ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಬಸ್
ಚನ್ನಪಟ್ಟಣ : ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿದ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ಬುಡುಗನದೊಡ್ಡಿ ಬಳಿ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ನ ಆಕ್ಸಲ್ ಕಟ್ ಆಗಿದ್ದೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ.
ಬೊಮ್ಮನಾಯಕನಹಳ್ಳಿ ಗ್ರಾಮದಿಂದ ಚನ್ನಪಟ್ಟಣಕ್ಕೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.
ಬಸ್ ನಲ್ಲಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 60 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದರು.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.