ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ತೆರಳಿದ್ದ ಯುವತಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾಳೆ. ಇಂತಹದೊಂದು ದಾರುಣ ಘಟನೆ ಚಿಕ್ಕಬಳ್ಳಾಪುರದ ನಂದಿ ಠಾಣೆ ವ್ಯಾಪ್ತಿಯ ಬಂಡಹಳ್ಳಿ ಸಮೀಪ ನಡೆದಿದೆ. ತೋಟಕ್ಕೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ವರ್ಷ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ಲಾರಿ ಚಾಲಕ ಸ್ಥಳದಲ್ಲಿಯೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಮುದ್ದೇನಹಳ್ಳಿ ಕಡೆಗೆ ಹೊರಟಿದ್ದ ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ವಲ್ಪ ದೂರ ದ್ವಿಚಕ್ರ ವಾಹನವನ್ನು ಎಳೆದುಕೊಂಡು ಹೋಗಿದೆ. ಈ ವೇಳೆ ವರ್ಷ ತೀವ್ರವಾಗಿ ಗಾಯಗೊಂಡಿದ್ದು , ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಈ ಸಂಬಂಧ ನಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶದ ಶೇ 80ರಷ್ಟು ಮಹಿಳೆಯರು ಕಿರುಕುಳದ ಸುಳಿಯಲ್ಲಿ: ಅಂಕಿ ಅಂಶಗಳ ಮೂಲಕ ಸಮಾಜದ ಕರಾಳ ಮುಖ ಅನಾವರಣಗೊಳಿಸಿದ ರಾಹುಲ್ ಗಾಂಧಿ
ಪುಣೆ: ದೇಶದ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆತಂಕಕಾರಿ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ....








