೧೫ ವರ್ಷದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ೧೯ ವರ್ಷದ ಯುವಕ ಹಾಗೂ ೫೯ ವರ್ಷದ ವೈದ್ಯನನ್ನು ಬಂಧಿಸಿರುವ ಘಟನೆ ಗುಜರಾತ್ನ ಅಹಮದಾಬಾದ್ನಲ್ಲಿ ನಡೆದಿದೆ. ಜುಲೈ ೬ ರಂದು ಬಾಲಕಿಯ ಗರ್ಭಪಾತ ಮಾಡಿ ಭ್ರೂಣವನ್ನು ತೆಗೆದು ಕಸ ಎಸೆಯುವ ಸ್ಥಳದಲ್ಲಿ ಬಿಸಾಡಿದ್ದ ಮಣಿನಗರದ ನಿವಾಸಿ ಡಾ. ಚೇತನ್ ಇದೀಗ ಅಹಮದಾಬಾದ್ ಪೊಲೀಸರ ಅಥಿತಿಯಾಗಿದ್ದಾನೆ. ಇನ್ನು ಯುವತಿ ಗರ್ಭಿಣಿಯಾಗುವುದಕ್ಕೆ ಕಾರಣನಾದ ೧೯ ವರ್ಷದ ಸುನೀಲ್ ಸರ್ಗರಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ೧೫೦೦೦ರೂಗಳಿಗೆ ಆಸೆಪಟ್ಟು ಇಂತಹ ನೀಚ ಕೃತ್ಯ ಎಸಗಿದ ವೈದ್ಯ ಸದ್ಯ ಕಂಬಿ ಹಿಂದೆ ಬಿದ್ದಿದ್ದು ಆತನ ಲೈಸೆನ್ಸ್ ಕ್ಯಾನ್ಸಲ್ ಆಗುವ ಸಾಧ್ಯತೆಯೂ ಇದೆ. ಈಗ ಕಸದ ರಾಶಿಯಲ್ಲಿ ಭ್ರೂಣ ಪತ್ತೆಯಾದ ಬೆನ್ನಲ್ಲೇ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ರು. ತಾಂತ್ರಿಕ ಸಾಕ್ಷ್ಯಗಳ ಜಾಡು ಹಿಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಅತ್ಯಾಚಾರದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಮಿಳುನಾಡು ರೈತರಿಗೂ ಸಿಹಿ ಸುದ್ದಿ ಕೊಟ್ಟರಾ ಡಿ ಕೆ ಶಿವಕುಮಾರ್ :ದಕ್ಷಿಣ ಭಾರತದ ಹೃದಯದಂತಿರುವ ಮೇಕೆದಾಟು ಯೋಜನೆ ಬಗ್ಗೆ ಕನ್ನಡಿಗರು ಮತ್ತು ತಮಿಳುನಾಡಿನವರು ತಿಳಿಯಲೇಬೇಕಾದ ಸತ್ಯವಿದು
ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಇದು ಇಡೀ ದಕ್ಷಿಣ ಭಾರತದ ಪಾಲಿನ ಅತ್ಯಂತ ಮಹತ್ವದ ಮತ್ತು ಆಯಕಟ್ಟಿನ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ನಾವು ನೆರೆ...








