೆ ಅಜಿಂಕ್ಯಾ ರಹಾನೆ, ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಟಿ-ಟ್ವೆಂಟಿ ತಂಡಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾದ್ರೂ ಅಚ್ಚರಿ ಏನಿಲ್ಲ.

Tags: #saakshatvAjinkya RahanebcciCricketIPLone day cricketRCBrohith sharmat-20 cricketteam indiavirat kohliWTC final
ShareTweetSendShare
Join us on:

Related Posts

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

ದುಷ್ಟ ಗ್ರಹಗಳನ್ನು ತೊಡೆದುಹಾಕಲು ಹನುಮಾನ್ ಮಂತ್ರ

by admin
December 15, 2025
0

ದುಷ್ಟ ಗ್ರಹಗಳಿಂದ ನಿಮ್ಮ ಜೀವನದಲ್ಲಿ ಎಂದಿಗೂ ದುಃಖ ಇರುವುದಿಲ್ಲ. ಹನುಮಂತನ ಈ ತಾರಕ ಮಂತ್ರವನ್ನು ಒಮ್ಮೆ ಪಠಿಸಿದರೂ ಸಹ ಗ್ರಹಗಳು ನಿಮ್ಮ ಕಣ್ಣುಗಳನ್ನು ಮುಚ್ಚಿ ನಿಮ್ಮ ಕುಟುಂಬಕ್ಕೆ...

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!

by admin
December 15, 2025
0

ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

ಹೀಗೆ ಶಿವಾಲಯಕ್ಕೆ ಹೋದವರು ಜೀವನದಲ್ಲಿ ಸೋತ ಇತಿಹಾಸವಿಲ್ಲ. ನೀವು ಶಿವ ದೇವಾಲಯಕ್ಕೆ ಭೇಟಿ ನೀಡಿದರೆ ಒಮ್ಮೆ ಇದನ್ನು ಪ್ರಯತ್ನಿಸಿ.

by admin
December 15, 2025
0

ಶಿವನ ದೇವಸ್ಥಾನ ಮಾತ್ರವಲ್ಲ, ಯಾವ ದೇವಸ್ಥಾನಕ್ಕೆ ಭೇಟಿ ನೀಡಿದರೂ ನಮ್ಮೊಳಗೆ ಒಂದು ಶಕ್ತಿ ಬರುತ್ತದೆ. ಆ ಧನಾತ್ಮಕ ಶಕ್ತಿಯು ನಮ್ಮ ಜೀವನದಲ್ಲಿ ಕೆಲವು ತಿರುವುಗಳನ್ನು ತರುತ್ತದೆ. ಆದರೆ, ಶಿವನ ದೇವಸ್ಥಾನಕ್ಕೆ...

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

ನವೋದಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ: ಮಗನಿಗೆ ಕಾಪಿ ಮಾಡಿಸಿದ ಶಿಕ್ಷಕನ ವಿರುದ್ಧ ಪೋಷಕರ ದಂಗೆ! ಪರೀಕ್ಷೆ ರದ್ದುಗೊಳಿಸಲು ಆಗ್ರಹ

by Shwetha
December 15, 2025
0

ಹಳಿಯಾಳ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಬುನಾದಿ ಹಾಕಬೇಕಾದ ಶಿಕ್ಷಕನೇ, ತನ್ನ ಮಗನ ವ್ಯಾಮೋಹದಲ್ಲಿ ಪರೀಕ್ಷಾ ಅಕ್ರಮಕ್ಕೆ ಇಳಿದು ಸಿಕ್ಕಿಬಿದ್ದಿರುವ ಲಜ್ಜೆಗೆಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಕೇಂದ್ರ...

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

45 ವರ್ಷಗಳ ಎಡಪಕ್ಷಗಳ ಆಡಳಿತಕ್ಕೆ ತಿರುವನಂತಪುರಂನಲ್ಲಿ ಬ್ರೇಕ್ ಬಿಜೆಪಿ ಅಬ್ಬರಕ್ಕೆ ಶಶಿ ತರೂರ್ ಫಿದಾ

by Shwetha
December 15, 2025
0

ತಿರುವನಂತಪುರಂ: ಕೇರಳದ ರಾಜಕೀಯ ಇತಿಹಾಸದಲ್ಲಿ ಮಹತ್ವದ ತಿರುವೊಂದಕ್ಕೆ ಸಾಕ್ಷಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಐತಿಹಾಸಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram