ಮೈಸೂರು: ಕತ್ತಲಲ್ಲಿ ದೀಪ ಹಚ್ಚಿದ್ರೆ ಕೊರೊನಾ ವೈರಸ್ ದೀಪದ ಬಳಿ ಬಂದು ಶಾಖಕ್ಕೆ ಸಾಯುತ್ತೆ ಎಂದು ಬಿಜೆಪಿ ಶಾಸಕ ರಾಮದಾಸ್ ಹೇಳಿದ್ದಾರೆ. ಮೈಸೂರಿನ ಎಂಜಿ ಮಾರುಕಟ್ಟೆಯಲ್ಲಿ ಶಾಸಕರು ಕ್ಯಾಂಡಲ್, ಮಾಸ್ಕ್ ಹಾಗೂ ದೀಪ ವಿತರಣೆ ಮಾಡುತ್ತಿದ್ದ ವೇಳೆಯಲ್ಲಿ ನಾಗರೀಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಕತ್ತಲಿನಲ್ಲಿ ದೀಪ ಹಚ್ಚಿದರೆ ಎಲ್ಲೆ ಇದ್ದರೂ ವೈರಸ್ ದೀಪದ ಬಳಿ ಬರುತ್ತೆ. ಆಗ ದೀಪದ ಶಾಖಕ್ಕೆ ವೈರಸ್ ಸಾವನ್ನ ಕಾಣುತ್ತೆ. ಈ ಕಾರಣಕ್ಕೆ ಪ್ರಧಾನಿ ಮೋದಿಯವರು ದೀಪ ಹಚ್ಚಲು ದೇಶಾದ್ಯಾಂತ ಕರೆ ನೀಡಿದ್ದಾರೆ ಎಂದರು..
ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ
ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...








