ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ  ಜಯಲಲಿತಾ ಮೇಲಿನ ಹಲ್ಲೆಯ ಘಟನೆ

Shwetha by Shwetha
March 26, 2021
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Thalaivi trailer
Share on FacebookShare on TwitterShare on WhatsappShare on Telegram

ತಲೈವಿ ಟ್ರೈಲರ್ ನಲ್ಲಿದೆ ತಮಿಳುನಾಡು ವಿಧಾನಸಭೆಯಲ್ಲಿ ನಡೆದ  ಜಯಲಲಿತಾ ಮೇಲಿನ ಹಲ್ಲೆಯ ಘಟನೆ

ಕಂಗನಾ ರಣಾವತ್ ಅವರ ಜನ್ಮದಿನ ಮಾರ್ಚ್ 23 ರಂದು ತಲೈವಿ ಟ್ರೈಲರ್  ಬಿಡುಗಡೆಯಾಗಿದೆ. ತಲೈವಿ ತಮಿಳು ಚಿತ್ರ ತಾರೆ ಮತ್ತು ರಾಜಕೀಯ ನಾಯಕಿ ದಿ. ಜೆ.ಜಯಲಲಿತಾ ಅವರ ಜೀವನಚರಿತ್ರೆ. ತಲೈವಿ ಟ್ರೈಲರ್ ತಮಿಳು ನಾಡಿನ ಮುಖ್ಯ ಮಂತ್ರಿಯಾಗಿದ್ದ ಜಯಲಲಿತಾ ಅವರ ಜೀವನದಲ್ಲಿನ ಒಂದು ಮಹತ್ವದ ತಿರುವನ್ನು ತೋರಿಸುತ್ತದೆ. ಇದು ಮಾರ್ಚ್ 1989 ರಲ್ಲಿ   ನಡೆದ ಒಂದು ನೈಜ ಘಟನೆಯನ್ನು ಆಧರಿಸಿದೆ.

Related posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

August 6, 2026
hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026

Thalaivi trailer

ಅಂದು ತಮಿಳುನಾಡು ವಿಧಾನಸಭೆಯಲ್ಲಿ  ಎಐಎಡಿಎಂಕೆ ನಾಯಕಿ ಜಯಲಲಿತಾ ಅವರ ಮೇಲೆ ಡಿಎಂಕೆ ಪಕ್ಷದ ಸದಸ್ಯರು  ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿದೆ.

ಎಐಎಡಿಎಂಕೆ ನಾಯಕಿ ತಮಿಳುನಾಡಿನ ಪ್ರತಿಪಕ್ಷದ ಮೊದಲ ಮಹಿಳಾ ನಾಯಕಿ. ತಮಿಳುನಾಡು ಸಿಎಂ ಬಜೆಟ್ ಮಂಡಿಸುವಾಗ ಪ್ರತಿಪಕ್ಷಗಳು ಪ್ರತಿಭಟಿಸುತ್ತಿದ್ದವು. ಆಗ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದ ಜಯಲಲಿತಾ ಅವರ ಮೇಲೆ ಡಿಎಂಕೆ ಸಚಿವರು ಹಲ್ಲೆ ಮಾಡಿದ್ದರು ಎಂದು ಆರೋಪಿಸಲಾಗಿದೆ.

ನಂತರ ಸಿಮಿ ಗರೆವಾಲ್ ಅವರ ಪ್ರದರ್ಶನ ರೆಂಡೆಜ್ವಸ್ನಲ್ಲಿ ಜಯಲಲಿತಾ,’ ಕರುಣಾನಿಧಿ ಅವರ ಎಲ್ಲಾ ಶಾಸಕರು ಮತ್ತು ಮಂತ್ರಿಗಳು ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು.  ಅವರು ಕುರ್ಚಿ, ಮೈಕ್ಸ್, ಹೀಗೆ ಎಲ್ಲವನ್ನೂ ಹಿಡಿದುಕೊಂಡರು.

Thalaivi trailer

ಸ್ಪೀಕರ್ ಮೇಜಿನ ಮೇಲೆದ್ದ  ಹಿತ್ತಾಳೆ ಗಂಟೆಯಿಂದ  ನನ್ನ ತಲೆಯ ಮೇಲೆ ಹೊಡೆದರು. ಅವರು ನನ್ನ ಕೂದಲನ್ನು ಎಳೆದರು. ನನ್ನ ಮೇಲೆ ಚಪ್ಪಲ್‌ಗಳನ್ನು ಎಸೆದರು, ಕಾಗದಗಳ ದೊಡ್ಡ ಕಟ್ಟುಗಳನ್ನು ಭಾರವಾದ ಪುಸ್ತಕಗಳನ್ನು ನನ್ನ ಮೇಲೆ ಎಸೆದರು.‌ ಅವರಲ್ಲಿ ಒಬ್ಬರು ನನ್ನ ಸೀರೆಯನ್ನು ಎಳೆಯಲು ಸಹ ಪ್ರಯತ್ನಿಸಿದರು.‌ ನನ್ನ ಶಾಸಕರು ನನ್ನನ್ನು ಕಾಪಾಡದೆ ಇರುತ್ತಿದ್ದರೆ ಇಂದು ನಾನು ಜೀವಂತವಾಗಿರುತ್ತಿರಲಿಲ್ಲ. ಕೋಪದಿಂದ ಆ ದಿನ ನಾನು  ಅಸೆಂಬ್ಲಿಯಿಂದ ಕಣ್ಣೀರು ಹಾಕುತ್ತಾ ಹೊರಬಂದೆ . ಜೊತೆಗೆ ಅಂದು ನಾನು ಈ ವ್ಯಕ್ತಿ ಮುಖ್ಯಮಂತ್ರಿಯಾಗಿ ಮುಂದುವರಿಯುವವರೆಗೂ ಅಸೆಂಬ್ಲಿಗೆ ನಾನು ಕಾಲಿಡಲಾರೆ ಮತ್ತು ಮತ್ತೆ ಈ ವಿಧಾನಸಭೆಯನ್ನು ನಾನು ಮುಖ್ಯಮಂತ್ರಿಯಾಗಿ ಪ್ರವೇಶಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದೆ.  ಎರಡು ವರ್ಷಗಳಲ್ಲಿ ನಾನು ನನ್ನ ಪ್ರತಿಜ್ಞೆಯನ್ನು ಪೂರೈಸಿದ್ದೇನೆ’ ಎಂದು ಅವರು ಹೇಳಿದ್ದರು.
ಎಐಎಡಿಎಂಕೆ ನಾಯಕಿ 1991 ರಲ್ಲಿ ಮದ್ರಾಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮೊದಲ ಬಾರಿಗೆ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ತಮಿಳು ಚಿತ್ರ ನಟಿ ಜಯಲಲಿತಾ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಬೆಳೆದ ರೋಚಕ ಕಥೆಯ ತಲೈವಿ ಚಿತ್ರ  ರಾಜಕಾರಣದಲ್ಲಿ ಜಯಲಲಿತಾ ಎದುರಿಸಿದ ಸವಾಲು, ಸಂಕಷ್ಟಗಳ ಹೂರಣವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.

#KanganaRanaut #Thalaivi #Jayalalithaa #tamilnaduassembly

ಕಿತ್ತಳೆ ಹಣ್ಣಿನ ಆರೋಗ್ಯ ಪ್ರಯೋಜನಗಳು ಮತ್ತು ಕಿತ್ತಳೆ ಹಣ್ಣಿನ ಕೆಲವು ಮನೆಮದ್ದುಗಳು https://t.co/n1HMwioq7j

— Saaksha TV (@SaakshaTv) March 20, 2021

ಮನೆಯಲ್ಲೇ ತಯಾರಿಸಿ ವೆನಿಲ್ಲಾ ಐಸ್ ಕ್ರೀಂ https://t.co/EcO1ByfVci

— Saaksha TV (@SaakshaTv) March 20, 2021

ಜೀವನೋಪಾಯಕ್ಕಾಗಿ ಹೂವು, ಪ್ರಸಾದ ಮಾರುತ್ತಿರುವ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹೋದರಿ https://t.co/trMzK8sVSu

— Saaksha TV (@SaakshaTv) March 20, 2021

ಸ್ಯಾಂಡಲ್ ವುಡ್ ನ ಖಳ ಭಯಂಕರನ ಇಬ್ಬರು ಪುತ್ರರತ್ನಗಳ ಸಹೋದರರ ಸವಾಲ್!@TharunSudhir @Kannadacinema24@dasadarshan @SarjaFanshttps://t.co/WksW6tt3n8

— Saaksha TV (@SaakshaTv) March 16, 2021

Tags: JayalalithaaThalaivi trailer
ShareTweetSendShare
Join us on:

Related Posts

devara-maneyalli-deeparadhane-yene-yene-phala

ದೀಪಾರಾಧನೆಯ ರಹಸ್ಯ: ಯಾವ ಎಣ್ಣೆ, ಎಷ್ಟು ಬತ್ತಿ ಹಚ್ಚಿದರೆ ಏನು ಫಲ?

by admin
August 6, 2026
0

1"ಇಪ್ಪೆ ಎಣ್ಣೆ"ಯು ದೇವರಿಗೆ ತುಂಬಾ ತುಂಬಾ ಶ್ರೇಷ್ಠ.. ಇದರಿಂದ ಮನೆಯಲ್ಲಿ ದುಃಖ, ದಾರಿದ್ರ್ಯ, ಬಡತನ, ಧನದರಿದ್ರ , ಅನ್ನದರಿದ್ರ, ನಿತ್ಯದರಿದ್ರ, ಹಾಗೂ ಸಾಲದ ಭಾದೆ ನಿವಾರಣೆಯಾಗುತ್ತದೆ .....

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

ಸಚಿವ ಸ್ಥಾನ ಸಿಗದ ಅಸಮಾಧಾನ; ಶಾಸಕರ ಜೊತೆ ಸಿಎಂ, ಕೆಪಿಸಿಸಿ ಅಧ್ಯಕ್ಷರ ಮಾತುಕತೆ

by Shwetha
August 6, 2026
0

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರು ಅಸಮಾಧಾನಗೊಂಡಿರುವ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಸಚಿವ...

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

ಸಚಿವ ಬಿ. ನಾಗೇಂದ್ರಗೆ ಶಾಕ್; ದೆಹಲಿ ಪ್ರವಾಸಕ್ಕೆ ಅನುಮತಿ ನಿರಾಕರಣೆ

by Shwetha
August 6, 2026
0

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹಿನ್ನಡೆ ನೀಡಿದೆ. ಜುಲೈ 27ರಿಂದ ಆಗಸ್ಟ್ 10ರವರೆಗೆ ದೆಹಲಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram