ಬೆಂಗಳೂರು: ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ.
ಸೋನು ಪಾಸ್ವಾನ್ ಬಂಧಿತ ಆರೋಪಿಯಾಗಿದ್ದಾರೆ. ಆರೋಪಿಯು ರಾಜ್ಯದ ದಾವಣಗೆರೆಯಲ್ಲಿನ ರೈಸ್ ಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ಮೂಲತಃ ಬಿಹಾರ ಮೂಲದವನು ಎನ್ನಲಾಗಿದೆ. ಈತನನ್ನು ಬಂಧಿಸಿ ಬಿಹಾರದ ಪಾಟ್ನಾಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಈತ ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳದಿದ್ದರೆ ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ನಿತೀಶ್ ಕುಮಾರ್ಗೆ ಬೆದರಿಕೆ ಹಾಕಿದ್ದ.
ಬಂಧಿತ ಆರೋಪಿ ಬಿಹಾರದ ಪೊಲೀಸ್ ಮಹಾನಿರ್ದೇಶಕ ಆರ್ಎಸ್ ಭಟ್ಟಿ ಅವರಿಗೆ ವಾಟ್ಸಾಪ್ ಸಂದೇಶ ಮತ್ತು ಆಡಿಯೊ ಕ್ಲಿಪ್ ಕಳುಹಿಸಿದ್ದ. ಬಿಜೆಪಿಯಿಂದ ಬೇರ್ಪಡದಿದ್ದರೆ ಸಿಎಂ ನಿತೀಶ್ ಕುಮಾರ್ ಮತ್ತು ಇತರ ಶಾಸಕರನ್ನು ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಸದ್ಯ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.