The death of a sister who went to save her brother-ನೀರಿನಲ್ಲಿ ಮುಳುಗುತ್ತಿದ್ದ ಸಹೋದರನನ್ನು ರಕ್ಷಿಸಲು ಹೋದ ಮೂವರು ಸಹೋದರಿಯರು ದಾರುಣವಾಗಿ ಸಾವನ್ನಪಿದ ಘಟನೆ ಬುಧವಾರ
ಚನ್ನಹಳ್ಳಿ ತಾಂಡಾದಲ್ಲಿ ನಡೆದಿದೆ.
ತಮ್ಮ ನಿವಾಸಕ್ಕೆ ಸಮೀಪವಿದ್ದ ಕೆರೆಯಲ್ಲಿ ಮುಳುಗುತ್ತಿರುವ ಸಹೋದರನನ್ನು ಕಂಡ ಬಾಲಕಿಯರು ರಕ್ಷಿಸಲು ಧಾವಿಸಿದ್ದಾರೆ. ಈ ವೇಳೆ ಮೂವರು ಸಹೋದರಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೇಯು ಕರ್ನಾಟಕದ ವಿಜಯನಗರ ಜಿಲ್ಲೆಯ ಚನ್ನಹಳ್ಳಿ ತಾಂಡಾದಲ್ಲಿ ನಡೆದಿದೆ.
ಅಭಿ (13) ಮುಳುಗುತ್ತಿರುವುದನ್ನು ಕಂಡ , ಅಶ್ವಿನಿ (14), ಕಾವೇರಿ (18) ಮತ್ತು ಅಪೂರ್ವ (18) ರಕ್ಷಿಸಲು ಧಾವಿಸಿದಾಗ ಈ ಧಾರುಣ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಅಗ್ನಿಶಾಮಕದಳ ಮತ್ತು ತುರ್ತು ಸೇವಾ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಈ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.