ADVERTISEMENT
Sunday, September 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಮೂಲ ನಕ್ಷತ್ರವು ಹೆಣ್ಣುಮಕ್ಕಳಿಗೆ ದೋಷ ಪ್ರದವಲ್ಲ

The Mula Nakshatra is not a bad sign for girls 

Saaksha Editor by Saaksha Editor
November 4, 2025
in Astrology, ಜ್ಯೋತಿಷ್ಯ
The Mula Nakshatra is not a bad sign for girls

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsappShare on Telegram

ಗಂಡು ಮಕ್ಕಳ ಪೋಷಕರಿದ್ದರೆ ನೆನಪಿಟ್ಟುಕೊಳ್ಳಿ

ಯಾವ ಕಾರಣಕ್ಕೂ ಮೂಲಾ ನಕ್ಷತ್ರದ ಹೆಣ್ಣು ಮಕ್ಕಳನ್ನು ಕಡೆಗಣಿಸಬೇಡಿ, ದೂಷಣೆ ಮಾಡಬೇಡಿ. ಕೇವಲ ಜನನ ಕಾಲದ ನಕ್ಷತ್ರದ ಆಧಾರದಲ್ಲಿ ಇಡೀ ಜೀವನವನ್ನು ಹಾಗೂ ಅದೃಷ್ಟವನ್ನು ನಿರ್ಧರಿಸಲು ಸಾಧ್ಯವಿಲ್ಲ. ಆ ನಕ್ಷತ್ರದ ಕಾರಣಕ್ಕೆ ಸ್ವಲ್ಪ ಮಟ್ಟಿಗೆ ದೋಷ ಬರಬಹುದೇ ಹೊರತು ಇಡೀ ಜೀವನ ನಿರ್ಧರಿಸುವಂಥ ಪ್ರಭಾವ ಬೀರುವುದಿಲ್ಲ.

Related posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 20, 2026
ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

September 19, 2026

ವಿದ್ಯೆಗೆ ಅಭಿಮಾನಿ ದೇವತೆಯಾದ ಸರಸ್ವತಿಯ ನಕ್ಷತ್ರವೇ ಮೂಲನಕ್ಷತ್ರ ವಾಗಿದೆ. ಈ ನಕ್ಷತ್ರದವರಿಗೆ ಅತ್ಯಂತ ಪ್ರಬಲವಾಗಿ ಗುರುವಿನ ಅನುಗ್ರಹ ಇರುತ್ತದೆ. ವಿಶೇಷವಾದ ಜ್ಞಾನ ಸಂಪತ್ತು ಇವರಲ್ಲಿ ಇರುತ್ತದೆ. ಗ್ರಹ ಮೈತ್ರಿ,ಮತ್ತು ಮೂಲಾ ನಕ್ಷತ್ರ ದೋಷಕ್ಕೆ  ಇರುವ ಅಪವಾದ; ಶಾಸ್ತ್ರೋಕ್ತವಾದ ಪರಿಹಾರಗಳು ಇವುಗಳಿಂದಲೇ ಎಲ್ಲಾ ರೀತಿಯ ಸಮಸ್ಯೆಗಳು ಕೂಡ ನಿವಾರಣೆ ಸುಲಭಸಾಧ್ಯ.

ಮೂಲಾ ನಕ್ಷತ್ರದ ಫಲ ಹೇಗಿರುತ್ತದೆ ಅಂದರೆ, ಆಷಾಢ, ಭಾದ್ರಪದ ಹಾಗೂ ಆಶ್ವೀಜ ಮಾಸದಲ್ಲಿ, ವೃಷಭ, ಸಿಂಹ, ವೃಶ್ಚಿಕ ಅಥವಾ ಕುಂಭ ಲಗ್ನದಲ್ಲಿ  ಜನಿಸಿದ ಮೂಲಾ ನಕ್ಷತ್ರದವರಿಗೆ ಯಾವ ದೋಷವೂ ಇರುವುದಿಲ್ಲ. ಇಂಥ ಹೆಣ್ಣುಮಕ್ಕಳನ್ನು ಮದುವೆ ಆದರೆ ಯಾವುದೇ ತೊಂದರೆಗಳಿಲ್ಲ.

ವೈಶಾಖ, ಜ್ಯೇಷ್ಠಾ, ಮಾರ್ಗಶಿರ, ಫಾಲ್ಗುಣ ಮಾಸಗಳಲ್ಲಿ, ಮಿಥುನ, ಕನ್ಯಾ, ತುಲಾ ಅಥವಾ ಮೀನ ಲಗ್ನದಲ್ಲಿ ಜನಿಸಿದ ಮೂಲಾ ನಕ್ಷತ್ರದವರಿಗೆ ವಿಶೇಷವಾದ ಅನುಕೂಲಗಳು ಆಗುತ್ತವೆ. ಸದಾ ಕಾಲ ಧನ ಪ್ರಾಪ್ತಿ ಆಗುತ್ತದೆ. ಸಂಪೂರ್ಣ ವಿದ್ಯಾವಂತರಾಗುತ್ತಾರೆ. ಇಂಥವರಿಗೆ ಯಾವುದೇ ದೋಷವಿಲ್ಲ.

ಮೂಲ ನಕ್ಷತ್ರ

ಮೂಲಾ ನಕ್ಷತ್ರದ ವ್ಯಾಪ್ತಿ ಧನಸ್ಸು ರಾಶಿಯಲ್ಲಿ ಸಮಾವೇಶಗೊಳ್ಳುತ್ತದೆ. ಧನಸ್ಸು ಯುದ್ಧಗಳಿಂದ ಅಭಯವನ್ನು, ಆಯುಧವಾಗಿ ರಕ್ಷೆಯನ್ನೂ, ಯುದ್ಧ ಅಥವಾ ರಕ್ಷಣೆಯ ವಿಷಯದಲ್ಲಿ ಒಳಿತು ಉಂಟು ಮಾಡುವುದರಿಂದ ಇದು ಅಗ್ನಿ ರಾಶಿ.  ಈ ರಾಶಿಯ ಗ್ರಹ, ಜ್ಞಾನಕ್ಕೆ ಕಾರಣನಾಗಿರುವ ಸಂತಾನಕ್ಕೆ ಕೊಂಡಿ ಕೂಡಿಸುವ, ಧನಾಗಮನಕ್ಕೆ ಸಿದ್ಧಿ ಕೊಡುವ, ವಿಕೃತಿಗಳನ್ನು ಆಕೃತಿಗೆ ತಂದು ನಿಲ್ಲಿಸುವ ಗುರುಗ್ರಹ.

ಇದನ್ನೂ ಓದಿ: ಬ್ರಾಹ್ಮೀ ಮುಹೂರ್ತದಲ್ಲಿ ದೀಪ ಹಚ್ಚಿ ಯಶಸ್ಸು ಸಿಗುತ್ತದೆ

ಮೊತ್ತ ಮೊದಲಾಗಿ ಮೂಲಾ ನಕ್ಷತ್ರದ ಸೊಸೆಯಂದಿರು ತಾವು ಮದುವೆಯಾಗಿ ಬಂದ ಮನೆಯ ಆರ್ಥಿಕ ಬಲಾಡ್ಯತೆಯನ್ನು, ಸಂಸಾರದೊಳಗಿನ ಸಂತೋಷವನ್ನು ಜಾಸ್ತಿ ಮಾಡಿದ ಉದಾಹರಣಗಳೇ ಹೇರಳವಾಗಿವೆ. ಕಾರಣ ಇಷ್ಟೇ, ಮೂಲಾ ನಕ್ಷತ್ರವನ್ನು ಒಳಗೊಳ್ಳುವ ಮನೆಯಾದ ಧನಸ್ಸು ರಾಶಿಯ ಅಧಿಪತಿ ಗುರುವು ದುರುಂತಗಳನ್ನು ತಪ್ಪಿಸುವುದು ಮಾತ್ರವಲ್ಲ; ತನ್ನ ಶಕ್ತಿ ಪ್ರಭಾವಗಳಿಂದ ಮೂಲಾ ನಕ್ಷತ್ರದ ದೋಷಗಳನ್ನು ನಿಯಂತ್ರಿಸುತ್ತಾನೆ. ತನ್ನದೃಷ್ಟಿಯ ಫ‌ಲದ ಸಕಾರಾತ್ಮಕ ಪರಿಣಾಮಗಳನ್ನೂ ಒದಗಿಸುತ್ತಾನೆ. ನಿರಂತರವಾಗಿ ಸಂಸ್ಕಾರಯುತವಾಗಿ ಜೀವನ ಮಾಡಿದ ಹೆಣ್ಣುಮಕ್ಕಳಿಗೆ ಧರ್ಮದ ನೆಲೆಯಲ್ಲಿ ಯಾವುದೇ ರೀತಿಯ ಈ ನಕ್ಷತ್ರದ ದೋಷಗಳು ಕಾಣಿಸುವುದಿಲ್ಲ. ನಿರಂತರ ದೇವತಾ ಆರಾಧನೆಯಿಂದ ವಿಷ್ಣುಸಹಸ್ರನಾಮ ರಾಮರಕ್ಷಾಸ್ತೋತ್ರ ಮುಂತಾದ ಸ್ತೋತ್ರಗಳ ಪಟ್ಟಣದಿಂದ ಸರ್ವ ದೋಷಗಳಿಗೂ ಕೂಡ ಪರಿಹಾರವು ಸಿಗುತ್ತದೆ.

ಮೂಲಾ ನಕ್ಷತ್ರ ಕ್ಕೆ ಸಂಬಂಧಿಸಿದ

ಸ್ತೋತ್ರ ಪಠಣಗಳ ಮೂಲಕ ಮೂಲಾ ನಕ್ಷತ್ರ ದೋಷ ಪರಿಹಾರವಾಗುತ್ತದೆ. ಜಾತಕದಲ್ಲಿ ಗುರುವೂ, ಕೇತುವೂ  ಬಲಯುತರಾಗಿ ಇದ್ದಾಗ ಸರ್ವ ದೋಷಗಳೂ ಕರಗಿ, ಹೊಸ ಬದಲಾವಣೆಗೆ ತೆರೆದುಕೊಳ್ಳಲು ಸಹಾಯವಾಗುತ್ತದೆ. ಯಾವುದೇ ದೋಷವಿದ್ದ ಪಕ್ಷದಲ್ಲಿ

ನವಗ್ರಹ, ನಕ್ಷತ್ರ ಶಾಂತಿ ಮಾಡಿಸಿಕೊಳ್ಳುವುದರಿಂದ ಸರ್ವರೀತಿಯ ದೋಷಕ್ಕೆ  ಶಾಸ್ತ್ರದಲ್ಲಿ ಶಾಸ್ತ್ರೋಕ್ತವಾದ ಪರಿಹಾರಗಳಿವೆ.

ಮುಂದುವರೆಯುವುದು …..

ಲೇಖಕರು: ಧಾರ್ಮಿಕಚಿಂತಕರು ಮತ್ತು ಸಲಹೆಗಾರರು, ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್  ಜ್ಯೋತಿಷ್ಯರು 8548998564

ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Tags: #astrology#dailly horoscopeastrology facts for womenbad birth star mythsHorosopejanma nakshatra significanceMula Nakshatra astrologyMula Nakshatra meaning for girlsnakshatra for girlsಕೆಟ್ಟ ನಕ್ಷತ್ರ ಮೂಢನಂಬಿಕೆಗಳುಜನ್ಮ ನಕ್ಷತ್ರದ ಸತ್ಯಜ್ಯೋತಿಷ್ಯನಕ್ಷತ್ರ ಜ್ಯೋತಿಷ್ಯಮೂಲ ನಕ್ಷತ್ರಮೂಲ ನಕ್ಷತ್ರ ಅರ್ಥಹುಡುಗಿಯರಿಗೆ ನಕ್ಷತ್ರದ ಮಹತ್ವ
ShareTweetSendShare
Join us on:

Related Posts

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (20-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 20, 2026
0

ದಿನ ಭವಿಷ್ಯ: 20-09-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ ಮತ್ತು ಮೇಲಧಿಕಾರಿಗಳಿಂದ ಪ್ರಶಂಸೆ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 19, 2026
0

ದಿನ ಭವಿಷ್ಯ: 19-09-2026 1. ಮೇಷ ರಾಶಿ ವೃತ್ತಿ ಮತ್ತು ಹಣಕಾಸು: ಇಂದು ನಿಮಗೆ ಅತ್ಯಂತ ಕ್ರಿಯಾಶೀಲ ದಿನವಾಗಿರುತ್ತದೆ. ಕಚೇರಿಯಲ್ಲಿ ನಿಮ್ಮ ವೇಗ ಮತ್ತು ನಿಖರತೆಯನ್ನು ಮೇಲಾಧಿಕಾರಿಗಳು...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (18-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 18, 2026
0

ದಿನ ಭವಿಷ್ಯ: 18-09-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ದೊರೆಯಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆ ಸಿಗುವುದು....

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (17-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 17, 2026
0

ದಿನ ಭವಿಷ್ಯ: 17-09-2026 ಮೇಷ ರಾಶಿ: ಇಂದಿನ ದಿನ ನಿಮಗೆ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಪ್ರಗತಿಯನ್ನು ತರಲಿದೆ. ನಿಮ್ಮ ಕಠಿಣ ಶ್ರಮ ಮತ್ತು ಏಕಾಗ್ರತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ...

ದಿನ ಭವಿಷ್ಯ (02-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 16, 2026
0

ದಿನ ಭವಿಷ್ಯ: 16-09-2026 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಶಕ್ತಿ ತುಂಬಿರುತ್ತದೆ. ಕಚೇರಿಯಲ್ಲಿ ನಿಮ್ಮ ಬಹುದಿನಗಳ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಮೇಲಧಿಕಾರಿಗಳು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram