ಹಾಸನ: ಚಲಿಸುತ್ತಿದ್ದ ಕಾರಿನಿಂದ ಬಾಲಕಿಯನ್ನು ಹೊರಗೆ ಎಳೆದ ಆನೆಯೊಂದು ತುಳಿದು ಗಾಯಗೊಳಿಸುರವ ಘಟನೆಯೊಂದು ಬೆಳಕಿಗೆ ಬಂದಿದೆ.
ಕಾಡಾನೆ ಏಕಾಏಕಿ ಏಕಾಏಕಿಯಾಗಿ ಅಡ್ಡ ಎಳೆದು ಬಾಲಕಿ ಹೊರಗೆಳೆದು ತುಳಿದು ಗಾಯಗೊಳಿಸಿದೆ. ಈ ಘಟನೆ ಸಕಲೇಶಪುರದ (Sakleshpura) ಹೊಸಕೆರೆ ಹತ್ತಿರ ನಡೆದಿದೆ. ಹಳೆಬಾಗೆ ಗ್ರಾಮದ ದೀಕ್ಷಿತಾ (16) ಕಾಡಾನೆ ದಾಳಿಯಿಂದ ಗಾಯಗೊಂಡಿರುವ ಬಾಲಕಿ ಎನ್ನಲಾಗಿದೆ. ಗಾಯಗೊಂಡ ಬಾಲಕಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ರಜೆ ಇದ್ದ ಹಿನ್ನೆಲೆಯಲ್ಲಿ ತಮ್ಮ ಗ್ರಾಮವಾದ ಹಳೆಬಾಗೆಗೆ ತೆರಳುತ್ತಿದ್ದರು. ಹೀಗಾಗಿ ಪೋಷಕರೊಂದಿಗೆ ಕಾರಿನಲ್ಲಿ ಹೊರಟಿದ್ದರು. ಹೊಸಕೆರೆಯಲ್ಲಿನ ತಮ್ಮ ಅಜ್ಜಿ ಮನೆಗೆ ತೆರಳಿ ಮರಳಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಕಾಡಾನೆ ಕಂಡು ದೀಕ್ಷಿತಾ ಪೋಷಕರಾದ ವಿನೋದ ಹಾಗೂ ಗಿರೀಶ್ ಕಾರು ನಿಲ್ಲಿಸಿ ಕೆಳಗಿಳಿದು ಓಡಿ ಹೋಗಿದ್ದಾರೆ. ದೀಕ್ಷಿತಾ ಕಾಡಾನೆ ಕಂಡು ಗಾಬರಿಯಿಂದ ಕಾರಿನಿಂದ ಇಳಿಯಲು ತಡಮಾಡಿದ್ದಾರೆ. ಆಗ ದೀಕ್ಷಿತಾಳನ್ನು ಸೊಂಡಿಲಿನಿಂದ ಎಳೆದುಕೊಂಡು ತುಳಿದು ಗಾಯಗೊಳಿಸಿದೆ. ಪೋಷಕರು ಕಿರುಚುತ್ತಿದ್ದಂತೆ ಕಾಡಾನೆ ಕಾಫಿ ತೋಟದೊಳಗೆ ಓಡಿ ಹೋಗಿದೆ ಎನ್ನಲಾಗಿದೆ. ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.