ಸುದೀರ್ಘ ವಿಚಾರಣೆ ಕಂಡಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿಗೆ ಕ್ಷಣಗಣನೆ ಶುರು
ಲಕ್ನೋ, ಸೆಪ್ಟೆಂಬರ್30: ಇಂದು ವಿಶೇಷ ನ್ಯಾಯಾಲಯ 1992 ರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ನೀಡಲಿದೆ. ಇದರಲ್ಲಿ ಬಿಜೆಪಿ ನಾಯಕರಾದ ಎಲ್ ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಆರೋಪಿಗಳಾಗಿದ್ದಾರೆ.
ಸೆಪ್ಟೆಂಬರ್ 16 ರಂದು ಸಿಬಿಐ ನ್ಯಾಯಾಧೀಶ ಎಸ್.ಕೆ. ಯಾದವ್ ಅವರು ಎಲ್ಲಾ 32 ಆರೋಪಿಗಳು ತೀರ್ಪಿನ ದಿನವಾದ ಸೆಪ್ಟೆಂಬರ್ 30ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದರು.
ಭಾರತೀಯ ಯೋಧರಿಂದ ಎಲ್ಒಸಿ ಉಲ್ಲಂಘನೆ ಎಂದು ಅಪಾದಿಸಿ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಪಾಕ್
ಆರೋಪಿಗಳಲ್ಲಿ ಮಾಜಿ ಉಪ ಪ್ರಧಾನಿ ಅಡ್ವಾಣಿ, ಮಾಜಿ ಕೇಂದ್ರ ಸಚಿವರಾದ ಜೋಶಿ, ಉಮಾ ಭಾರತಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್ ಮತ್ತು ಸಾಧ್ವಿ ರಿಥಂಬರ ಸೇರಿದ್ದಾರೆ.
ಕೊರೋನವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಮಾ ಭಾರತಿ ಮತ್ತು ಕಲ್ಯಾಣ್ ಸಿಂಗ್ ಇಬ್ಬರೂ ಕ್ವಾರಂಟೈನ್ ಗೆ ಒಳಗಾಗಿದ್ದು, ನ್ಯಾಯಾಲಯಕ್ಕೆ ಗೈರು ಹಾಜರಾಗುವ ಸಂಭವ ಹೆಚ್ಚಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಕಲ್ಯಾಣ್ ಸಿಂಗ್ ಅವರನ್ನು ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು. ರಾಮ ಮಂದಿರ ನಿರ್ಮಾಣದ ಉಸ್ತುವಾರಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಕೂಡ ಆರೋಪಿಗಳ ಪಟ್ಟಿಯಲ್ಲಿದ್ದಾರೆ.
ಡಿಆರ್ಡಿಒ – ರಿಸರ್ಚ್ ಸೆಂಟರ್ ಇಮರತ್ (ಆರ್ಸಿಐ) ನಲ್ಲಿ ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಅಹ್ವಾನ
ಆದರೆ, ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿರುವ ಈ ಪ್ರಕರಣದಲ್ಲಿ 48 ಜನರ ವಿರುದ್ಧ ಆರೋಪಗಳನ್ನು ವಿಧಿಸಲಾಗಿದ್ದರೂ, ಅದರಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ.
ಸುಪ್ರೀಂ ಕೋರ್ಟ್ ಮೊದಲು ಆಗಸ್ಟ್ 31 ಎಂದು ಗಡುವು ಎಂದು ನಿಗದಿಪಡಿಸಿ ನಂತರ ಸಿಬಿಐ ನ್ಯಾಯಾಲಯವು ತನ್ನ ತೀರ್ಪು ನೀಡಲು ಒಂದು ತಿಂಗಳವರೆಗೆ ವಿಸ್ತರಿಸುವುದರೊಂದಿಗೆ, ವಿಚಾರಣಾ ನ್ಯಾಯಾಲಯವು ತನ್ನ ವಿಚಾರಣೆಯನ್ನು ಪ್ರಾರಂಭಿಸಿತು. ಕೇಂದ್ರ ಸಂಸ್ಥೆ 351 ಸಾಕ್ಷಿಗಳು ಮತ್ತು 600 ದಾಖಲೆಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಸುಪ್ರೀಂ ಕೋರ್ಟ್ 2017 ರ ಏಪ್ರಿಲ್ 19 ರಂದು ಆರೋಪದ ವಿಚಾರಣೆಗೆ ಆದೇಶಿಸಿತು ಮತ್ತು ಅದನ್ನು ಎರಡು ವರ್ಷಗಳಲ್ಲಿ ತೀರ್ಮಾನಿಸುವಂತೆ ವಿಶೇಷ ನ್ಯಾಯಾಧೀಶರಿಗೆ ನಿರ್ದೇಶನ ನೀಡಿತ್ತು.
ಅಯೋಧ್ಯೆಯಲ್ಲಿನ ಮಸೀದಿಯನ್ನು ಪುರಾತನ ರಾಮ ಮಂದಿರ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಿಕೊಂಡು ಬಾಬರಿ ಮಸೀದಿಯನ್ನು 1992 ರ ಡಿಸೆಂಬರ್ನಲ್ಲಿ ಕರ ಸೇವಕರು ಧ್ವಂಸ ಮಾಡಿದ್ದರು.
ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು (ಸೆಕ್ಷನ್ 153 ಎ), ರಾಷ್ಟ್ರೀಯ ಏಕೀಕರಣದ ಮೇಲೆ ಪರಿಣಾಮ ಬೀರುವ ಹೇಳಿಕೆಗಳನ್ನು ನೀಡುವುದು (ಸೆಕ್ಷನ್ 153 ಬಿ) ಅಥವಾ ಸಾರ್ವಜನಿಕ ಕಿಡಿಗೇಡಿತನ (ಸೆಕ್ಷನ್ 505) ಸೇರಿದಂತೆ ಭಾರತೀಯ ಅಪರಾಧ ಸಂಹಿತೆ (ಐಪಿಸಿ) ಅಡಿಯಲ್ಲಿ ವಿವಿಧ ಆರೋಪ ಹೊರಿಸಲಾಗಿದೆ.
ಆದರೆ ಆರೋಪಿಗಳು ತಮ್ಮ ತಪ್ಪನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ನಾವು ನಿರಪರಾಧಿಗಳು ಎಂದು ಮನವಿ ಮಾಡಿದ್ದು, ನಮ್ಮನ್ನು ರಾಜಕೀಯ ಆಟಕ್ಕೆ ದಾಳವನ್ನಾಗಿ ಬಳಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಮಹತ್ವದ ತೀರ್ಪಿನಲ್ಲಿ, ಸುಪ್ರೀಂ ಕೋರ್ಟ್ ಅಯೋಧ್ಯೆಯಲ್ಲಿ ವಿವಾದಿತ ಸ್ಥಳವನ್ನು ರಾಮ ಮಂದಿರ ನಿರ್ಮಾಣಕ್ಕಾಗಿ ಮಂಜೂರು ಮಾಡಿದ್ದರೆ, ಮಸೀದಿಯನ್ನು ನೆಲಸಮಗೊಳಿಸಿರುವುದು ಕಾನೂನಿನ ನಿಯಮದ ಉಲ್ಲಂಘನೆ ಎಂದು ಹೇಳಿದೆ. ಜೊತೆಗೆ ಮಸೀದಿ ನಿರ್ಮಿಸಲು ನಗರದಲ್ಲಿ ಐದು ಎಕರೆಗಳ ಪರ್ಯಾಯ ಸ್ಥಳವನ್ನು ಹಸ್ತಾಂತರಿಸಲು ಕೇಂದ್ರಕ್ಕೆ ಸೂಚಿಸಿತ್ತು.
ವಾಟ್ಸಾಪ್ ಚಾಟ್ ಸೋರಿಕೆಯನ್ನು ಹೇಗೆ ತಪ್ಪಿಸುವುದು – ಇಲ್ಲಿದೆ ಮಾಹಿತಿ
ಈಗಾಗಲೇ ಮಸೀದಿ ನಿರ್ಮಿಸಲು ನಗರದಲ್ಲಿ ಐದು ಎಕರೆಗಳ ಪರ್ಯಾಯ ಸ್ಥಳವನ್ನು ಗುರುತಿಸಲಾಗಿದೆ.
ಆಗಸ್ಟ್ 5ರಂದು ಅಯೋಧ್ಯೆಯ ರಾಮಜನ್ಮಭೂಮಿ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿದ್ದು, ಮಂದಿರ ನಿರ್ಮಾಣ ಕಾರ್ಯವೂ ಪ್ರಾರಂಭವಾಗಿದೆ.
ಸುದೀರ್ಘ ವಿಚಾರಣೆ ಕಂಡಿರುವ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಬಹುನಿರೀಕ್ಷಿತ ತೀರ್ಪು ಇಂದು ಪ್ರಕಟವಾಗಲಿದ್ದು, ಕ್ಷಣಗಣನೆ ಪ್ರಾರಂಭವಾಗಿದೆ.
ವೀಳ್ಯದೆಲೆಗಳ 6 ಬೆರಗುಗೊಳಿಸುವ ಆರೋಗ್ಯ ಪ್ರಯೋಜನಗಳು
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ