Terrible accident in Tumkur | ರಾಜ್ಯದಲ್ಲಿ ಭೀಕರ ಅಪಘಾತಕ್ಕೆ 9 ಸಾವು
ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ
ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ಘಟನೆ
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕ್ರೂಸರ್
ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಸಾಧ್ಯತೆ
ತುಮಕೂರು : ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತರಾಗಿರುವ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ನಡೆದಿದೆ.
ಇಂದು ಮುಂಜಾನೆ ನಾಲ್ಕು ಸುಮಾರಿಗೆ ಈ ಘಟನೆ ನಡೆದಿದೆ.
ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಪರಿಣಾಮ 9 ಮಂದಿ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಘಟನೆಯಲ್ಲಿ ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
![Terrible accident in Tumkur saaksha tv](http://saakshatv.com/wp-content/uploads/2022/08/accident-3.jpg)
ಕ್ರೂಸರ್ ವಾಹನದಲ್ಲಿ 20ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಮೃತರನ್ನ ರಾಯಚೂರು ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ.
ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.