ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿಯ ಜನ ಹೆಚ್ಚು ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ಒಂದೇ ದಿನದಲ್ಲಿ 196 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಕೊರೊನಾ ನಿಯಂತ್ರಣ ಮಾಡಲು ಸೀಲ್ ಡೌನ್ ಮಾಡಲು ಬಿಬಿಎಂಪಿ ಈಗಾಗಲೇ ಪ್ಲ್ಯಾನ್ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣ ಮಾಡಲು ಇಂದು ಮುಖ್ಯಮಂತ್ರಿ ಬಿ,ಎಸ್,ಯಡಿಯೂರಪ್ಪ ಅವರ ಜೊತೆಗೆ ಬಿಬಿಎಂಪಿ ಅಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ಆದರೆ ಈ ಮಹತ್ವದ ಸಭೆಯಲ್ಲಿ ಇರಬೇಕಾದ ಇಬ್ಬರು ಪ್ರಮುಖ ಸಚಿವರು ಸಭೆಯಲ್ಲಿ ಭಾಗಿಯಾಗಿಲ್ಲ. ಆರೋಗ್ಯ ಸಚಿವ ಶ್ರೀರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಸಭೆಯಲ್ಲಿ ಭಾಗಿಯಾಗಿಲ್ಲ.
ಕೋವಿಡ್ 19 ನಿಯಂತ್ರಣ ಮಾಡಲು ಮಹತ್ವದ ಸಭೆ ನಡೆಯುತ್ತಿದೆ. ಇಂತಹ ಮಹತ್ವದ ಸಭೆಯಲ್ಲಿ ಇರಲೇ ಬೇಕಿದ್ದ ಆರೋಗ್ಯ ಸಚಿವರು, ಮತ್ತು ವೈದ್ಯಕೀಯ ಶಿಕ್ಷಣ ಸಚಿವರ ಸಭೆಯಿಂದ ದೂರ ಉಳಿದ್ದಾರೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನ ಕೋವಿಡ್ 19 ಜವಬ್ದಾರಿ ಇರುವಂತ ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ಸಭೆಯಿಂದ ದೂರ ಉಳಿದಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಈ ಇಬ್ಬರು ಸಚಿವರು ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ತೆರಳಿದ್ದಾರೆ ಎನ್ನಲಾಗಿದೆ. ಆದರೂ ಇಂತಹದೊಂದು ಸಭೆ ನಡೆಯುವಾಗ ಸಚಿವರುಗಳು ಇರಬೇಕಾಗಿತ್ತು. ಯಾಕೆಂದರೆ ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಮಹತ್ವದ ಚರ್ಚೆ ಇದಾಗಿದೆ. ಅಲ್ಲದೆ ಕೆಲ ಅಧಿಕಾರಿಗಳಿಗೆ ಸೂಚನೆ ನೀಡುವ ಸಂಭವ ಇರುತ್ತದೆ. ಈ ಕೆಲಸವನ್ನು ಅಧಿಕಾರಗಳು ಮಾಡಲು ಸಾಧ್ಯವಿಲ್ಲ.