ಕೋಲಾರ: ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯನ ಕೊಲೆ ನಡೆದಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಾಲೂರು ತಾಲೂಕಿನ ಕೋಡಿಹಳ್ಳಿ ಕ್ರಾಸ್ ಹತ್ತಿರ ನಡೆದಿದೆ. ಅನಿಲ್(40) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ಮಿಣಸಂದ್ರ ಗ್ರಾಮದ ಹಾಲಿ ಜಯಮಂಗಲ ಗ್ರಾಪಂ ಸದಸ್ಯರು ಎನ್ನಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೀಣಸಂದ್ರ ಗ್ರಾಮದ ಅನಿಲ್ ಕುಮಾರ್ ದ್ವಿಚಕ್ರ ವಾಹನದಲ್ಲಿ ಲಕ್ಕೂರು ಗೇಟ್ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.