ADVERTISEMENT
Tuesday, June 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾಗೆ ಕೈಕೊಡುತ್ತಿರುವ ರೆಟ್ರೋ ಬ್ಲೂ ಜೆರ್ಸಿಯ ಬಣ್ಣ..!

admin by admin
November 30, 2020
in Newsbeat, Sports, ಕ್ರೀಡೆ
team india new jersy retro blue saakshatv
Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾಗೆ ಕೈಕೊಡುತ್ತಿರುವ ರೆಟ್ರೋ ಬ್ಲೂ ಜೆರ್ಸಿಯ ಬಣ್ಣ..!

shikhar dhavan team india new jersy saakshatv ರೆಟ್ರೋ ಬ್ಲೂ.. ಟೀಮ್ ಇಂಡಿಯಾದ ಹೊಸ ಜೆರ್ಸಿ. ಹಾಗಂತ ಇದರಲ್ಲಿ ವಿಶೇಷತೆ ಏನು ಇಲ್ಲ. ಹಳೆಯ ಬಣ್ಣ.. ಹೊಸ ಮೆರಗು ಅಷ್ಟೇ..
ಹೌದು, ಟೀಮ್ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧ ಧರಿಸಿರುವ ಹೊಸ ಜೆರ್ಸಿಯ ಬಣ್ಣ ಮತ್ತು ಮಾದರಿ ತುಂಬಾ ಹಳೆಯದ್ದು. ಈ ಜೆರ್ಸಿಯ ಬಣ್ಣಕ್ಕೆ ಸುಮಾರು 28 ವರ್ಷಗಳ ಹಿಂದಿನ ಇತಿಹಾಸವಿದೆ.
ನೆನಪಿಸರಬಹುದು.. 1992ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕ್ರಿಕೆಟ್ ತಂಡದ ಆಟಗಾರರು ಇದೇ ಬಣ್ಣದ ಜೆರ್ಸಿ ತೊಟ್ಟಿದ್ದರು. ಮಹಮ್ಮದ್ ಅಜರುದ್ದೀನ್, ಸಚಿನ್ ತೆಂಡುಲ್ಕರ್, ಕಪಿಲ್ ದೇವ್, ಜಾವಗಲ್ ಶ್ರೀನಾಥ್ ಮೊದಲಾದವರನ್ನು ಈ ಜೆರ್ಸಿಯಲ್ಲಿ ಕಾಣಿಸಿದ್ದರು.
ಇದೀಗ ಆಸ್ಟ್ರೇಲಿಯಾ ಸರಣಿಗೆ ಬಿಸಿಸಿಐ 28 ವರ್ಷಗಳ ಹಳೆಯದ ಮಾದರಿಯ ಜೆರ್ಸಿಯನ್ನು ಟೀಮ್ ಇಂಡಿಯಾ ಆಟಗಾರರಿಗೆ ನೀಡಿದೆ. ಆದ್ರೆ ಇಲ್ಲಿ ಸ್ವಲ್ಪ ಬದಲಾಗಿದೆ. 1992ರ ಜೆರ್ಸಿಯಲ್ಲಿ ಆಟಗಾರರ ಹೆಸರು ಮತ್ತು ದೇಶದ ಹೆಸರು ರಾರಾಜಿಸುತ್ತಿತ್ತು.
ಆದ್ರೆ ಇದೀಗ ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಜೆರ್ಸಿಯಲ್ಲಿ ದೇಶದ ಮತ್ತು ಆಟಗಾರರ ಹೆಸರಿನ ಜೊತೆ ಜಾಹಿರಾತು ಕಂಪೆನಿಗಳ ಹೆಸರು ಕಣ್ಣಿಗೆ ಕಟ್ಟುವಂತಿದೆ.
ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಸಾಕಷ್ಟು ಟೀಕೆಗಳು ಕೂಡ ಕೇಳಿಬರುತ್ತಿವೆ. ಕೆಲವು ನೆಟ್ಟಿಗರು ಟೀಮ್ ಇಂಡಿಯಾದ ಜೆರ್ಸಿಯ ಮೇಲೆ ರಾರಾಜಿಸುತ್ತಿರುವ ಜಾಹಿರಾತು ಕಂಪೆನಿಗಳ ಹೆಸರುಗಳನ್ನು ಕೂಡ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಟೀ ಶರ್ಟ್ ಬಣ್ಣ ಪೂರಕವಾಗಿಲ್ಲ. ಟೀಮ್ ಇಂಡಿಯಾಗೆ ಅದೃಷ್ಟದ ಬಣ್ಣವಲ್ಲ ಅಂತನೂ ಅಭಿಪ್ರಾಯಪಟ್ಟಿದ್ದಾರೆ.
team india new jersy saakshatv indian cricketಟೀಮ್ ಇಂಡಿಯಾ ಆಟಗಾರರು ಧರಿಸಿರುವ ಟೀ ಶರ್ಟ್ ಅದು ದೇಶದ ಪ್ರತೀಕ.. ದೇಶದ ಹೆಮ್ಮೆ. ಟೀಮ್ ಇಂಡಿಯಾ ಆಟಗಾರರು ದೇಶದ 130 ಕೋಟಿ ಜನರನ್ನು ಪ್ರತಿನಿಧಿಸುತ್ತಾರೆ. ಆದ್ರೆ ಟೀ ಶರ್ಟ್ ಮೇಲೆ ಜಾಹಿರಾತು ಕಂಪೆನಿಗಳ ಹೆಸರಿನ ಬದಲು ದೇಶದ ಹೆಸರು ಎದ್ದು ಕಾಣಬೇಕು ಅನ್ನೋ ಅಭಿಮತವೂ ವ್ಯಕ್ತವಾಗಿದೆ.
ಈಗಾಗಲೇ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದೆ. ಆಸ್ಟ್ರೇಲಿಯನ್ ಬ್ಯಾಟ್ಸ್ ಮೆನ್ ಗಳ ಅಬ್ಬರಕ್ಕೆ ಟೀಮ್ ಇಂಡಿಯಾದ ಬೌಲರ್ ಗಳು ಬೆದರಿದ್ದಾರೆ. ಹಾಗಾಗಿ ಟೀಮ್ ಇಂಡಿಯಾ ಆಟಗಾರರು ಧರಿಸಿರುವ ಜೆರ್ಸಿ ಅದೃಷ್ಟವಲ್ಲ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದ್ದಾರೆ ಅಭಿಮಾನಿಗಳು.
ಇದಕ್ಕೆ ಪೂರಕವಾದ ಅಂಕಿ ಅಂಶಗಳು ಮತ್ತು ನಿದರ್ಶನಗಳನ್ನು ಮುಂದಿಟ್ಟಿದ್ದಾರೆ. 1992ರ ವಿಶ್ವಕಪ್ ನಲ್ಲಿ ಇದೇ ಪೋಷಾಕಿನಲ್ಲಿ ಆಡಿರುವ ಭಾರತ ತಂಡ ಆಡಿರುವ ಎಂಟು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ.
ಹೀಗಾಗಿ ಟೀಮ್ ಇಂಡಿಯಾ ಆಟಗಾರರಿಗೆ ರೆಟ್ರೋ ಬ್ಲೂ ಬಣ್ಣದ ಜೆರ್ಸಿ ಅದೃಷ್ಟವಲ್ಲ. ದಯವಿಟ್ಟು ಜೆರ್ಸಿಯ ಬಣ್ಣ ಬದಲಾಯಿಸಿ ಅಂತ ಹೇಳುತ್ತಿದ್ದಾರೆ.

Related posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

June 22, 2026
rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

June 22, 2026
Tags: #saakshatv1992 world cupbcciindiaIndia’s new jerseyIndian cricketretro bluesocial mediateam indiavirat kohli
ShareTweetSendShare
Join us on:

Related Posts

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

rahul gandhi and indiragandhi

ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.

by admin
June 22, 2026
0

56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಖರ್ಗೆ ಮೌನವೇಕೆ? ತಮಿಳುನಾಡು ದಬ್ಬಾಳಿಕೆ ಮತ್ತು ಕಾಂಗ್ರೆಸ್ ಮೌನ: ಮೇಕೆದಾಟು ಗುಟ್ಟು ರಟ್ಟು ಮಾಡಿದ ಹೆಚ್ ಡಿ ಕುಮಾರಸ್ವಾಮಿ

by Shwetha
June 22, 2026
0

ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ...

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

by Shwetha
June 22, 2026
0

ರಾಜ್ಯದ ಜನತೆಗೆ ಶೀಘ್ರದಲ್ಲೇ ಸಾರಿಗೆ ಬಸ್ ದರ ಏರಿಕೆಯ ಶಾಕ್ ತಗುಲುವ ಸಾಧ್ಯತೆ ದಟ್ಟವಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯ ಸಾರಿಗೆ ಸಂಸ್ಥೆಗಳನ್ನು ಉಳಿಸಲು ಕೆಎಸ್ಆರ್‌ಟಿಸಿ...

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

by Shwetha
June 22, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡಮತದಾನದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಸ್ಫೋಟಕ ಮಾಹಿತಿಯೊಂದನ್ನು ಹೊರಹಾಕಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram