ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಯಾಂಕ್ ಗೆ ಚಾನ್ಸೇ ಕೊಡುತ್ತಿಲ್ಲ .. ಅವಕಾಶ ಕೈಚೆಲ್ಲಿಕೊಂಡ ಶುಬ್ಮನ್.. ಬಕ ಪಕ್ಷಿಯಂತೆ ಕಾಯುತ್ತಿರುವ ಪೃಥ್ವಿ ಶಾ..!

admin by admin
June 23, 2021
in Newsbeat, Sports, ಕ್ರೀಡೆ
mayank agarwal prithvi shaw shubman gill saakshatv team india
Share on FacebookShare on TwitterShare on WhatsappShare on Telegram

ಮಯಾಂಕ್ ಗೆ ಚಾನ್ಸೇ ಕೊಡುತ್ತಿಲ್ಲ.. ಅವಕಾಶ ಕೈಚೆಲ್ಲಿಕೊಂಡ ಶುಬ್ಮನ್.. ಬಕ ಪಕ್ಷಿಯಂತೆ ಕಾಯುತ್ತಿರುವ ಪೃಥ್ವಿ ಶಾ..!

shubman gill saakshatv team indiaಶುಬ್ಮನ್ ಗಿಲ್.. ಸಾಕಷ್ಟು ಭರವಸೆ ಮೂಡಿಸಿದ್ದ ಬ್ಯಾಟ್ಸ್ ಮೆನ್. ಟೀಮ್ ಇಂಡಿಯಾದ ಆರಂಭಿಕ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಅನ್ನೋ ನಂಬಿಕೆ ಇತ್ತು. ಆದ್ರೆ ಶುಬ್ಮನ್ ಗಿಲ್ ಎಲ್ಲಾ ನಿರೀಕ್ಷೆ ಹಾಗೂ ಭರವಸೆಗಳನ್ನು ಹುಸಿಗೊಳಿಸಿದ್ದಾರೆ. ಸಿಕ್ಕ ಸಾಲು ಸಾಲು ಅವಕಾಶಗಳನ್ನು ಕೈಚೆಲ್ಲಿಕೊಳ್ಳುತ್ತಿದ್ದಾರೆ.
ಹೌದು, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲೂ ರನ್ ದಾಖಲಿಸಲು ಶುಭ್ಮನ್ ಗಿಲ್ ವಿಫಲವಾಗಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ 28 ರನ್ ಗಳಿಸಿದ್ರೆ, ಎರಡನೇ ಇನಿಂಗ್ಸ್ ನಲ್ಲಿ ಕೇವಲ 8 ರನ್ ಗೆ ತನ್ನ ಹೋರಾಟವನ್ನು ಕೊನೆಗೊಳಿಸಿದ್ದಾರೆ.
ಇಲ್ಲಿಯವರೆಗೆ ಶುಬ್ಮನ್ ಗಿಲ್ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 35ರ ಸರಾಸರಿಯಲ್ಲಿ ಗಳಿಸಿದ್ದು 378 ರನ್. ಇದ್ರಲ್ಲಿ ಮೂರು ಅರ್ಧಶತಕಗಳಿವೆ.
ಹಾಗಂತ ಶುಬ್ಮನ್ ಗಿಲ್ ಅವರ ಪ್ರತಿಭೆ ಸಾಮಥ್ರ್ಯವನ್ನು ಕೇವಲ ಏಳು ಟೆಸ್ಟ್ ಪಂದ್ಯಗಳಲ್ಲಿ ಅಳತೆ ಮಾಡುವುದು ಕೂಡ ಸರಿಯಲ್ಲ. ಆದ್ರೂ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಸ್ಪರ್ಧಾತ್ಮಕ ದಿನಗಳಲ್ಲಿ ಅವಕಾಶವನ್ನು ಕೈಚೆಲ್ಲಿದ್ರೆ ಮತ್ತೆ ತಂಡದಲ್ಲಿ ಸ್ಥಾನ ಸಿಗುತ್ತೊ ಇಲ್ವೋ ಗೊತ್ತಿಲ್ಲ.
ಇದಕ್ಕೆ ಪೃಥ್ವಿ ಶಾ ಅತ್ಯುತ್ತಮ ಉದಾಹರಣೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ದಾಖಲಿಸಿ ಗಮನ ಸೆಳೆದಿದ್ದ ಪೃಥ್ವಿ ಶಾ ಆನಂತರ ಗಾಯ, ಕಳಪೆ ಫಾರ್ಮ್ ನಿಂದಾಗಿ ಟೀಮ್ ಇಂಡಿಯಾದಿಂದ ಹೊರನಡೆದಿದ್ದರು. ಆಸ್ಟ್ರೇಲಿಯಾ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯ ಮತ್ತು ನಾಲ್ಕು ರನ್ ಗಳಿಸಿದ್ದ ನಂತರ ಪೃಥ್ವಿ ಶಾ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ.

Related posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

February 16, 2026

prithvi shaw team india saakshatvಆದ್ರೆ ಆಸ್ಟ್ರೇಲಿಯಾ ಸರಣಿಯಿಂದ ಹೊರಬಿದ್ದ ಬಳಿಕ ಪೃಥ್ವಿ ಶಾ ದೇಶಿ ಟೂರ್ನಿಯಲ್ಲಿ ರನ್ ಮಳೆ ಸುರಿಸಿದ್ದರು. ಅದೇ ರೀತಿ ಐಪಿಎಲ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.. ಆದ್ರೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇದೀಗ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಪೃಥ್ವಿ ಶಾ ಅವಕಾಶವನ್ನು ಕಸಿದುಕೊಂಡ ಶುಬ್ನನ್ ಗಿಲ್ ಕೂಡ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಹೀಗಾಗಿ ಶುಬ್ಮನ್ ಗಿಲ್ ಸ್ಥಾನವನ್ನು ಪೃಥ್ವಿ ಶಾ ಮತ್ತೆ ಕಸಿದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.

ಪೃಥ್ವಿ ಶಾ ಐದು ಟೆಸ್ಟ್ ಪಂದ್ಯಗಳಲ್ಲಿ 42ರ ಸರಾಸರಿಯಲ್ಲಿ 339 ರನ್ ಪೇರಿಸಿದ್ದಾರೆ. ಇದ್ರಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳಿವೆ.

ಇನ್ನೊಂದೆಡೆ ಮಯಾಂಕ್ ಅಗರ್ ವಾಲ್. ನತದೃಷ್ಟ ಕ್ರಿಕೆಟಿಗ. ಮೊದಲೇ ಟೀಮ್ ಇಂಡಿಯಾದಲ್ಲಿ ತಡವಾಗಿ ಅವಕಾಶ ಸಿಕ್ಕಿತ್ತು. ಸಿಕ್ಕ ಅವಕಾಶವನ್ನು ಬಳಸಿಕೊಂಡ್ರೂ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿಲ್ಲ.
mayank agarwal team india saakshatvಕಳೆದ ಆಸ್ಟ್ರೇಲಿಯಾ ಸರಣಿಯ ಗಬ್ಬಾ ಟೆಸ್ಟ್ ಪಂದ್ಯದಲ್ಲಿ ಆಡಿದ ನಂತರದ ಟೀಮ್ ಇಂಡಿಯಾದ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಮಯಾಂಕ್ ಅಗರ್ ವಾಲ್ ಮೊದಲ ಇನಿಂಗ್ಸ್ ನಲ್ಲಿ 38 ರನ್ ಹಾಗೂ ಎರಡನೇ ಇನಿಂಗ್ಸ್ ನಲ್ಲಿ 9 ರನ್ ಗಳಿಸಿದ್ದರು.
ಇಲ್ಲಿಯವರೆಗೆ 14 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಯಾಂಕ್ ಅಗರ್ ವಾಲ್ 46ರ ಸರಾಸರಿಯಲ್ಲಿ 1052 ರನ್ ಪೇರಿಸಿದ್ದಾರೆ. ಎರಡು ದ್ವಿಶತಕ ಸೇರಿ ಮೂರು ಶತಕಗಳನ್ನು ಸಿಡಿಸಿರುವ ಮಯಾಂಕ್, ನಾಲ್ಕು ಅರ್ಧಶತಕಗಳನ್ನು ದಾಖಲಿಸಿದ್ದಾರೆ.
ಅಂಕಿ ಅಂಶಗಳನ್ನು ನೋಡಿದಾಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಮಯಾಂಕ್ ಅಗರ್ ವಾಲ್ ಗೆ ಅವಕಾಶ ನೀಡಬೇಕಾಗಿತ್ತು. ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಗಿಲ್ ಗಿಂತ ಮಯಾಂಕ್ ಆಯ್ಕೆ ಉತ್ತಮವಾಗಿತ್ತು. ಆದ್ರೆ ಟೀಮ್ ಮ್ಯಾನೇಜ್ ಮೆಂಟ್ ಕರ್ನಾಟಕದ ಆಟಗಾರರನಿಗೆ ಅವಕಾಶ ನೀಡಲಿಲ್ಲ.
ಒಟ್ಟಿನಲ್ಲಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನ ಆಯ್ಕೆಯ ಮಾನದಂಡವೇ ಅರ್ಥವಾಗುತ್ತಿಲ್ಲ. ಶುಬ್ಮನ್ ಗಿಲ್ ಗೆ ಸಾಲು ಸಾಲು ಅವಕಾಶಗಳನ್ನು ನೀಡಲಾಗಿತ್ತು. ಆದ್ರೆ ಮಯಾಂಕ್ ಅಗರ್ ವಾಲ್ ಗೆ ಅಂತಹ ಅವಕಾಶವನ್ನೇ ನೀಡಲಾಗಿಲ್ಲ. ಕಾರಣ ಏನು ಎಂಬುದೇ ಆರ್ಥವಾಗುತ್ತಿಲ್ಲ.

Tags: #saakshatvbcciCricketMayank AgarwalPrithvi ShahShubman GillSportsteam indiatest cricket
ShareTweetSendShare
Join us on:

Related Posts

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

ಸಿದ್ದರಾಮಯ್ಯ ಸರ್ಕಾರಕ್ಕೆ ಗುತ್ತಿಗೆದಾರರ ಶಾಕ್:37000 ಕೋಟಿ ಬಾಕಿ ಪಾವತಿಸದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಬಂದ್ ಗುತ್ತಿಗೆದಾರರ ಸಂಘದ ಖಡಕ್ ಎಚ್ಚರಿಕೆ

by Shwetha
February 16, 2026
0

ಶಿವಮೊಗ್ಗ: ರಾಜ್ಯ ಸರ್ಕಾರವು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಬರೋಬ್ಬರಿ 37,000 ಕೋಟಿ ರೂ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಮಾರ್ಚ್ 5 ರಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram