ಮುಂಬೈ: ಮಹಾರಾಷ್ಟ್ರ ಚುನಾವಣೆಯ (Maharashtra Poll) ಹಿನ್ನೆಲೆಯಲ್ಲಿ ಕಾಂಗ್ರೆಸ್, ಶಿವಸೇನಾ (Shiv Sena) (ಉದ್ಧವ್ ಠಾಕ್ರೆ ಬಣ), NCP (ಶರದ್ ಪವಾರ್ ಬಣ) ಮಹಾ ವಿಕಾಸ್ ಅಘಾಡಿ (MVA) ಮೈತ್ರಿ ಕೂಟ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ಈ ಮೈತ್ರಿಕೂಟ ಕರ್ನಾಟಕದ ಮಾದರಿಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪ್ರಣಾಳಿಕೆಯನ್ನು (Manifesto) ಬಿಡುಗಡೆಗೊಳಿಸಿದ್ದಾರೆ.
ಮಹಾವಿಕಾಸ ಅಘಾಡಿ ಅಧಿಕಾರಕ್ಕೆ ಬಂದರೆ ʻಮಹಾಲಕ್ಷ್ಮಿʼ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 3 ಸಾವಿರ ರೂ, ಕರ್ನಾಟಕದ ಮಾದರಿಯಲ್ಲೇ ಉಚಿತ ಬಸ್ ಸೇವೆ, 500 ರೂ. ದರದಲ್ಲಿ ವಾರ್ಷಿಕ 6 ಸಿಲಿಂಡರ್ ವಿತರಣೆ ಮಾಡಲಾಗುವುದು. ಮಹಿಳೆಯರ ಸುರಕ್ಷತೆಗಾಗಿ ಬಲವಾದ ಕಾನೂನುಗಳನ್ನು ರೂಪಿಸುವುದು. 9 ರಿಂದ 16 ವರ್ಷ ವಯಸ್ಸಿನ ಹುಡುಗಿಉರಿಗೆ ಉಚಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ. ಪ್ರತಿ ತಿಂಗಳು 2 ದಿನಗಳ ರಜೆ ನೀಡುವುದು ಗ್ಯಾರಂಟಿಗಳಲ್ಲಿವೆ.
ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಸಿಗುವಂತೆ ಯೋಜನೆ ಜಾರಿಗೆ ತರಲಾಗುವು. ಈ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿಯೊಂದನ್ನ ನೇಮಕ ಮಾಡಲಾಗುವುದು. ರೈತರ ಬೆಳೆಗೆ ಬೆಂಬಲ ಬೆಲೆ, ಬೆಳೆ ವಿಮೆ ಯೋಜನೆಯನ್ನೂ ಜಾರಿಗೆ ತರಲಾಗುವುದು ಎಂದು ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.
ನಿರುದ್ಯೋಗಿ ಯುವಕರಿಗೆ ಮಾಸಿಕ 4 ಸಾವಿರ ರೂ. ಭತ್ಯೆ ನೀಡಲಾಗುವುದು, ರಾಜ್ಯ ವಿದ್ಯಾರ್ಥಿವೇತನ ಯೋಜನೆಗಳನ್ನು ವಿಸ್ತರಿಸಲಾಗುವುದು ಎಂದು ಹೇಳಲಾಗಿದೆ.








