ಕಾಂಗ್ರೆಸ್ ಜತೆ ಕೈ ಜೋಡಿಸಿದ್ದೇ ಜೆಡಿಎಸ್ ಸಮಸ್ಯೆಗಳಿಗೆ ಕಾರಣ : ಹೆಚ್ ಡಿಕೆ Congress saaksha tv
ತುಮಕೂರು : ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿದ್ದೇ ನಮ್ಮ ಪಕ್ಷದ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ಕಾಂಗ್ರೆಸ್ ಸಭೆಯಲ್ಲಿ ದಲಿತರು, ಅಲ್ಪಸಂಖ್ಯಾತರು ಒಂದಾಗಬೇಕು ಎಂದು ಕರೆ ನೀಡಿದ್ದಾರೆ. ಜಾತಿ ಹೆಸರಿನಲ್ಲಿ ಚರ್ಚೆ ನಡೆದಿದ್ದು, ಕಾಂಗ್ರೆಸ್ನವರು ಜೈ ಅಹಿಂದ್ ಎಂದು ಘೋಷಣೆ ಕೂಗಲು ಹೊರಟಿದ್ದಾರೆ. ಚುನಾವಣೆಯಲ್ಲಿ ಮತ ಪಡೆಯಲು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅಲ್ಲದೇ ಅವರ ಜೊತೆ ಸರ್ಕಾರ ರಚನೆ ಮಾಡಿದ್ದೇ ನಮ್ಮ ಪಕ್ಷದ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇದೇ ವೇಳೆ ಬಿಟ್ ಕಾಯಿನ್ ಪ್ರಕರಣದ ಕುರಿತು ಮಾತನಾಡಿ, 2016 ರಲ್ಲೇ ಬಿಟ್ ಕಾಯಿನ್ ದಂಧೆ ನಡೆದಿತ್ತು. ಅಂದು ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ, ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.