ಬಸ್ ಗಾಗಿ ರಸ್ತೆಯಲ್ಲಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆ ಗ್ರಾಮದ ಗಾಂಧಿನಗರದ ಹತ್ತಿರ ನಡೆದಿದೆ.
ಘಟನೆಯಲ್ಲಿ ಗಾಂಧಿನಗರದ ಕೃಷ್ಣಪ್ಪ(52) ಹಾಗೂ ಮೋಹಿನಿ(56) ಮೃತ ರ್ದುದೈವಿಗಳು. ಇನ್ನು ಲಾರಿ ಡಿಕ್ಕಿ ರಭಸಕ್ಕೆ 2 ವಿದ್ಯುತ್ ಕಂಬಗಳು ಕೂಡ ಧರೆಗೆ ಉರುಳಿದ್ದು, ಒಂದು ಕಟ್ಟಡದ ಕೆಲವು ಭಾಗ ಹಾನಿಯಾಗಿದೆ. ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.