ಉಪಚುನಾವಣೆ ಫಲಿತಾಂಶ, ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಅಲ್ಲ : ಸಿಎಂ
ಹುಬ್ಬಳ್ಳಿ : ಉಪಚುನಾವಣೆ ಫಲಿತಾಂಶ, ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶ, ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿ ಅಲ್ಲ.
ಹಾನಗಲ್ ನಲ್ಲಿ ಸಿಎಂ ಉದಾಸಿ ಅವರ ಮತಗಳನ್ನು ಕ್ರೂಢೀಕರಿಸಲು ಸಾಧ್ಯವಾಗದಿದ್ದರಿಂದ, ತಮ್ಮ ಪಕ್ಷಕ್ಕೆ ಸೋಲಾಗಿದೆ.
ತಮ್ಮ ನೇತೃತ್ವದಲ್ಲೇ ಚುನಾವಣೆ ನಡೆದಿದ್ದರೂ, ಸೋಲಿನ ಹೊಣೆ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದರು.
ಇನ್ನು ಬಿಟ್ ಕಾಯಿನ್ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಟ್ ಕಾಯಿನ್ ವಿಷಯದಲ್ಲಿ ಆರೋಪಿಯನ್ನು ಬಂಧಿಸಿದ್ದು, ತನಿಖೆ ಮಾಡಿ, ಮೂರು ಪ್ರಕರಣಗಳನ್ನು ದಾಖಲಿಸಿದ್ದು ತಮ್ಮ ಸರ್ಕಾರ.
ಪ್ರಕರಣದಲ್ಲಿ ಅಂತಾರಾಷ್ಟ್ರೀಯ ವಹಿವಾಟು ಇರುವುದರಿಂದ, ಜಾರಿ ನಿರ್ದೇಶನಾಲಯ ಮತ್ತು ಸಿಬಿಐನ ಇಂಟರ್ ಪೋಲ್ ಗೆ ಮಾಹಿತಿ ನೀಡಲಾಗಿದೆ ಎಂದರು.
ಮುಂದಿನ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಇದೇ 8ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಅಲ್ಲಿ ಅಧಿವೇಶನದ ದಿನಾಂಕವನ್ನು ನಿರ್ಧರಿಸುವುದಾಗಿ ಹೇಳಿದರು.