ಸಂಸತ್ ಮುಂಗಾರು ಅಧಿವೇಶನ ಜುಲೈ 20 ರಂದು ಪ್ರಾರಂಭವಾಗಲಿದ್ದು, ಕೇಂದ್ರ ಸರ್ಕಾರ ಇಂದು ಸರ್ವಪಕ್ಷ ಸಭೆ ಕರೆದಿದೆ.
ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ರೂಢಿಯಲ್ಲಿರುವಂತೆ ಸರ್ವಪಕ್ಷ ಸಭೆಯಲ್ಲಿ ಮುಂಗಾರು ಅಧಿವೇಶನಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಧಿವೇಶನದಲ್ಲಿ ಸುಗಮ ಕಲಾಪಕ್ಕೆ ಕೇಂದ್ರ ಸರ್ಕಾರ, ಪ್ರತಿಪಕ್ಷಗಳ ಸಹಕಾರ ಕೋರುವ ಸಾಧ್ಯತೆ ಇದೆ. ಆದರೆ, ಮಣಿಪುರ ಹಿಂಸಾಚಾರ, ದೆಹಲಿ ಸುಗ್ರೀವಾಜ್ಞೆ ಮತ್ತು ಇತರ ಹಲವು ವಿಷಯಗಳ ಕುರಿತು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಕರೆದಿದ್ದ ಇದೇ ರೀತಿಯ ಸರ್ವಪಕ್ಷ ಸಭೆಯನ್ನು, ಹಲವು ಪಕ್ಷಗಳ ನಾಯಕರು ಲಭ್ಯವಿಲ್ಲದ ಕಾರಣ ಮುಂದೂಡಲಾಗಿದೆ.