ಮೈಸೂರು: ಸಚಿವರು ಪ್ರತಿಯೊಂದು ತಾಲೂಕುಗಳಿಗೆ ತೆರಳಿ ಬರ ಪರಿಸ್ಥಿತಿಯ ಅಧ್ಯಯನ ನಡೆಸಿ ವರದಿ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ಕಾರ ಬರ ಅಭಿವೃದ್ಧಿ ಕಾರ್ಯಗಳಿಗಾಗಿ 900 ಕೋಟಿ ರೂ. ಬಿಡುಗಡೆ ಮಾಡಿದೆ. ಹೀಗಾಗಿ ಪರಿಹಾರ ಕಾರ್ಯಗಳು ಕೂಡ ಆರಂಭವಾಗಿವೆ. ಆದರೆ, ಇದುವರೆಗೂ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಆದರೆ, ನಮ್ಮ ಸರ್ಕಾರದಿಂದ ಯಾವುದೇ ಕಾರ್ಯಗಳು ನಿಂತಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರವು ನರೇಗಾ ಯೋಜನೆಯಡಿ ನಾವು ಪತ್ರ ಬರೆದ ನಂತರ 600 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ, ಮಾರ್ಗಸೂಚಿಯಂತೆ 17,900 ಕೋಟಿ ರೂ. ಬಿಡುಗಡೆ ಮಾಡಬೇಕೆಂದು ನಾವು ಮನವಿ ಮಾಡಿದ್ದೇವೆ. ನಮ್ಮ ರಾಜ್ಯದ ಸಚಿವರನ್ನು ಭೇಟಿ ಮಾಡಿ ಚರ್ಚಿಸಲು ಕಳುಹಿಸಿದರೆ, ಪ್ರಧಾನಿ ಮಂತ್ರಿ ಸಮಯಾವಕಾಶ ನೀಡಿಲ್ಲ ಎಂದು ಆರೋಪಿಸಿದ್ದಾರೆ.