ಮೈಸೂರು: ಕೊರೊನಾದಿಂದ ಸಾವನ್ನಪ್ಪಿದವರನ್ನು ಸತ್ತ ನಾಯಿಗಳನ್ನ ಎಳೆದುಕೊಂಡು ಹೋಗುವ ರೀತಿಯಲ್ಲಿ ಮನುಷ್ಯರನ್ನು ಎಳೆದುಕೊಂಡು ಹೋಗಿ ಬಿಸಾಡಿದ್ದಾರೆ ಎಂದು ಆರೋಪಿಸಿ ಮೈಸೂರಿನಲ್ಲಿ ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೊರೊನಾದಿಂದ ಸಾವನ್ನಪ್ಪಿರುವರನ್ನು ಕೀಳಾಗಿ ಕಾಣುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ಮಾಡಿದರು.
ಘಟನೆಯನ್ನು ನೋಡಿದ ಜನ ಭಯಭೀತರಾಗಿದ್ದಾರೆ. ಕೊರೊನಾದಿಂದ ಸತ್ತವರಿಗೆ ಕರುಣೆ ತೋರಿಸಿ ಅವರ ಶವ ಸಂಸ್ಕಾರವನ್ನು ದೂರದಿಂದ ಅವರ ಕುಟುಂಬದವರು ನೋಡುವುದಕ್ಕೆ ಅವಕಾಶ ಮಾಡಿಕೊಡಿ. ಮಾನವೀಯತೆಗೆ ಬೆಲೆ ಕೊಡಿ ಎಂದು ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ ಮನವಿ ಮಾಡಿದ್ದಾರೆ.
ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!
ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...








