ಕೊರೊನಾ ಸಂಬಂಧ 5 ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದ ಕೇಂದ್ರ ಸರಕಾರ
ನವದೆಹಲಿ: ದೇಶದಲ್ಲಿ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಐದು ರಾಜ್ಯಗಳು ಮುನ್ನಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ.
ಹರಿಯಾಣ, ಉತ್ತರ ಪ್ರದೇಶ, ದೆಹಲಿ, ಮಿಜೋರಾಂ ಮತ್ತು ಮಹರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಸಂಬಂಧ ರಾಜೇಶ್ ಭೂಷಣ್ ಅವರು 5 ರಾಜ್ಯ ಸರಕಾರಗಳಿಗೆ ಪತ್ರ ಬರೆದು ಟೆಸ್ಟ್, ಟ್ರ್ಯಾಕ್, ಟ್ರೀಟ್ ಮೆಂಟ್, ವ್ಯಕ್ಸಿನೇಷನ್ ಹೆಚಿಸುವಂತೆ ಸಲಹೆ ನೀಡಿದ್ದಾರೆ.
ಅಲ್ಲದೇ ಜಿನೋಮಿಕ್ ಸೀಕ್ವೆನ್ಸಿಂಗ್ ಹೆಚ್ಚಿಸಿ, ಹೆಚ್ಚು ಜನರು ಗುಂಪು ಸೇರದಂತೆ ನಿಗಾವಹಿಸಿ, ಕೊರೊನಾ ಹೆಚ್ಚಳ ಹಿನ್ನಲೆ ಮಾಸ್ಕ ಧರಿಸುವುದನ್ನು ಕಡ್ಡಾಯಗೊಳಿಸಿ, ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಸೋಂಕು ಹರದಂತೆ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದದುಕೊಳ್ಳಿ ಎಂದು ಸೂಚಿಸಿದ್ದಾರೆ.
ಇನ್ನೂ ಇನ್ ಫ್ಲುಯೆನಜಾ ಮತ್ತು ಶ್ವಾಸಕೋಶದ ಸೋಂಕು ಪ್ರಕಣಗಳನ್ನು ಗುರುತಿಸಿ, ಚಿಕಿತ್ಸೆ ಕೊಡಿಸಬೇಕು. ಹಾಗೇ ವಿದೇಶದಿಂದ ಬರುವ ಪ್ರಯಾಣಿಕರಿಗೆ ಜಿನೊಮಿಕ್ ಸೀಕ್ಷೆನ್ಸಿಂಗ್ ಮಾಡಬೇಕು. ಅಗತ್ಯವಿರುವ ಸ್ಥಳಗಳಲ್ಲಿ ಮಾದರಿ ಸಂಗ್ರಹಕ್ಕೆ ವ್ಯವಸ್ಥೆ ಮಾಡಬೇಕು. ಹಾಗೇ ಪ್ರಕರಣ ಬೆಳಕಿಗೆ ಬಂದ ಸ್ಥಳದಲ್ಲಿ ಕ್ಲಸ್ಟರ್ ರೂಪಿಸಬೇಕು ಎಂದು ಸೂಚಿಸಿದ್ದಾರೆ
ಅಲ್ಲದೇ ಎಲ್ಲ ಅರ್ಹ ವಯೋಮಿತಿಯವರಿಗೆ ಲಸಿಕೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಮತ್ತು ಹರಡುವುದು ಮತ್ತು ರೂಪಾಂತರಗೊಳ್ಳುವುದನ್ನು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೊರೊನಾ ಸೋಂಕು ಪತ್ತೆ ಹಚ್ಚಲು ಟೆಸ್ಟಿಂಗ್ ಮತ್ತು ಸರ್ವಲೆನ್ಸ್ ಗೆ ಹೆಚ್ಚಿನ ಆಧ್ಯತೆ ನೀಡಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.