ಹಾಸನ: ನಾಡಿನ ಜನರೆಲ್ಲ ಹಾಸನಾಂಬೆ ದೇವಿಯ ದರ್ಶನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿಯ ದರ್ಶನ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನ ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದಾರೆ.
ರಾಜ್ಯದಲ್ಲಿ ಮಳೆ-ಬೆಳೆ ಉತ್ತಮವಾಗಿದ್ದು ಜನರು ಸುಖದಿಂದ ಜೀವನ ಸಾಗಿಸಲಿ ಎಂದು ದೇವಿಯಲ್ಲಿ ಪ್ರಾರ್ಥಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಮಳೆ ಕೈಕೊಟ್ಟಿದೆ. ಇದರಿಂದಾಗಿ ಜನರು ನೋವು ಅನುಭವಿಸುವಂತಾಗಿದೆ. ಹಲವಾರು ಬೆಳೆಗಳು ಮುಂಗಾರು ಇಲ್ಲದೆ ಹಾನಿಯಾಗಿವೆ. ಹೀಗಾಗಿ ರಾಜ್ಯದಲ್ಲಿ ಉತ್ತಮ ಮಳೆಯಾಗುವಂತೆ ಭಕ್ತಿಯಿಂದ ಪ್ರಾರ್ಥಿಸಿರುವುದಾಗಿ ಹೇಳಿದ್ದಾರೆ.
ಸಿಎಂ ಆಗಮಿಸುವ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಭಾಗವಹಿಸಿದ್ದರು.