ರಾಯ್ಪುರ: ಛತ್ತೀಸ್ ಗಢದಲ್ಲಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿಯೇ ಬಿಜೆಪಿ ನಾಯಕರೊಬ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ.
ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಕೊಲೆಯಾಗಿರುವ ಬಿಜೆಪಿ ನಾಯಕನನ್ನು ರತನ್ ದುಬೆ ಎಂದು ಗುರುತಿಸಲಾಗಿದ್ದು, ಇವರು ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು.
ಛತ್ತೀಸ್ ಗಢದಲ್ಲಿ ನ. 7 ಮತ್ತು 17 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಸದ್ಯ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.