ಚಾಮರಾಜನಗರ: ಕಾರ್ತಿಕ ಮಾಸದ ಕಡೆಯ ಸೋಮವಾರದ ಹಿನ್ನೆಲೆ ಮಲೆಮಹದೇಶ್ವರ ಸ್ವಾಮಿಗೆ ಮಹಾಜ್ಯೀತಿ ಬೆಳಗಲಾಯಿತು. ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡಿನಲ್ಲಿ ಮಹಾದೀಪ ಹಚ್ಚಿ ಬೆಳಗಲಾಯಿತು. ಬಳಿಕ ಮಲೆ ಮಹದೇಶ್ವರ ಸ್ವಾಮಿಯ ತೆಪ್ಪೋತ್ಸವ ನಡೆಸುವುದರೊಂದಿಗೆ ಕಾರ್ತಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ.

ಕಾರ್ತಿಕ ಮಾಸದ ಕೊನೆಯ ಸೋಮವಾರದ ಮಹಾಜ್ಯೋತಿ ಪೂಜೆ, ತೆಪ್ಪೋತ್ಸವ ಹಿನ್ನೆಲೆಯಲ್ಲಿ ಶನಿವಾರದಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಆರಂಭವಾಗಿದ್ದವು. ಕೋವಿಡ್ ಕಾರಣಕ್ಕೆ ಭಕ್ತರ ಪ್ರವೇಶವನ್ನು ನಿಬರ್ಂಧಿಸಲಾಗಿತ್ತು ಸೋಮವಾರ ರಾತ್ರಿ ದೇವಾಲಯದಲ್ಲಿ ಮಹಾಜ್ಯೋತಿ ಪೂಜೆ ಸಲ್ಲಿಸಿದ ನಂತರ, ದೇವಾಲಯ ಆವರಣದಲ್ಲಿ ಉತ್ಸವ ಮೂರ್ತಿ ಮೆರವಣಿಗೆ ನಡೆಸಲಾಯಿತು. ನಂತರ ದೀಪದಗಿರಿ ಒಡ್ಡುವಿಗೆ ಉತ್ಸವ ಮೂರ್ತಿಯನ್ನು ತೆಗೆದುಕೊಂಡು ಹೋಗಿ. ಅಲ್ಲಿ ಉತ್ಸವಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಮಹಾ ಜ್ಯೋತಿಯನ್ನು ಬೆಳಗಿಸಲಾಯಿತು. ಆ ನಂತರ ದೊಡ್ಡಕೆರೆಯಲ್ಲಿ ಮಹದೇಶ್ವರಸ್ವಾಮಿಯ ತೆಪೆÇ್ಪೀತ್ಸವ ನಡೆಯಿತು.

ಸಾಮಾನ್ಯವಾಗಿ ಕಾರ್ತೀಕ ಮಾಸದ ಜಾತ್ರೆಗೆ ಲಕ್ಷಾಂತರ ಭಕ್ತರು ಸೇರುತ್ತಾರೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾದಪ್ಪನ ದರ್ಶನ ಪಡೆಯುತ್ತಾರೆ. ದೇವಾಲಯದ ಮುಂಭಾಗದಲ್ಲಿ ಸಣ್ಣ ದೀಪಗಳನ್ನು ಹಚ್ಚುವುದರ ಮೂಲಕ ತಮ್ಮ ಹರಕೆಯನ್ನು ನೆರವೇರಿಸುತ್ತಾರೆ. ಕೊನೆಯ ಕಾರ್ತೀಕ ಸೋಮವಾರದಂದು ಜರುಗುವ ಮಹಾ ಜ್ಯೋತಿ ಉತ್ಸವದಲ್ಲಿ ಪಾಲ್ಗೊಂಡು ಮಹಾ ಜ್ಯೋತಿ ದೀಪಕ್ಕೆ ತಮ್ಮ ಕೈಲಾದಷ್ಟು ಎಣ್ಣೆ ಎರೆದು ತಮ್ಮ ಹರಕೆ ತೀರಿಸುತ್ತಾರೆ. ಈ ಬಾರಿ ಕೋವಿಡ್ ಕಾರಣದಿಂದ ನಿಬರ್ಂಧ ವಿಧಿಸಿದ್ದರಿಂದ ಭಕ್ತರು ಇರಲಿಲ್ಲ. ಸ್ಥಳೀಯರು ಹಾಗೂ ದೇವಾಲಯದ ಸಿಬ್ಬಂದಿ ಈ ಉತ್ಸವಗಳಲ್ಲಿ ಪಾಲ್ಗೊಂಡಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








