ಆಸ್ಪತ್ರೆಯಲ್ಲಿ ಸತ್ತ ವ್ಯಕ್ತಿ ಆಂಬುಲೈನ್ಸ್ ನಲ್ಲಿ ಬದುಕಿದ SaakshaTv
ಮಂಗಳೂರು: ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಸಾವನ್ನಪ್ಪಿದ ವ್ಯಕ್ತಿ, ಜೀವಂತವಾಗಿದ್ದಾನೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿ ಆಂಬುಲೈನ್ಸ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಕಣ್ಣು ಬಿಟ್ಟು ಉಸಿರಾಡಿದ್ದಾನೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನ ನಿವಾಸಿ ಗುರುವ (60) ಅವರನ್ನು ವಯೋಸಹಜ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವ್ಯಕ್ತಿಯು ಐಸಿಯುನಲ್ಲಿ ಆಕ್ಸಿಜನ್ ಸಹಾಯದಿಂದ ಉಸಿರಾಡುತ್ತಿದ್ದರು. ಇವರು ಆಕ್ಸಿಜನ್ ತೆಗೆದರೆ ಬದುಕುಳಿಯುವುದಿಲ್ಲ ಎಂದು ವೈದ್ಯರು ಸಂಭಂದಿಕರಿಗೆ ತಿಳಿಸಿದರು.
ಅವರು ಬದುಕುವ ಸಾದ್ಯತೆ ಇಲ್ಲದಿರುವುದರಿಂದ ಆಕ್ಸಿಜನ್ ತೆರವುಗೊಳಿಸುವಂತೆ ಸಂಭಂದಿಕರು ವೈದ್ಯರಿಗೆ ತಿಳಿಸಿದರು. ವೈದ್ಯರು ಆಕ್ಸಿಜನ್ ತೆರವುಗೊಳಿಸಿದ ಬಳಿಕ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಂತರ ಅವರನ್ನು ಮನೆಗೆ ಕೊಂಡೊಯ್ಯಲಾಗುತ್ತಿದ್ದು, ಮತ್ತು ಸಂಭಂದಿಕರು ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದರು.
ಆದರೆ, ಆ್ಯಂಬುಲೆನ್ಸ್ನಲ್ಲಿ ಹೋಗುತ್ತಿರುವಾಗ ಕಾಸರಗೋಡು ಜಿಲ್ಲೆಯ ಉಪ್ಪಳ ಬಳಿ ಗುರುವ ಅವರ ದೇಹದಲ್ಲಿ ಚಲನೆ ಕಂಡು ಬಂದಿದೆ. ಕಣ್ಣುಬಿಟ್ಟ ಅವರು ಉಸಿರಾಟ ಆರಂಭಿಸಿದ್ದು, ಕೂಡಲೇ ಅವರನ್ನು ಬದಿಯಡ್ಕದ ಕ್ಲಿನಿಕ್ಗೆ ಕರೆದೊಯ್ದಾಗ ಆತ ಜೀವಂತವಾಗಿರುವ ಬಗ್ಗೆ ವೈದ್ಯರು ತಿಳಿಸಿದರು. ಬಳಿಕ ಅವರನ್ನು ಕೂಡಲೆ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.