ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿರಾಟ್ ಕೊಹ್ಲಿಯವರನ್ನು ನಾಯಕತ್ವದಿಂದ ಕೇಳಗಿಳಿಸಬೇಕಾ..? ಬೇಡ್ವಾ…?

admin by admin
June 25, 2021
in Newsbeat, Sports, ಕ್ರೀಡೆ
virat kohli team india saakshatv
Share on FacebookShare on TwitterShare on WhatsappShare on Telegram

ವಿರಾಟ್ ಕೊಹ್ಲಿಯವರನ್ನು ನಾಯಕತ್ವದಿಂದ ಕೇಳಗಿಳಿಸಬೇಕಾ..? ಬೇಡ್ವಾ…?

virat kohli team india saakshatvವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್‍ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ ವಿರಾಟ್ ಕೊಹ್ಲಿಯವರಲ್ಲಿ ಯಾವುದೇ ಒಂದು ತಪ್ಪನ್ನು ಹುಡುಕಲು ಸಾಧ್ಯವಿಲ್ಲ.
ಆದ್ರೆ ನಾಯಕನಾಗಿ ವಿರಾಟ್ ಕೊಹ್ಲಿ ಇಷ್ಟವಾಗುವುದಿಲ್ಲ. ನಾಯಕತ್ವದ ಗುಣಗಳಿದ್ರೂ ವಿರಾಟ್ ಕೊಹ್ಲಿ ಸತತವಾಗಿ ಎಡವುತ್ತಿದ್ದಾರೆ. ತನ್ನ ಮನೋಭಾವನೆ ಮತ್ತು ತೆಗೆದುಕೊಳ್ಳುವ ನಿರ್ಧಾರಗಳಿಂದ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ತಾನೊಬ್ಬ ವಿಶ್ವದ ಶ್ರೇಷ್ಠ ತಂಡದ ನಾಯಕ ಎಂಬುದನ್ನು ಮರೆತುಬಿಡುತ್ತಾರೆ. ಒಬ್ಬ ಆಕ್ರಮಣಕಾರಿಯಾಗಿ ಆಟಗಾರನಾಗಿ ಕಾಣುತ್ತಾರೆ ಹೊರತು ಒಬ್ಬ ನಾಯಕನಾಗಿ ವಿರಾಟ್ ಕಾಣುವುದಿಲ್ಲ.
india virat kohli saakshatvಮಾತಿಗೆ ಮಾತು.. ಏಟಿಗೆ ಎದುರೇಟು.. ಇದು ವಿರಾಟ್ ಕೊಹ್ಲಿಯ ಸ್ವಭಾವ. ಎದುರಾಳಿ ತಂಡದ ಆಟಗಾರರ ವಿರುದ್ಧ ಸದಾ ಕಿಡಿ ಕಾರುತ್ತಲೇ ಇರೋ ವಿರಾಟ್ ಕೊಹ್ಲಿ ಸಹ ಆಟಗಾರರ ಆತ್ಮಬಲವನ್ನು ಹೆಚ್ಚಿಸುತ್ತಾರೆ. ಆದ್ರೆ ತಾಳ್ಮೆ ಕಳೆದುಕೊಳ್ಳುತ್ತಾರೆ. ತಂಡದ ಗೇಮ್ ಪ್ಲಾನ್ ಅನ್ನು ಸರಿಯಾದ ಹಾದಿಯಲ್ಲಿ ತೆಗೆದುಕೊಂಡು ಹೋಗುವಲ್ಲಿ ವಿಫಲವಾಗುತ್ತಿದ್ದಾರೆ. ವಿರಾಟ್ ಮುಖದಲ್ಲಿ ಯಾವಾಗಲೂ ಕೌರ್ಯದ ಭಾವನೆಗಳಿರುತ್ತವೆ. ತಾಳ್ಮೆ, ಸಂಯಮ ಮತ್ತು ಶಾಂತ ಚಿತ್ತತೆಯ ಮುಖಭಾವ ಇರೋದು ತುಂಬಾನೇ ಕಮ್ಮಿ. ಹೀಗಾಗಿ ವಿರಾಟ್ ಕೊಹ್ಲಿ ಗೆ ತನ್ನನ್ನು ತಾನೇ ಕಂಟ್ರೋಲ್ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇನ್ನು ತಂಡವನ್ನು ಕಂಟ್ರೋಲ್ ಮಾಡೋದು ಕಷ್ಟವಾಗುತ್ತಿದೆ.
ಇನ್ನು ನಾಯಕನಾಗಿ ವಿರಾಟ್ ಕೊಹ್ಲಿ ಯಶಸ್ಸು ಸಾಧಿಸಿದ್ದಾರೆ ಎಂಬುದು ಅಷ್ಟೇ ಸತ್ಯ. ತನ್ನ ಏಕಾಂಗಿ ಹೋರಾಟ ಹೊತೆಗೆ ತಂಡದ ಸಾಂಘಿಕ ಆಟವೂ ಕೂಡ ಟೀಮ್ ಇಂಡಿಯಾವನ್ನು ಯಶಸ್ಸಿನ ಉತ್ತುಂಗಕ್ಕೇರಿಸಿದೆ. ಆದ್ರೂ ವಿರಾಟ್ ಕೊಹ್ಲಿಯ ನಾಯಕತ್ವದ ಬಗ್ಗೆ ಹಲವಾರು ಟೇಕೆಗಳು ಕೇಳಿ ಬರುತ್ತಿವೆ.

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯ ನಾಯಕತ್ವವನ್ನು ಪ್ರಶ್ನೆ ಮಾಡಲಾಗುತ್ತಿದೆ. ಹಾಗಂತ ಇದು ಭಾರತ ಕ್ರಿಕೆಟ್ ತಂಡದಲ್ಲಿ ಹೊಸತೇನೋ ಅಲ್ಲ. ಬಹಳ ಹಿಂದಿನಿಂದಲೂ ಮಹತ್ತರವಾದ ಪಂದ್ಯಗಳಲ್ಲಿ ಸೋತಾಗ ಮೊದಲು ಸ್ಥಾನ ಕಳೆದುಕೊಳ್ಳುವುದು ತಂಡದ ನಾಯಕನೇ. ಸುನೀಲ್ ಗವಾಸ್ಕರ್, ಕಪಿಲ್ ದೇವ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಅಷ್ಟೇ ಯಾಕೆ, ಎರಡು ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಗೆದ್ದ ಮಹೇಂದ್ರ ಸಿಂಗ್ ಧೋನಿಯ ನಾಯಕತ್ವಕ್ಕೂ ಕುತ್ತು ಬಂದಿತ್ತು ಎಂಬುದನ್ನು ಮರೆಯುವ ಹಾಗಿಲ್ಲ. ಇದಕ್ಕೆ ವಿರಾಟ್ ಕೊಹ್ಲಿ ಸೇರ್ಪಡೆಯಷ್ಟೇ.
ಇನ್ನೊಂದೆಡೆ ಟೀಮ್ ಇಂಡಿಯಾದ ಯಶಸ್ವಿ ನಾಯಕರ ಲೀಸ್ಟ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಮತ್ತು ಸೌರವ್ ಗಂಗೂಲಿ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಅಂಕಿ ಅಂಶಗಳ ಪ್ರಕಾರ ಸೌರವ್ ಗಂಗೂಲಿ ಮತ್ತು ಧೋನಿಗಿಂತ ವಿರಾಟ್ ಕೊಹ್ಲಿ ನಾಯಕನಾಗಿ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೆ. ಆದ್ರೆ ನಾಯಕತ್ವದ ಸ್ವಭಾವ, ತಂಡವನ್ನು ಮುನ್ನಡೆಸುವ ರೀತಿಯಲ್ಲಿ ವಿರಾಟ್ ಹಿನ್ನಡೆ ಅನುಭವಿಸುತ್ತಿದ್ದಾರೆ.
virat kohli team india saakshatvಅಂದ ಹಾಗೇ ವಿರಾಟ್ ನಾಯಕನಾಗಿ ಇಲ್ಲಿಯವರೆಗೆ ಯಾವುದೇ ಐಸಿಸಿ ಪ್ರಶಸ್ತಿಗಳನ್ನು ಗೆದ್ದುಕೊಂಡಿಲ್ಲ.
2017ರಲ್ಲಿ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ಮೂರು ಮಾದರಿಯ ಕ್ರಿಕೆಟ್ ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ ಪಾಕ್ ವಿರುದ್ಧ ಸೋಲು ಅನುಭವಿಸಿತ್ತು. ಅದೇ ರೀತಿ 2019ರ ಏಕದಿನ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ನಲ್ಲೂ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದೆ. ಈ ಮೂರು ಪ್ರತಿಷ್ಠಿತ ಟೂರ್ನಿಗಳಲ್ಲಿ ನಾಯಕನಾಗಿ ತಂಡಕ್ಕೆ ಗೆಲುವು ದಕ್ಕಿಸಿಕೊಡಲು ವಿರಾಟ್ ವಿಫಲರಾಗಿದ್ದಾರೆ.
virat kohli rcb ipl 2021ಇನ್ನೊಂದೆಡೆ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ಆರ್ ಸಿಬಿ ತಂಡದ ಸಾರಥಿಯಾಗಿದ್ದಾರೆ. ಆದ್ರೆ ಪ್ರಶಸ್ತಿ ಗೆಲ್ಲಲು ಸತತಾಗಿ ವಿಫಲರಾಗುತ್ತಿದ್ದಾರೆ. ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವಿರಾಟ್ ಕೊಹ್ಲಿಯವರ ನಾಯಕತ್ವದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ವಿರಾಟ್ ಕೊಹ್ಲಿಯವರನ್ನು ಆರ್ ಸಿಬಿ ಮತ್ತು ಟೀಮ್ ಇಂಡಿಯಾ ತಂಡದ ನಾಯಕತ್ವದಿಂದ ಕೆಳಗಿಳಿಸಬೇಕು ಅನ್ನೋ ಕೂಗು ಕೂಡ ಕೇಳಿಬರುತ್ತಿದೆ.
ಇನ್ನು ತಂಡದ ಆಯ್ಕೆಯಲ್ಲಿ ವಿರಾಟ್ ಕೊಹ್ಲಿಗೆ ಸಂಪೂರ್ಣವಾದ ಸ್ವಾತಂತ್ರ್ಯವಿದೆ. ಕೋಚ್ ರವಿಶಾಸ್ತ್ರಿ ಮತ್ತು ವಿರಾಟ್ ನಡುವಿನ ಬಾಂಧವ್ಯವೂ ಚೆನ್ನಾಗಿದೆ. ಆಯ್ಕೆ ಸಮಿತಿಯ ಜೊತೆ ಚರ್ಚೆ ಮಾಡಿ ತಂಡವನ್ನು ಆಯ್ಕೆ ಮಾಡಿಕೊಳ್ಳುವಂತಹ ಅಧಿಕಾರವೂ ವಿರಾಟ್ ಗಿದೆ. ಆದ್ರೆ ತಂಡದ ಆಟ ಗಾರರ ವಿಶ್ವಾಸವನ್ನು ಪಡೆದುಕೊಳ್ಳಲು ವಿರಾಟ್ ಗೆ ಸಾಧ್ಯವಾಗುತ್ತಿಲ್ಲ. ಈ ನಡುವೆ, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ virat kohli team india test team saakshatvಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯವರ ಪ್ರತಿಕ್ರಿಯೆಯನ್ನು ಗಮನಿಸಿದ್ದಾಗ ಎಲ್ಲೋ ಒಂದು ಕಡೆ ತಂಡದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ತಂಡದ ಅಂತಿಮ ಹನ್ನೊಂದರ ಬಳಗದ ಆಯ್ಕೆ ವಿರಾಟ್ ಹೇಳಿದಂತೆ ಆಗುತ್ತಿಲ್ಲ ಅಂತ ಅನ್ನಿಸುತ್ತಿದೆ.
ಅದೇನೇ ಇರಲಿ, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಸೋಲಿನ ನಂತರ ವಿರಾಟ್ ಕೊಹ್ಲಿಯ ನಾಯಕತ್ವಕ್ಕೆ ಅಪತ್ತು ಬಂದಿದೆ. ಬಹುಶಃ ಮುಂದಿನ ದಿನಗಳಲ್ಲಿ ಟೆಸ್ಟ್ ತಂಡಕ್ಕೆ ಅಜಿಂಕ್ಯಾ ರಹಾನೆ, ಏಕದಿನ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಟಿ-ಟ್ವೆಂಟಿ ತಂಡಕ್ಕೆ ರೋಹಿತ್ ಶರ್ಮಾ ನಾಯಕನಾಗಿ ಆಯ್ಕೆಯಾದ್ರೂ ಅಚ್ಚರಿ ಏನಿಲ್ಲ.

Tags: #saakshatvAjinkya RahanebcciCricketIPLone day cricketRCBrohith sharmat-20 cricketteam indiavirat kohliWTC final
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram