ಹೊಸದಿಲ್ಲಿ, ಮೇ 14 : ಭಾರತೀಯ ರೈಲ್ವೆಯೂ ಮುಂದಿನ ಸೂಚನೆ ಬರುವವರೆಗೆ ತನ್ನ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆಗಳನ್ನು ಸ್ಥಗಿತಗೊಳಿಸಿದೆ. ಭಾರತ ರೈಲ್ವೆ ಜೂನ್ 30 ರಂದು ಅಥವಾ ಅದಕ್ಕೂ ಮೊದಲು ಪ್ರಯಾಣಿಸಲು ಕಾಯ್ದಿರಿಸಿದ ಎಲ್ಲಾ ಟಿಕೆಟ್ ಗಳನ್ನು ರದ್ದುಪಡಿಸುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಶ್ರಮಿಕ್ ಸ್ಪೆಷಲ್ ಮತ್ತು 30 ವಿಶೇಷ ರೈಲುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪ್ರಯಾಣಿಕ ರೈಲುಗಳ ಸೇವೆಗಳನ್ನು ಸ್ಥಗಿತಗೊಳಿಸಿದ್ದು, ರದ್ದಾದ ರೈಲುಗಳಿಗಾಗಿ ಜೂನ್ 30 ರವರೆಗೆ ಕಾಯ್ದಿರಿಸಿದ ಎಲ್ಲಾ ಟಿಕೆಟ್ ಗಳ ದರವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ರೈಲ್ವೆ ಇಲಾಖೆ ಮಾರ್ಚ್ 22 ರಿಂದ ಪ್ರಯಾಣಿಕರ ರೈಲು ಸೇವೆಗಳನ್ನು ಸ್ಥಗಿತಗೊಳಿಸಿತ್ತು. ವಿಶೇಷ ರೈಲುಗಳಿಗೆ ಮುಂಗಡ ಬುಕಿಂಗ್ ಪ್ರಾರಂಭವಾದಾಗ ಪ್ರಯಾಣಿಕರು ಸೋಮವಾರ 45,000 ಟಿಕೆಟ್ ಗಳನ್ನು ಖರೀದಿಸಿದ್ದರು. ಮುಂಬೈ ಸೆಂಟ್ರಲ್ – ನವದೆಹಲಿ ವಿಶೇಷ ರೈಲಿನ ಮೇ 18ರ ವರೆಗಿನ ಎಲ್ಲಾ ಟಿಕೆಟ್ ಗಳು ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿತ್ತು.
ದೆಹಲಿಯಿಂದ ಭಾರತದ ಪ್ರಮುಖ ನಗರಗಳನ್ನು ಸಂಪರ್ಕಿಸುವ 30 ವಿಶೇಷ ರೈಲುಗಳ ಸೇವೆಗಳನ್ನು ಭಾರತೀಯ ರೈಲ್ವೆ ಆರಂಭಿಸಿದ್ದು, ನವದೆಹಲಿ ನಿಲ್ದಾಣದಿಂದ ದಿಬ್ರುಗ, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ, ರಾಂಚಿ, ಭುವನೇಶ್ವರ, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡ್ಗಾಂವ್, ಮುಂಬೈ ಸೆಂಟ್ರಲ್, ಅಹಮದಾಬಾದ್ ಮತ್ತು ಜಮ್ಮು ಕಾಶ್ಮೀರದ ತನಕ ಸಂಚಾರ ನಡೆಸಲಿದೆ.
ವಿಶೇಷ ರೈಲಿನಲ್ಲಿ ಪ್ರಯಾಣಿಸಲು ಭಾರತೀಯ ರೈಲ್ವೆಯು ಕೆಲವು ಮಾರ್ಗಸೂಚಿಗಳನ್ನು ಸೂಚಿಸಿದ್ದು, ಐ.ಆರ್.ಟಿ.ಸಿ ವೆಬ್ ಸೈಟ್ ಅಥವಾ ಮೊಬೈಲ್ ಆ್ಯಪ್ ಮೂಲಕ ಟಿಕೆಟ್ ಕಾಯ್ದಿರಿಸಬೇಕಾಗುತ್ತದೆ. ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಬೇಕಾಗಿದ್ದು, ಯಾವುದೇ ಪ್ಲಾಟ್ ಫಾರ್ಮ್ ಟಿಕೆಟ್ ಗಳನ್ನು ನೀಡಲಾಗುವುದಿಲ್ಲ. ದೃಢಪಡಿಸಲಾದ ಟಿಕೆಟ್ ಗಳನ್ನು ಹೊಂದಿರುವ ಪ್ರಯಾಣಿಕರಿಗೆ ಮಾತ್ರ ರೈಲ್ವೆ ನಿಲ್ದಾಣಗಳಿಗೆ ಪ್ರವೇಶಿಸಲು ಅವಕಾಶವಿದ್ದು, ಇನ್ನೂ ಹಲವಾರು ನಿಯಮಗಳನ್ನು ಭಾರತೀಯ ರೈಲ್ವೆ ಸೂಚಿಸಿದೆ
ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...








