ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಗಗನಕ್ಕೆ ಏರಿಕೆ ಕಂಡಿದೆ. ಈ ಮಧ್ಯೆ ನಿನ್ನೆಯಷ್ಟೇ ಸರ್ಕಾರವು ಬಸ್ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಹಾಲಿನ ದರ ಏರಿಕೆಗೆ (Milk Price Hike) ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ (K Venkatesh) ಸುಳಿವು ನೀಡಿದ್ದಾರೆ. ರೈತರು ಹಾಲಿನ ದರ ಏರಿಕೆ ಮಾಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಜಾನುವಾರುಗಳಿಗೆ ನೀಡುವ ಆಹಾರ ಸೇರಿದಂತೆ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದರಿಂದಾಗಿ ರೈತರು ತತ್ತರಿಸಿದ್ದಾರೆ. ಹೀಗಾಗಿ ಹಾಲಿನ ದರ 10 ರೂ. ಏರಿಕೆ ಮಾಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ಚರ್ಚೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ರೈತರ ಅನುಕೂಲಕ್ಕೆ ತಕ್ಕಂತೆ ಹಾಲಿನ ದರ ಏರಿಕೆ ಮಾಡುತ್ತೇವೆ. ಆದರೆ, ಎಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತದೆ ಎಂಬುವುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.
ರಾಜೀನಾಮೆ ನೀಡಲು ಸಿಎಂ ಸೂಚನೆ: ಸಭಾಪತಿ ಸ್ಥಾನಕ್ಕೆ ಅವಮಾನ ಎಂದು ಗುಡುಗಿದ ಬಸವರಾಜ್ ಹೊರಟ್ಟಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಂಘರ್ಷಕ್ಕೆ ವೇದಿಕೆ ಸಿದ್ಧವಾಗಿದ್ದು, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ಮುಖ್ಯಮಂತ್ರಿಗಳು ದೂರವಾಣಿ ಕರೆ ಮಾಡಿ ರಾಜೀನಾಮೆ ನೀಡುವಂತೆ ಸೂಚಿಸಿರುವುದು...








