ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಸ್ತೆ ಗುಂಡಿ ಖಂಡಿಸಿ ಎಎಪಿಯಿಂದ ಹತ್ತು ದಿನಗಳ ಜನಜಾಗೃತಿ, ಸಹಿ ಸಂಗ್ರಹ

Mahesh M Dhandu by Mahesh M Dhandu
November 18, 2021
in Newsbeat, State, ರಾಜ್ಯ
AAP saaksha tv
Share on FacebookShare on TwitterShare on WhatsappShare on Telegram

ರಸ್ತೆ ಗುಂಡಿ ಖಂಡಿಸಿ ಎಎಪಿಯಿಂದ ಹತ್ತು ದಿನಗಳ ಜನಜಾಗೃತಿ, ಸಹಿ ಸಂಗ್ರಹ

ರಸ್ತೆ ಗುಂಡಿಗಳಿಗೆ ಸಂಬಂಧಿಸಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ವಿರುದ್ಧ ಆಮ್‌ ಆದ್ಮಿ ಪಾರ್ಟಿಯು ನವೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರಿನಾದ್ಯಂತ ಬೃಹತ್‌ ಜನಜಾಗೃತಿ ಅಭಿಯಾನ ಹಾಗೂ ಸಹಿ ಸಂಗ್ರಹಣಾ ಚಳವಳಿ ಹಮ್ಮಿಕೊಂಡಿದೆ.

Related posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

August 14, 2026
shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷರಾದ ಮೋಹನ್‌ ದಾಸರಿ, “ರಸ್ತೆಗುಂಡಿ ಮುಕ್ತ ಬೆಂಗಳೂರು ನಿರ್ಮಾಣವು ಆಮ್‌ ಆದ್ಮಿ ಪಾರ್ಟಿಯ ಗುರಿಯಾಗಿದೆ.

ಇದಕ್ಕಾಗಿ ನ. 21ರ ಭಾನುವಾರ ಬೆಳಗ್ಗೆ 11 ಗಂಟೆಗೆ ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದ ಹತ್ತಿರವಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅಭಿಯಾನವನ್ನು ಆರಂಭಿಸುತ್ತೇವೆ.

ತೆರೆದ ವಾಹನದ ಮೂಲಕ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿಯ ಭ್ರಷ್ಟಾಚಾರವನ್ನು ಬೆಂಗಳೂರಿನ ಮೂಲೆಮೂಲೆಗೆ ತಲುಪಿಸುತ್ತೇವೆ.

ಹತ್ತು ದಿನಗಳಲ್ಲಿ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಜನಜಾಗೃತಿ ಮಾಡಿ, ಲಕ್ಷಾಂತರ ಬೆಂಗಳೂರಿಗರ ಸಹಿ ಸಂಗ್ರಹ ಮಾಡುತ್ತೇವೆ” ಎಂದು ತಿಳಿಸಿದರು.

ವಾಹನಗಳ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡು ರಸ್ತೆಯ ಗುಣಮಟ್ಟವನ್ನು ನಿರ್ಧರಿಸಬೇಕು. ಆದರೆ ಇಲಾಖೆಗಳು ಈ ನಿಯಮವನ್ನು ಅನುಸರಿಸುತ್ತಿಲ್ಲ.

AAP saaksha tv

ರಸ್ತೆಯ ಎಲ್ಲ ಪದರಗಳನ್ನು ಗುಣಮಟ್ಟದ ಸಾಮಗ್ರಿ ಬಳಸಿ ನಿರ್ಮಿಸಬೇಕು. ಆದರೆ ಗುಣಮಟ್ಟದ ಸಾಮಗ್ರಿಗೆ ಖರ್ಚಾಗಬೇಕಾದ ಹಣವನ್ನು ಗುತ್ತಿಗೆದಾರರು ಲಪಟಾಯಿಸುತ್ತಿದ್ದಾರೆ.

ಅದರಲ್ಲಿ ಎಂಜಿನಿಯರ್‌ಗಳು, ಕಾರ್ಪೊರೇಟರ್‌ ಹಾಗೂ ಶಾಸಕರಿಗೆ ಪಾಲು ಸಿಗುತ್ತಿದೆ.

ತಮಿಳುನಾಡು ಹಾಗೂ ಆಂಧ್ರದ ರಸ್ತೆಗಳು ಕರ್ನಾಟಕದ ರಸ್ತೆಗಳಿಗಿಂತಲೂ ಚೆನ್ನಾಗಿರಲು ಕಾರಣವೇನೆಂದು ನಾವು ಯೋಚಿಸಬೇಕು.

ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಎಂದೂ ಅಲ್ಲಿ ಆಡಳಿತ ಮಾಡಿಲ್ಲದಿರುವುದೇ ಇದಕ್ಕೆ ಕಾರಣ. ಹಡ್ಸನ್‌ ಸರ್ಕಲ್‌ ಮತ್ತು ಕಾವೇರಿ ಭವನದ ನಡುವಿನ ರಸ್ತೆಯನ್ನು ಗಮನಿಸಿ.

ಕಡಿಮೆ ಭ್ರಷ್ಟಾಚಾರ ಮಾಡುವವರು ಅದನ್ನು ನಿರ್ಮಿಸಿದ್ದಾರೆ ಎಂಬ ಮಾಹಿತಿ ನಮಗಿದೆ. ಆದ್ದರಿಂದ ಅಲ್ಲಿ ಗುಂಡಿಗಳು ಕಡಿಮೆಯಿದೆ ಎಂದು ಮೋಹನ್‌ ದಾಸರಿ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್‌ ವಿ. ಸದಂರವರು ಮಾತನಾಡಿ, “ಬೆಂಗಳೂರಿನ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 20,000 ಕೋಟಿ ರೂಪಾಯಿ ಎಲ್ಲಿ ಮತ್ತು ಹೇಗೆ ಖರ್ಚಾಗಿದೆ ಎಂಬ ವಿವರವನ್ನು ಸರ್ಕಾರ ಬಹಿರಂಗಪಡಿಸಬೇಕು.

ಆ ಹಣವನ್ನು ನುಂಗಿದವರಿಗೆ ಜೈಲು ಶಿಕ್ಷೆ ಆಗಬೇಕು. ರಸ್ತೆಯನ್ನು ಸರಿಪಡಿಸಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಮೂರು ಬೇಡಿಕೆಗಳಾಗಿವೆ.

ರಸ್ತೆ ಗುಂಡಿಗಳಿಗೆ ಸಂಬಂಧಿಸಿ ನಾವು ಈ ಹಿಂದೆ ಮಾಡಿದ್ದ ಪ್ರತಿಭಟನೆಗಳು, ರಸ್ತೆಗುಂಡಿ ಹಬ್ಬ ಎಂಬ ವಿನೂತನ ಅಭಿಯಾನ, ಸೋಶಿಯಲ್‌ ಮೀಡಿಯಾ ಚಳವಳಿಗೆ ಉತ್ತಮ ಜನಬೆಂಬಲ ವ್ಯಕ್ತವಾಗಿದೆ.

ಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ 70ಕ್ಕೂ ಹೆಚ್ಚು ದೂರುಗಳನ್ನು ಪೊಲೀಸ್‌ ಠಾಣೆಯಲ್ಲಿ ದಾಖಲಿಸಿದ್ದೇವೆ, ಈ ಚಳವಳಿಗೆ ಕೂಡ ಹೆಚ್ಚಿನ ಬೆಂಬಲ ಸಿಗುವ ವಿಶ್ವಾಸವಿದೆ” ಎಂದು ಹೇಳಿದರು.

Tags: #Saaksha TVaapbangalorejagadeesh
ShareTweetSendShare
Join us on:

Related Posts

swiggy-99-store-affordable-food-delivery-karnataka-news

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by admin
August 14, 2026
0

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ '99 ಸ್ಟೋರ್'! ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಊಟ ಆರ್ಡರ್...

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram