Telangana-ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ. ಇಬ್ಬರು ಯುವಕರು ಬದುಕಿದ್ದ ನಾಯಿಯ ಕಾಲಿಗೆ ಹಗ್ಗ ಕಟ್ಟಿ ಬೈಕ್ ನಲ್ಲಿ ಎಳೆದೊಯ್ದಿದ್ದಾರೆ. ನಾಯಿ ಮೈಮೇಲೆಲ್ಲ ಗಾಯಗಳಾಗಿ ಪಾರ್ಶ್ವವಾಯುವಿಗೆ ತುತ್ತಾಗಿದೆ.
ನಾಯಿ ಕುಯ್ಯೋಮೊರ್ರೋ ಎಂದು ಬೊಗಳಿತು. ಆದರೂ ಯುವಕರ ಹೃದಯ ಕರಗಲಿಲ್ಲ. ಅಲ್ಲದೆ ಬಹಳ ದೂರ ಎಳೆದಾಡಿದರು. ಈ ಭೀಕರ ಘಟನೆಗೆ ಸಂಬಂಧಿಸಿದ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿವೆ. ಈ ಘಟನೆಯಿಂದ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಕಪ್ರಾಣಿಗೆ ಹಿಂಸೆ ನೀಡಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ . ಪ್ರಕರಣಕ್ಕೆ ಸಂಬಂಧಿಸಿದ್ದ ಇಬ್ಬರು ಯುವಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ಸದಾರೆ. ಗಾಯಗೊಂಡ ನಾಯಿಗೂ ಚಿಕಿತ್ಸೆ ನೀಡಲಾಗಿದೆ.
ಸ್ಟ್ರೇ ಅನಿಮಲ್ ಫೌಂಡೇಶನ್ ಆಫ್ ಇಂಡಿಯಾದ ಸದಸ್ಯರು ಜಿಲ್ಲಾ ಎಸ್ಪಿ, ಜಿಲ್ಲಾಧಿಕಾರಿ ಹಾಗೂ ಪರಿಗಿ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ವಿಷಯ ಬೆಳಕಿಗೆ ಬಂದಿದೆ.
ನಾಯಿ ಬೀದಿಯಲ್ಲಿ ತಿರುಗಾಡುತ್ತಿದ್ದು, ತಮ್ಮ ಮಕ್ಕಳು ಹಾಗೂ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಯುವಕರು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.