ರಾಮನಗರ: ಚಿರತೆಯೊಂದು ಕಂಪೌಂಡ್ ಮೇಲೆ ಎಗರಿ ನಾಯಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಕನಕಪುರ (Kanakapura) ತಾಲೂಕಿನ ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರೇಗೌಡ ಎಂಬುವವರ ಮನೆಯ ಹತ್ತಿರ ಚಿರತೆ ಓಡಾಟ ನಡೆಸಿದ್ದು, ಸೋಮವಾರ ರಾತ್ರಿ ಮನೆಯ ಕಾಂಪೌಂಡ್ ಎಗರಿ ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಬೊಗಳುತ್ತಿದ್ದಂತೆ ಚಿರತೆ ಸ್ಥಳದಿಂದ ಓಡಿ ಹೋಗಿದೆ. ಚಿರತೆ ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡಿದ್ದಕ್ಕೆ ಜನರು ಬೆಚ್ಚಿ ಬಿದ್ದಿದ್ದು. ಕೂಡಲೇ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಮತ್ತು ಸಿಎಂ ಡಿ ಕೆ ಶಿವಕುಮಾರ್ ದೋಸ್ತಿ ದುನಿಯಾ -ಕನಕಪುರ ಬಂಡೆಯ ಜೊತೆ ಕೈಜೋಡಿಸಿದ ಬೆಳಗಾವಿ ಸಾಹುಕಾರ ಸತೀಶ್ ಜಾರಕಿಹೊಳಿ: CM ಹೊಸ ಚದುರಂಗದಾಟಕ್ಕೆ ನಡುಗಿದ ವೈರಿ ಪಾಳಯ!
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಶ್ವತ ಶತ್ರುಗಳೂ ಇಲ್ಲ, ಶಾಶ್ವತ ಮಿತ್ರರೂ ಇಲ್ಲ ಎಂಬ ಹಳೇ ಗಾದೆ ಮಾತು ಮತ್ತೊಮ್ಮೆ ಅಕ್ಷರಶಃ ನಿಜವಾಗಿದೆ. ರಾಜ್ಯ ರಾಜಕಾರಣ ಹಾಗೂ ಪಕ್ಷದ...








