ಕಾಂಗ್ರೆಸ್ ನವರು ದೇಶ ಮತ್ತು ರಾಜ್ಯವನ್ನು ಲೂಟಿ ಮಾಡಿಕೊಂಡು ಬಂದಿದ್ದಾರೆ: ಜಗದೀಶ ಶೆಟ್ಟರ
ಹುಬ್ಬಳ್ಳಿ: ಕಾಂಗ್ರೆಸ್ ನವರು ದೇಶ ಮತ್ತು ರಾಜ್ಯವನ್ನು ಲೂಟಿ ಮಾಡಿಕೊಂಡು ಬಂದಿದ್ದಾರೆ. ಮೇಕೆ ದಾಟು ಪಾದಯಾತ್ರೆಯನ್ನು ಕಾಂಗ್ರೆಸ್ ಮುಂದೆ ಬರುವ ವಿಧಾನಸಭೆಯ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮಾಡುತ್ತಿದೆ. ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅಂತಾರಾಜ್ಯ ಜಲ ವಿವಾದಗಳನ್ನು ಸೂಕ್ಷ್ಮವಾಗಿ ಬಗೆಹರಿಸಬೇಕಾಗುತ್ತದೆ. ಇದನ್ನು ಹೋರಾಟದ ಮೂಲಕ ಬಗೆಹರಿಸೋಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ವಿಧಾನಸಭೆಯ ಚುನಾವಣೆ ಇನ್ನೂ ಒಂದೂವರೆ ವರ್ಷವಿದ್ದಾಗಲೇ ರಾಜಕಾರಣವನ್ನು ಆರಂಭಸಿದೆ. ಕಾಂಗ್ರೆಸ್ ಪಾದಯಾತ್ರೆಯನ್ನು ಮಾಡುವ ಮೂಲಕ ಪರಿಸ್ಥಿತಿಯನ್ನು ಮತ್ತಷ್ಟು ಜಟಿಲಗೊಳ್ಳುವಂತೆ ಮಾಡುತ್ತಿದ್ದೆ. ನೀರಾವರಿ ಇರಲಿ ಅಥವಾ ಬೇರೆ ಯಾವುದೇ ಯೋಜನೆ ಇರಲಿ ಅವರು ಅಧಿಕಾರದಲ್ಲಿದ್ದಾಗ ಮಾತನಾಡಲ್ಲ, ಇಗ ಮಾತನಾಡುತ್ತಿದ್ದಾರೆ ಇದು ರಾಜಕಾರಣ ಎಂಧು ಜನರಿಗೆ ಅರ್ಥವಾಗುತ್ತದೆ ಎಂದು ಟೀಕಿಸಿದರು.
ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಇದಕ್ಕೊಂದು ಪರಿಹಾರ ಕೊಡುವ ಪ್ರಯತ್ನ ಮಾಡುತ್ತಿದೆ. ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗಲೇ ಮೇಕೆದಾಟು ಯೋಜನೆ ಆರಂಭಿಸಿ ಬಹುದಿತ್ತಲವೇ. ಇಲ್ಲವೇ ಮೊನ್ನೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ಮಾಡೋ ಪ್ರಯತ್ನ ಮಾಡಬಹುದಿತ್ತು. ಆದರೆ ಮಾಡಲಿಲ್ಲ. ಚುನಾವಣೆಯಲ್ಲಿ ವೋಟ್ ಪಡೆಯಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ನಿಯಮಗಳು ಜಾರಿಯಲ್ಲಿದ್ದರು ಅದನ್ನು ಉಲ್ಲಂಘಿಸಿ ಪಾದಯಾತ್ರೆ ಮಾಡುತ್ತಿದ್ದಾರೆ ಇದು ನಾಚಿಕೆಗೇಡಿನ ಸಂಗತಿ. ಇವರಿಗೆ ರಾಜಕೀಯ ಹಿತಾಸಕ್ತಿಯೇ ಮುಖ್ಯ ಹೊರತು ರಾಜ್ಯದ ಹಿತಾಸಕ್ತಿ ಮುಖ್ಯವಲ್ಲ. ಕಾಂಗ್ರೆಸ್ ನವರು ಇಲ್ಲಿಯವರೆಗೂ ಬರೀ ರಾಜಕಾರಣವನ್ನು ಮಾಡಿಕೊಂಡು ಬಂದಿದ್ದಾರೆ. ಕಾನೂನು ಉಲ್ಲಂಘಿಸಿದರೆ ನಮಗೆ ಹೆಚ್ಚು ಮೊತ್ತ ಸಿಗುತ್ತೆ ಅಂತ ತಿಳದಿದ್ದಾರೆ ಆದರೆ ಜನ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಲೆಳೆದರು.