ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡ ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿದೆ. ಈ ವೇಳೆ ಭಾರತೀಯರು ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ. ಅಲ್ಲದೇ, ಪ್ರದಾನಿ ಮೋದಿ ಅವರನ್ನು ತಂಡ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಪ್ರಧಾನಿ ಶುಭ ಹಾರೈಸಿ, ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
ಬಾರ್ಬಡೋಸ್ ನಿಂದ ಗುರುವಾರ ಬೆಳಿಗ್ಗೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಇದ್ದರು.
ಈ ಸಂದರ್ಭದಲ್ಲಿ ಪ್ರಧಾನಿ ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಭಾರತ ತಂಡದ ಆಟಗಾರರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಂಬಯಿನಲ್ಲಿ ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ. ಮುಂಬೈನ ನಾರಿಮನ್ ಪಾಯಿಂಟ್ ನಿಂದ ಈ ವಿಜಯಯಾತ್ರೆ ಆರಂಭವಾಗಿ ವಾಂಖೆಡೆ ಸ್ಟೇಡಿಯಂವರೆಗೂ ತಲುಪಲಿದೆ. ಈ ಸಂದರ್ಭದಲ್ಲಿ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನವನ್ನು ಬಿಸಿಸಿಐ ಹಸ್ತಾಂತರಿಸಲಿದೆ.