ದೇವನಹಳ್ಳಿ: ಬಾಲಕಿಯೊಬ್ಬಳು ಕೊಲೆಯದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಯೇ ಈ ಘಟನೆ ನಡೆದಿದೆ.
ಮೇಲ್ಜಾತಿಯ ಯುವಕ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಬಾಲಕಿ 20 ದಿನಗಳ ಹಿಂದೆ ಶಾಲೆಗೆ ಹೋಗುತ್ತಿದ್ದ ವೇಳೆ ನಿತಿನ್ ಎಂಬ ವ್ಯಕ್ತಿ ಚುಡಾಯಿಸಿದ ಎನ್ನಲಾಗಿದ್ದು, ಆಗ ಅದನ್ನು ಪ್ರಸ್ನಿಸಿದ್ದ, ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರಾಜಿ ಪಂಚಾಯ್ತಿ ನಡೆದಿತ್ತು.
ಆದರೆ, ನಂತರ ಮೂರು ದಿನಗಳ ಬಳಿಕ ಬಾಲಕಿ ನಾಪತ್ತೆಯಾಗಿದ್ದಾಳೆ. ಕುರಿಗಾಹಿಯೊಬ್ಬರು ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಲಕಿಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಬಾಲಕಿಯಿಂದ ಅವಮಾನವಾಯಿತು ಎಂದು ನಿತಿನ್ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆಯ ನಂತರ ಆರೋಪಿ ಗ್ರಾಮದಲ್ಲಿಯೇ ಓಡಾಡಿಕೊಂಡಿದ್ದು, ವಿಚಾರ ಬಯಲಿಗೆ ಬರುತ್ತಿದ್ದಂತೆ ಕತ್ತು ಕೊಯ್ದುಕೊಂಡಿದ್ದಾನೆ. ಸದ್ಯ ಆತ ಕೊಲೆ ಮಾಡಿ ನಾಟಕ ಮಾಡುತ್ತಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.