ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮತ್ತೆ ಟೀಮ್ ಇಂಡಿಯಾ ಮನೆಯೊಂದು ಮೂರು ಬಾಗಿಲು ಆಗುತ್ತಿದೆಯಾ..?

admin by admin
July 8, 2021
in Newsbeat, Sports, ಕ್ರೀಡೆ
team india saakshatv
Share on FacebookShare on TwitterShare on WhatsappShare on Telegram

ಮತ್ತೆ ಟೀಮ್ ಇಂಡಿಯಾ ಮನೆಯೊಂದು ಮೂರು ಬಾಗಿಲು ಆಗುತ್ತಿದೆಯಾ..?

chethan sharma team india selection comitee saakshatvಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಮನವಿಗೆ ಆಯ್ಕೆ ಸಮಿತಿ ಸ್ಪಂದಿಸಿಲ್ಲ. ಹೀಗಾಗಿ ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಇಂಗ್ಲೆಂಡ್ ನಲ್ಲಿ ಟೀಮ್ ಇಂಡಿಯಾವನ್ನು ಸೇರಿಕೊಳ್ಳುತ್ತಿಲ್ಲ.
ಮುಖ್ಯವಾಗಿ ಪೃಥ್ವಿ ಶಾ ಅವರನ್ನು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಕಳುಹಿಸಿಕೊಡುವಂತೆ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಅವರಿಗೆ ಇ-ಮೇಲ್ ಮೂಲಕ ಮನವಿ ಮಾಡಿಕೊಂಡಿತ್ತು. ಆದ್ರೆ ಚೇತನ್ ಶರ್ಮಾ ಅವರು ಇ-ಮೇಲ್‍ಗೆ ಯಾವುದೇ ರೀತಿಯ ಉತ್ತರ ನೀಡಿರಲಿಲ್ಲ.
ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಮ್ ಇಂಡಿಯಾದಲ್ಲಿ ರೋಹಿತ್ ಶರ್ಮಾ ಜೊತೆ ಇಬ್ಬರು ಆರಂಭಿಕ ಆಟಗಾರರು ಇದ್ದಾರೆ. ಕೆ.ಎಲ್. ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ತಂಡದಲ್ಲಿದ್ದಾರೆ. ಜೊತೆಗೆ ಅಭಿಮನ್ಯು ಈಶ್ವರನ್ ಕೂಡ ಸೇರಿಕೊಂಡಿದ್ದಾರೆ. ಹೀಗಾಗಿ ಆರಂಭಿಕ ಆಟಗಾರರ ಅವಶ್ಯಕತೆ ಇಲ್ಲ ಅನ್ನೋದು ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ಅಭಿಮತವಾಗಿದೆ.
prithvi shaw team india saakshatvಆದ್ರೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಅವರಿಗೆ ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್ ಮೇಲೆ ನಂಬಿಕೆ ಇಲ್ವಾ ಅನ್ನೋ ಪ್ರಶ್ನೆ ಕಾಡುತ್ತಿದೆ. ಹಾಗೇ ಅಭಿಮನ್ಯು ಈಶ್ವರನ್ ಅವರ ಆಯ್ಕೆ ಕೂಡ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ಗೆ ಸಮಾಧಾನ ತಂದಿಲ್ಲ.
ಈ ನಡುವೆ, ಕೆ.ಎಲ್. ರಾಹುಲ್ ಅಥವಾ ಮಯಾಂಕ್ ಅಗರ್ ವಾಲ್ ಪೈಕಿ ಒಬ್ಬರು ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಅದೇ ರೀತಿ ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಫಾರ್ಮ್ ನಲ್ಲಿಲ್ಲ. ಹೀಗಾಗಿ ಅವರ ಜಾಗದಲ್ಲಿ ಮಯಾಂಕ್ ಅಥವಾ ರಾಹುಲ್ ಆಡುವ ಸಾಧ್ಯತೆಗಳು ಕೂಡ ಇವೆ. ಹಾಗಾಗಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಪೃಥ್ವಿ ಶಾಗೆ ನಾಯಕ ವಿರಾಟ್ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಮಣೆ ಕೂಡ ಹಾಕಿರಬಹುದು.
ಇನ್ನೊಂದೆಡೆ ಟೀಮ್ ಇಂಡಿಯಾದ ಆಯ್ಕೆ ಸಮಿತಿಯ ನಿರ್ಧಾರಕ್ಕೆ ಬಿಸಿಸಿಐ ಕೂಡ ಮೌನ ವಹಿಸಿದೆ. ಪೃಥ್ವಿ ಶಾ ಮತ್ತು ದೇವದತ್ ಪಡಿಕ್ಕಲ್ ಅವರು ಶ್ರೀಲಂಕಾ ಸರಣಿಯನ್ನು ಆಡಲಿದ್ದಾರೆ. ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಕೂಡ ಮುಂದಾಗಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್, ಆಯ್ಕೆ ಸಮಿತಿ ಮತ್ತು ಬಿಸಿಸಿಐ ನಡುವೆ ಸಹಮತವಿಲ್ಲ ಎಂಬುದು ಗೊತ್ತಾಗುತ್ತಿದೆ. ತಂಡದ ಆಯ್ಕೆಯ ವಿಚಾರದಲ್ಲಿ ಭಿನ್ನಸ್ವರಗಳು ಕೇಳಿಬರುತ್ತಿವೆ. ಈ ಹಿಂದೆ ಸುನೀಲ್ ಜೋಶಿ, ಎಮ್.ಎಸ್.ಕೆ. ಪ್ರಸಾದ್ ಸೇರಿದಂತೆ ಕಳೆದ ಹತ್ತು ವರ್ಷಗಳಿಂದ ಟೀಮ್ ಇಂಡಿಯಾದ ಆಯ್ಕೆ ವಿಚಾರದಲ್ಲಿ ಅಷ್ಟೊಂದು ಗೊಂದಲಗಳು ಇರಲಿಲ್ಲ. ಕೆಲವೊಂದು ಬಾರಿ ಕಠಿಣ ನಿರ್ಧಾರವನ್ನು ಆಯ್ಕೆ ಸಮಿತಿಯು ತೆಗೆದುಕೊಂಡಿದ್ರೂ bcci team india saakshatvಅದರ ವಿರುದ್ಧ ಬಹಿರಂಗವಾಗಿ ಎಲ್ಲೂ ಕೂಡ ಭಿನ್ನ ಮಾತುಗಳು ಕೇಳಿಬಂದಿರಲಿಲ್ಲ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಬಲಿಷ್ಠ ತಂಡವಾಗಿ ರೂಪುಗೊಂಡಿದೆ. ಸಾಕಷ್ಟು ಯುವ ಆಟಗಾರರು ತಂಡವನ್ನು ಸೇರಿಕೊಳ್ಳಲು ಸ್ಪರ್ಧೆ ನಡೆಸುತ್ತಿದ್ದಾರೆ. ಅಂತಹುದ್ದರಲ್ಲಿ ಆಯ್ಕೆ ಸಮಿತಿ, ಬಿಸಿಸಿಐ ಮತ್ತು ಟೀಮ್ ಮ್ಯಾನೇಜ್ ಮೆಂಟ್ ಈ ರೀತಿ ಕಿತ್ತಾಟ ನಡೆಸುತ್ತಿರುವುದು ಸರಿಯಲ್ಲ ಅನ್ನೋದು ಕ್ರಿಕೆಟ್ ಅಭಿಮಾನಿಗಳ ಅಭಿಮತವಾಗಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026
Tags: #Prithvi Shawbccichethan sharmadevdautt padikkalEnglandICCRavishastriSourav Gangulyteam indiateam india selectiontest cricketvirat kohli
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram