ಕೆಲ ದುಷ್ಕರ್ಮಿಗಳು ತೆಲುಗಿನ ಖ್ಯಾತ ನಟ ಮೋಹನ್ ಬಾಬು ಮನೆಗೆ ನುಗ್ಗಿ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ನಿನ್ನೆ ತಡರಾತ್ರಿ ನಾಲ್ವರು ಅಪರಿಚಿತರು ಇನ್ನೋವಾ ಕಾರಿನಲ್ಲಿ ಮೋಹನ್ ಬಾಬು ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ಸಂಬಂಧ ಮೋಹನ್ ಅವರು ಪಹಡಿ ಷರೀಫ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರಾಜಕೀಯ ಹಾಗೂ ನಟನೆ ಎರಡರಲ್ಲೂ ಸಕ್ರಿಯರಾಗಿರುವ ಮೋಹನ್ ಬಾಬು ಅವರಿಗೆ ಕೊಲೆ ಬೆದರಿಕೆ ಯಾವ ಕಾರಣಕ್ಕೆ ಬಂದಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಇನ್ನೂ ತನಿಖೆ ವೇಳೆ ಈ ಕಾರು ವಿಜಯಲಕ್ಷ್ಮಿ ಎಂಬ ಮಹಿಳೆಯ ಹೆಸರಿನಲ್ಲಿ ನೊಂದಣಿಯಾಗಿದ್ದು, ಕಾರಿನ ಸಂಖ್ಯೆ ಂಓ ಂP 31 0004 ಎಂಬುದು ತಿಳಿದುಬಂದಿದೆ. ಮತ್ತೊಂದೆಡೆ ಈ ಬಗ್ಗೆ ನಟನ ಕುಟುಂಬಸ್ಥರು ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸದೇ ಇರುವುದು ಸಾಕಷ್ಟು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. ಅಲ್ಲದೇ ಯಾವ ವಿಚಾರವಾಗಿ ಈ ಕೃತ್ಯ ವೆಸಲಾಗಿದೆ ಎಂಬುದು ಸಂಪೂರ್ಣ ತನಿಖೆಯ ನಂತರವಷ್ಟೇ ಬಹಿರಂಗವಾಗಲಿದೆ. 
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








