ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು : ಐವನ್ ಡಿಸೋಜ
ಮಂಗಳೂರು : ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವಿರುದ್ಧ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಐವನ್ ಡಿಸೋಜ ಕಿಡಿಕಾರಿದ್ದಾರೆ.
ಹುಕ್ಕಾಬಾರ್ ಸಂಸ್ಕøತಿ ಸಿ ಟಿ ರವಿಯವರದ್ದು, ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ. ಅವರ ಚರಿತ್ರೆ ಏನು ಎಂದು ಅವರೊಮ್ಮೆ ನೋಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ
ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಕೆಂಡ್ ಹ್ಯಾಂಡ್ ವಾಹನಗಳ ಡೀಲ್ ಮಾಡುತ್ತಿದ್ದ ರವಿ ಅವರ ಇಂದಿನ ಆಸ್ತಿ ಇಂದು ಎಷ್ಟಿದೆ ಎಂದು ನೋಡಿಕೊಳ್ಳಲಿ.
ನೆಹರೂ ಅವರ ಬಗ್ಗೆ ಮಾತನಾಡುವಷ್ಟು ಯೋಗ್ಯತೆ ಅವರಿಗಿಲ್ಲ. ಅವರೀಗ ಲೂಟಿ ರವಿಯಾಗಿ ಕೋಟಿ ರವಿಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಲ್ಲದೆ ಹಿಂದಿನ ಯೋಜನೆಗಳ ಹೆಸರು ಬದಲಾವಣೆ ಮಾಡುವ ವಿಚಾರವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕೈಬಿಡಬೇಕು ಎಂದು ಒತ್ತಾಯಿಸಿದ ಡಿಸೋಜಾ, ದೇಶದಲ್ಲಿ ದ್ವೇಷದ ರಾಜಕಾರಣಕ್ಕೆ ಬಿಜೆಪಿ ನಾಂದಿ ಹಾಡುತ್ತಿದೆ ಎಂದು ಆರೋಪಿಸಿದರು.
ಹಾಗೆ ಯಾವುದೇ ಸವಲತ್ತುಗಳನ್ನು ನೀಡದೆ ಬರೀ ಹೆಸರು ಬದಲಾವಣೆಗಳನ್ನು ಮಾಡುವುದು ಒಳ್ಳೆಯ ಪ್ರಜಾಪ್ರಭುತ್ವದ ಲಕ್ಷಣವಲ್ಲ.
ಮೋದಿಯವರು ಬೇಕಾದಲ್ಲಿ ಸ್ವಿಸ್ ಬ್ಯಾಂಕ್ನಿಂದ ಹಣ ತಂದು ಎಲ್ಲರ ಖಾತೆಗೆ 15 ಲಕ್ಷ ರೂ. ಹಣ ಹಾಕಿ, ಆ ಯೋಜನೆಗೊಂದು ಹೆಸರು ಕೊಡಲಿ ಎಂದು ವ್ಯಂಗ್ಯವಾಡಿದ್ದಾರೆ.








