ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Teamindia- 2026: 💥 ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

admin by admin
July 12, 2026
in Newsbeat, Sports
gambir and chapel

gambir and chapel

Share on FacebookShare on TwitterShare on WhatsappShare on Telegram

💥 * ಅಂದು ಗ್ರೆಗ್ ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..? 🚨

* ಟೀಮ್ ಇಂಡಿಯಾದ ಭವಿಷ್ಯವನ್ನು ಹಾಳು ಮಾಡುತ್ತಿರುವ ಸ್ಯಾಡಿಸ್ಟ್‍ಗಳು ಯಾರು..? 👿

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

* ಟೀಮ್ ಇಂಡಿಯಾದ ಗರ್ಭಗುಡಿಯಲ್ಲಿ ಯಾವ ಯಾವ ವಿಷಪೂರಿತ ಹಾವುಗಳಿವೆ..? 🐍
=======

ಗೌತಮ್ ಗಂಭೀರ್..!
ಒಬ್ಬ ಆಟಗಾರನಾಗಿ, ದೇಶ, ತಂಡ, ಗೆಲುವಿನ ವಿಚಾರದಲ್ಲಿ ಎಂದೆಂದಿಗೂ ತಲೆಬಾಗುವ ಮನುಷ್ಯನೇ ಅಲ್ಲ. ಆತನ ಮೇಲೆ ಎಷ್ಟೇ ಸಿಟ್ಟು, ಕೋಪವಿದ್ರೂ ಈ ವಿಷ್ಯಗಳನ್ನು ಒಪ್ಪಿಕೊಳ್ಳಲೇಬೇಕು. ಯಾಕಂದ್ರೆ ಗಂಭೀರ್‍ನ ಗಂಭೀರವಾದ ಮಹೋನ್ನತವಾದ ಇನಿಂಗ್ಸ್‍ಗಳನ್ನು ಭಾರತೀಯ ಕ್ರಿಕೆಟ್ ಎಂದಿಗೂ ಮರೆಯೋಕೆ ಸಾಧ್ಯವಿಲ್ಲ.

ಅದು 2007ರ ಚೊಚ್ಚಲ ಟಿ-20 ವಿಶ್ವಕಪ್ ಫೈನಲ್ ಆಗಿರಬಹುದು, .2011 ಏಕದಿನ ವಿಶ್ವಕಪ್‍ನ ಫೈನಲ್ ಪಂದ್ಯವೇ ಆಗಿರಬಹುದು. ಟೀಮ್ ಇಂಡಿಯಾದ ಗೆಲುವಿನ ಯಶಸ್ಸಿನಲ್ಲಿ ಗಂಭೀರ್ ಕೊಡುಗೆ ಅನನ್ಯ. ಮುಖದಲ್ಲಿ ಕೆಂಡಕಾರುತ್ತಲೇ ಆಡುವ, ಆ ಹೋರಾಟದ ಮನೋಭಾವನೆಯ ಬಗ್ಗೆ ಎರಡು ಮಾತಿಲ್ಲ. .

ಟೀಮ್ ಇಂಡಿಯಾದ ಮಾರ್ಗದರ್ಶಕನೋ..? ಸರ್ವಾಧಿಕಾರಿಯೋ..?

ಒಬ್ಬ ತರಬೇತುದಾರನಾಗಿ ಗೌತಮ್ ಗಂಭೀರ್ ಸಂಪೂರ್ಣ ವಿಫಲರಾಗಿದ್ದಾರೆ. ಅದೇ ಸಿಡುಕು ಮುಖ. ಹಠಮಾರಿ ವರ್ತನೆ. ತಪ್ಪುಗಳನ್ನು ಒಪ್ಪಿಕೊಳ್ಳದ ಮನಸ್ಥಿತಿ, ಅಹಂಕಾರದ ಮಾತುಗಳು. ಆಟಗಾರರ ಜೊತೆಗೆ ಅಂತರ ಕಾಯ್ದುಕೊಳ್ಳುವುದು. ಒಂದು ರೀತಿಯಲ್ಲಿ ಸರ್ವಾಧಿಕಾರಿ ಧೋರಣೆ. ಹೀಗಾಗಿ ಟೀಮ್ ಇಂಡಿಯಾದ ಡ್ರೆಸಿಂಗ್ ರೂಮ್‍ನಲ್ಲಿ ಹಿತವಾದ ವಾತಾವರಣವಿಲ್ಲ. ಮನೆಯೊಂದು ಮೂರು ಬಾಗಿಲು ಅಲ್ಲ ಹಲವು ಬಾಗಿಲುಗಳಾಗಿವೆ..!

ಚಾಪೆಲ್ ನಂತ್ರ ಟೀಮ್ ಇಂಡಿಯಾದ ಸ್ಯಾಡಿಸ್ಟ್ ಕೋಚ್ ಗಂಭೀರ್..?
ಮೂರು ಪ್ರತಿಷ್ಠಿತ ಪ್ರಶಸ್ತಿ ಗೆದ್ರೂ, ಕಳೆದ 20 ವರ್ಷಗಳಲ್ಲಿ ಟೀಮ್ ಇಂಡಿಯಾ ಕಂಡ ಅತ್ಯಂತ ಸ್ಯಾಡಿಸ್ಟ್ ಹೆಡ್ ಕೋಚ್ ಎಂಬ ಕುಖ್ಯಾತಿ ಗಂಭೀರ್ ಹೆಸರಿಗೆ ಅಂಟಿಕೊಳ್ಳುತ್ತಿದೆ. ನಿಜ, ಗಂಭೀರ್ ಮಾರ್ಗದರ್ಶನದಲ್ಲಿ 2025ರ ಏಷ್ಯಾಕಪ್, 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ, 2026ರ ಟಿ-20 ವಿಶ್ವಕಪ್ ಟೂರ್ನಿಗಳನ್ನು ಗೆದ್ದಿರಬಹುದು.

ಆದ್ರೆ ಗಂಭೀರ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ಇಲ್ಲಿವಯರೆಗೆ ಗೆದ್ದಿರುವುದಕ್ಕಿಂತ ಸೋತಿರುವುದೇ ಹೆಚ್ಚು. ಆದ್ರೂ ಸೋಲುಗಳನ್ನು ಒಪ್ಪಿಕೊಳ್ಳಲು ಕೂಡ ರೆಡಿ ಇಲ್ಲ. ಪ್ರತಿಯೊಂದಕ್ಕೆ ಸಮರ್ಥನೆಗಳು ಇದ್ದೇ ಇರುತ್ತವೆ. ಹಾಗಂತ ಸಮರ್ಥನೆ ಕೊಡುವುದು ತಪ್ಪು ಅಂತ ಹೇಳುತ್ತಿಲ್ಲ. ಎಲ್ಲದಕ್ಕೂ ಇತಿಮಿಗಳಿರುತ್ತವೆ ಅಲ್ವಾ.?

ಗಂಭೀರ್‍ನ ಗಂಭೀರ ಸರಣಿಗಳು ಸೋಲುಗಳು..! 🤬

ಅದರಲ್ಲೂ ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಗಳಲ್ಲಿ ವೈಟ್‍ವಾಶ್, 27 ವರ್ಷಗಳ ನಂತರ ಲಂಕಾದಲ್ಲಿ ಏಕದಿನ ಸರಣಿಯ ಸೋಲುಗಳನ್ನು ಒಂದು ಹಂತದಲ್ಲಿ ಅಭಿಮಾನಿಗಳು ಸಹಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ನಡೆದ ಐರ್ಲೆಂಡ್ ಮತ್ತು ಇಂಗ್ಲೆಂಡ್‍ನಲ್ಲಿ ಮಹಾ ಮಂಗಳಾರತಿ ಮಾಡಿಕೊಂಡಿರುವುದನ್ನು ಅಭಿಮಾನಿಗಳು ಖಂಡಿತವಾಗಿಯೂ ಸಹಿಸಿಕೊಳ್ಳುತ್ತಿಲ್ಲ. ಇಲ್ಲಿ ಮುಖ್ಯವಾಗಿ ಸೋಲು – ಗೆಲುವಿನ ಪ್ರಶ್ನೆ ಬರಲ್ಲ. ಇಲ್ಲಿ ಗಂಭೀರ್ ಆಟಗಾರರನ್ನು ನಡೆಸಿಕೊಳ್ಳುತ್ತಿರುವ ರೀತಿ, ವರ್ಕ್‍ಔಟ್ ಆಗದ ಗೇಮ್ ಪ್ಲಾನ್‍ಗಳು, ಅರ್ಥವಾಗದ ಪ್ರಯೋಗಗಳು, ಹೊಂದಾಣಿಕೆಯ ಕೊರತೆ, ಟೀಮ್ ಇಂಡಿಯಾದ ಹಿನ್ನಡೆಗೆ ಪ್ರಮುಖ ಕಾರಣಗಳಾಗಿವೆ.

ಗ್ರೆಗ್ ಚಾಪೆಲ್ ತಂತ್ರದ ಹಾದಿಯಲ್ಲಿ ಗೌತಮ್ ಗಂಭೀರ್..?

ಗಂಭೀರ್ ಬಲಿಷ್ಠ ಟೀಮ್ ಇಂಡಿಯಾವನ್ನು ದುರ್ಬಲ ಟೀಮ್ ಇಂಡಿಯಾ ಮಾಡುತ್ತಿದ್ದಾರೆ ಎಂಬ ಆರೋಪಗಳು ಜೋರಾಗಿ ಕೇಳಿಬರುತ್ತಿವೆ. ಈ ಹಿಂದೆ ಗ್ರೆಗ್ ಚಾಪೆಲ್ ಕೂಡ ಮಾಡಿದ್ದು ಇದನ್ನೇ. ದ್ರಾವಿಡ್‍ನನ್ನು ಮುಂದಿಟ್ಟುಕೊಂಡು, ಗಂಗೂಲಿ ಮತ್ತು ಸಚಿನ್‍ಗೆ ಸೈಡ್ ಲೈನ್ ಮಾಡಿದ್ದರು. ಹಾಗೇ ಇವತ್ತು, ಗಂಭೀರ್, ಗಿಲ್, ಸ್ಕೈ, ಅಯ್ಯರ್‍ನನ್ನು ಮಂದಿಟ್ಟುಕೊಂಡು ರೋಹಿತ್ ಮತ್ತು ವಿರಾಟ್ ರನ್ನು ಈಗಾಗಲೇ ಟೆಸ್ಟ್ ತಂಡದಿಂದ ಹೊರದಬ್ಬಿದ್ದಾರೆ. ಇದೀಗ ಏಕದಿನ ತಂಡದಿಂದಲೂ ಹೊರಹಾಕುವ ಲೆಕ್ಕಚಾರದಲ್ಲಿದ್ದಾರೆ.

ಅಂದು ಚಾಪೆಲ್ ರಿಂಗ್ ಮಾಸ್ಟರ್..! ಇಂದು ಗಂಭೀರ್ ಡಿಕ್ಟೇಟರ್..?

ಮೇಲ್ನೋಟಕ್ಕೆ ಚಾಪೆಲ್ ಮತ್ತು ಗಂಭೀರ್ ನಡೆಯನ್ನು ಗಮನಿಸಿದಾಗ ಒಂದೇ ನಾಣ್ಯದ ಎರಡು ಮುಖಗಳ ಹಾಗೆ ಕಾಣುತ್ತಿದೆ.
ಈ ಹಿಂದೆ ಗ್ರೆಗ್ ಚಾಪೆಲ್ ಟೀಮ್ ಇಂಡಿಯಾವನ್ನು 2007ರ ವಿಶ್ವಕಪ್‍ನಲ್ಲಿ ಮಣ್ಣುಮುಕ್ಕಿಸಿದ್ರು. ಹಿರಿಯ ಆಟಗಾರರೊಂದಿಗೆ ಭಿನ್ನಾಭಿಪ್ರಾಯ, ಅನಗತ್ಯ ಪ್ರಯೋಗಗಳನ್ನು ಮಾಡಿದ್ರು. ಹೀಗಾಗಿ ಟೀಮ್ ಇಂಡಿಯಾ ಸೋತಾಗ ಕುಪಿತಗೊಂಡ ಅಭಿಮಾನಿಗಳು ಟೀಮ್ ಇಂಡಿಯಾ ಆಟಗಾರರ ಫೋಟೋಗಳಿಗೆ ಬೆಂಕಿ ಹಾಕಿದ್ರು. ಆಟಗಾರರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ರು. ಇದು ಮರೆತು ಹೋಗಿದ್ರೂ ಮತ್ತೆ ಮತ್ತೆ ನೆನಪಾಗಿ ಆತಂಕವೂ ಮೂಡುತ್ತಿದೆ. ಯಾಕಂದ್ರೆ, ಟೀಮ್ ಮ್ ಇಂಡಿಯಾದ ಸದ್ಯದ ಪರಿಸ್ಥಿತಿಯೂ ಅದೇ ರೀತಿ ಇದೆ.

ದೊಡ್ಡಣ್ಣ ಬಿಸಿಸಿಐ ಯಾಕೆ ಮೌನಕ್ಕೆ ಶರಣಾಗಿದೆ..? 🤫

ಹೌದು, ಸೋತ್ರೂ ಗೆದ್ರೂ ಟೀಮ್ ಇಂಡಿಯಾ ಎಂಬ ಬ್ರ್ಯಾಂಡ್ ಬಿಸಿಸಿಯನ್ನು ಭ್ರಮೆಯಲ್ಲಿ ತೇಲಾಡುವಂತೆ ಮಾಡಿದೆ. ಏನು ಮಾಡಿದ್ರೂ ನಡೆಯುತ್ತೆ ಎಂಬ ಧೋರಣೆಯಲ್ಲಿದೆ. ಟೀಮ್ ಇಂಡಿಯಾದ ಭವಿಷ್ಯವನ್ನು ಅಜಿತ್ ಅಗರ್ಕರ್ ಮತ್ತು ಗಂಭೀರ್ ಕೈಗೆ ಕೊಟ್ಟು, ದುಡ್ಡು ಮಾಡುವುದು ಹೇಗೆ ಎಂಬ ಯೋಚನೆಯಲ್ಲೇ ಇದೆ. ಬಿಸಿಸಿಐ ಅಧ್ಯಕ್ಷ ಮಿಥುನ್ ಮನ್ಹಾಸ್ ಟೀಮ್ ಇಂಡಿಯಾದ ಇತ್ತೀಚಿನ ಕಳಪೆ ಪ್ರದರ್ಶನಗಳ ಬಗ್ಗೆ ಮೌನಕ್ಕೆ ಶರಣಾಗಿರುವುದು ಅಚ್ಚರಿಯನ್ನುಂಟು ಮಾಡುತ್ತಿದೆ.

ಮೇಜರ್ ಆಪರೇಷನ್ ಟೀಮ್ ಇಂಡಿಯಾ ಆಗಬೇಕಾ..? ಬೇಡ್ವಾ..?

ಒಟ್ಟಿನಲ್ಲಿ ಟೀಮ್ ಇಂಡಿಯಾದಲ್ಲಿ ಮೇಜರ್ ಆಪರೇಷನ್ ಆಗಲೇಬೇಕಿದೆ. ಟೀಮ್ ಇಂಡಿಯಾವನ್ನು ಹಾಳು ಮಾಡುತ್ತಿರುವ ಕೀಟಾಣುಗಳನ್ನು ಹೊರ ಹಾಕಲೇಬೇಕು. ತಂಡದಲ್ಲಿರುವ ವಿಷಪೂರಿತ ಹಾವುಗಳ ವಿಷ ತೆಗೆಯಲು ಮತ್ತೆ ದೇಸಿ ನೆಲಕ್ಕೆ ಬಿಡಬೇಕು. ಇಲ್ಲ ಅಂದ್ರೆ 2007ರ ಪರಿಸ್ಥಿತಿ ಮತ್ತೆ ಪುನಾರಾವರ್ತನೆಯಾಗುವುದು ಖಚಿತ..!

ಟೀಮ್ ಇಂಡಿಯಾದಲ್ಲಿ ಬದಲಾವಣೆ ಬೇಕಾ..? ಬೇಡ್ವಾ..?🤔
ನಿಮ್ಮ ಅಭಿಪ್ರಾಯವೇನು..?👇

ಸನತ್ ರೈ

Tags: #TeamIndia#GautamGambhir#BCCI#IndianCricket#CricketFans#RohitSharma#ViratKohli#ShreyasIyer#CricketUpdates #sanathrai #saakshatv
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram