ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರಿಕೆಟ್

ಕಪ್ ನಮ್ದೇ:ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಭಾರತದ ವನಿತೆಯರು!;ದೀಪ್ತಿ, ಶಫಾಲಿ ಆಟಕ್ಕೆ ತತ್ತರಿಸಿದ ಆಫ್ರಿಕಾ!

The Cup is ours: Indian women have become world champions!

Shwetha by Shwetha
November 3, 2025
in ಕ್ರಿಕೆಟ್, National, Newsbeat, Sports, ಕ್ರೀಡೆ, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಮುಂಬೈ: ಕೋಟ್ಯಂತರ ಭಾರತೀಯರ ದಶಕಗಳ ಕನಸು ನನಸಾಗಿದೆ. ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ ಬಂದಿದೆ. 2025ರ ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ, ಆತಿಥೇಯ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಮಣಿಸಿ, ಚೊಚ್ಚಲ ಬಾರಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ 52 ವರ್ಷಗಳ ವಿಶ್ವಕಪ್ ಇತಿಹಾಸದಲ್ಲಿ ಭಾರತದ ವನಿತೆಯರು ತಮ್ಮ ಹೆಸರು ಅಜರಾಮರಗೊಳಿಸಿದ್ದಾರೆ.

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಈ ರೋಚಕ ಹಣಾಹಣಿಯಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಆಲ್‌ರೌಂಡರ್‌ಗಳ ಅದ್ಭುತ ಪ್ರದರ್ಶನದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಈ ಸವಾಲಿನ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, ಭಾರತದ ಸ್ಪಿನ್ ದಾಳಿಗೆ ತತ್ತರಿಸಿ 45.3 ಓವರ್​ಗಳಲ್ಲಿ 246 ರನ್‌ಗಳಿಗೆ ಸರ್ವಪತನ ಕಂಡು 52 ರನ್‌ಗಳ ಹೀನಾಯ ಸೋಲು ಅನುಭವಿಸಿತು. ದಕ್ಷಿಣ ಆಫ್ರಿಕಾದ ಕೊನೆಯ ವಿಕೆಟ್ ಪತನವಾಗುತ್ತಿದ್ದಂತೆ, ಕ್ರೀಡಾಂಗಣದಲ್ಲಿ ಸಂಭ್ರಮದ ಹೊಳೆ ಹರಿಯಿತು. ಆಟಗಾರ್ತಿಯರು ಮೈದಾನಕ್ಕೆ ನುಗ್ಗಿ, ಆನಂದಭಾಷ್ಪದೊಂದಿಗೆ ಒಬ್ಬರನ್ನೊಬ್ಬರು ಅಪ್ಪಿಕೊಂಡು ವಿಜಯೋತ್ಸವ ಆಚರಿಸಿದರು.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ದೀಪ್ತಿ-ಶಫಾಲಿ: ಗೆಲುವಿನ ರೂವಾರಿಗಳು

ಈ ಐತಿಹಾಸಿಕ ಗೆಲುವಿಗೆ ಇಬ್ಬರು ಆಟಗಾರ್ತಿಯರು ಪ್ರಮುಖ ಕಾರಣಕರ್ತರು. ಸ್ಪೋಟಕ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಮತ್ತು ಸ್ಟಾರ್ ಆಲ್‌ರೌಂಡರ್ ದೀಪ್ತಿ ಶರ್ಮಾ ತಮ್ಮ ಸರ್ವಾಂಗೀಣ ಪ್ರದರ್ಶನದ ಮೂಲಕ ಪಂದ್ಯವನ್ನು ಭಾರತದ ಹಿಡಿತಕ್ಕೆ ತಂದುಕೊಟ್ಟರು. ಆರಂಭದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಶಫಾಲಿ, ಕೇವಲ 75 ಎಸೆತಗಳಲ್ಲಿ 87 ರನ್ ಚಚ್ಚಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ನಂತರ ಬೌಲಿಂಗ್‌ನಲ್ಲೂ ಕೈಚಳಕ ತೋರಿ 2 ಪ್ರಮುಖ ವಿಕೆಟ್ ಪಡೆದರು.

ಇನ್ನೊಂದೆಡೆ, ದೀಪ್ತಿ ಶರ್ಮಾ ಫೈನಲ್ ಪಂದ್ಯದ ಮಹಾನಾಯಕಿಯಾಗಿ ಮೆರೆದರು. ಮೊದಲು ಬ್ಯಾಟಿಂಗ್‌ನಲ್ಲಿ ಜವಾಬ್ದಾರಿಯುತ ಆಟವಾಡಿ 58 ರನ್‌ಗಳ ಅಮೂಲ್ಯ ಇನ್ನಿಂಗ್ಸ್ ಕಟ್ಟಿದರು. ನಂತರ ತಮ್ಮ ಸ್ಪಿನ್ ಮೋಡಿಯ ಮೂಲಕ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದರು. ಬರೊಬ್ಬರಿ ಐದು ವಿಕೆಟ್‌ಗಳನ್ನು ಕಬಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಭಾರತದ ಬ್ಯಾಟಿಂಗ್ ಅಬ್ಬರ

ಈ ವಿಶ್ವಕಪ್‌ನಲ್ಲಿ ಅದೃಷ್ಟ ಕೈಕೊಟ್ಟಿದ್ದ ನಾಯಕಿ ಹರ್ಮನ್‌ಪ್ರೀತ್ ಕೌರ್, ಫೈನಲ್‌ನಲ್ಲೂ ಟಾಸ್ ಸೋತರು. ಆದರೆ, ತಂಡದ ಆಟಗಾರರು ತಮ್ಮ ಸಾಂಘಿಕ ಪ್ರದರ್ಶನದ ಮೂಲಕ ಅದನ್ನು ಮೆಟ್ಟಿನಿಂತರು. ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ (45) ಮೊದಲ ವಿಕೆಟ್‌ಗೆ 104 ರನ್‌ಗಳ ಶತಕದ ಜೊತೆಯಾಟವಾಡಿ ಭರ್ಜರಿ ಆರಂಭ ಒದಗಿಸಿದರು. ಮಧ್ಯಮ ಕ್ರಮಾಂಕದಲ್ಲಿ ದೀಪ್ತಿ ಶರ್ಮಾ (58) ಮತ್ತು ಅಂತಿಮ ಓವರ್‌ಗಳಲ್ಲಿ ವಿಕೆಟ್ ಕೀಪರ್ ರಿಚಾ ಘೋಷ್ (24 ಎಸೆತಗಳಲ್ಲಿ 34) ಸಿಡಿಲಬ್ಬರದ ಆಟವಾಡಿ ತಂಡದ ಮೊತ್ತವನ್ನು 300ರ ಗಡಿ ಸಮೀಪ ಕೊಂಡೊಯ್ದರು.

ವ್ಯರ್ಥವಾದ ವೋಲ್ವಾರ್ಡ್ ಶತಕ

ದೊಡ್ಡ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ನಾಯಕಿ ಲೌರಾ ವೋಲ್ವಾರ್ಡ್ ಒಂಟಿ ಸಲಗದಂತೆ ಹೋರಾಡಿದರು. ಅವರ ಅಬ್ಬರದ ಬ್ಯಾಟಿಂಗ್‌ಗೆ ಭಾರತೀಯ ಬೌಲರ್‌ಗಳು ಕೆಲಕಾಲ ಕಂಗಾಲಾದರು. ಅಮೋಘ ಶತಕ (101) ಸಿಡಿಸಿದ ವೋಲ್ವಾರ್ಡ್, ತಂಡವನ್ನು ಗೆಲುವಿನತ್ತ ಕೊಂಡೊಯ್ಯುವ ಪ್ರಯತ್ನ ನಡೆಸಿದರು. ಆದರೆ, ದೀಪ್ತಿ ಶರ್ಮಾ ಅವರ ಸ್ಪಿನ್ ಬಲೆಗೆ ಬಿದ್ದು ವಿಕೆಟ್ ಒಪ್ಪಿಸುತ್ತಿದ್ದಂತೆ ಆಫ್ರಿಕಾದ ಸೋಲು ಖಚಿತವಾಯಿತು. ಉಳಿದ ಬ್ಯಾಟರ್‌ಗಳು ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ಉತ್ತರ ನೀಡಲು ವಿಫಲರಾದರು.

ಹರ್ಮನ್‌ಪ್ರೀತ್ ಕಣ್ಣಲ್ಲಿ ಆನಂದಭಾಷ್ಪ

ಈ ಗೆಲುವು ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಲಿಗೆ ಅತ್ಯಂತ ಭಾವನಾತ್ಮಕ ಕ್ಷಣವಾಗಿತ್ತು. ಈ ಹಿಂದೆ 12 ಐಸಿಸಿ ಟೂರ್ನಿಗಳಲ್ಲಿ ಆಡಿ, ಹಲವು ಬಾರಿ ಫೈನಲ್ ಹಾಗೂ ಸೆಮಿಫೈನಲ್‌ಗಳಲ್ಲಿ ಎಡವಿ ಕಣ್ಣೀರಿಟ್ಟಿದ್ದ ಹರ್ಮನ್‌ಗೆ ಕೊನೆಗೂ ವಿಶ್ವಕಪ್ ಟ್ರೋಫಿ ಎತ್ತಿಹಿಡಿಯುವ ಸೌಭಾಗ್ಯ ಲಭಿಸಿತು. 2017ರ ವಿಶ್ವಕಪ್ ಫೈನಲ್ ಸೋಲಿನ ನೋವನ್ನು ಮರೆಸುವಂತೆ, ತಾಯ್ನಾಡಿನಲ್ಲೇ ವಿಶ್ವಕಪ್ ಗೆದ್ದ ಅವರ ಕಣ್ಣಲ್ಲಿ ಆನಂದಭಾಷ್ಪ ಜಿನುಗಿತು. “ಈ ಕ್ಷಣಕ್ಕಾಗಿ ನಾವು ವರ್ಷಗಳಿಂದ ಕಾದಿದ್ದೇವೆ. ಇದು ತಂಡದ ಪ್ರತಿಯೊಬ್ಬರ ಪರಿಶ್ರಮ, ತ್ಯಾಗ ಮತ್ತು ದೇಶದ ಜನರ ಹಾರೈಕೆಯ ಫಲ” ಎಂದು ಹರ್ಮನ್‌ಪ್ರೀತ್ ಕೌರ್ ಭಾವೋದ್ವೇಗದಿಂದ ನುಡಿದರು. ಈ ಗೆಲುವಿನೊಂದಿಗೆ ಭಾರತೀಯ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಶಕೆ ಆರಂಭವಾಗಿದೆ.

ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram