ADVERTISEMENT
Saturday, September 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದ.ಕ ಜವಳಿ ಅಂಗಡಿಗಳನ್ನು ತೆರೆಯಲು ಜಿಲ್ಲಾಡಳಿತದ ಅನುಮತಿ ಖಂಡಿಸಿದ ಮುಸ್ಲಿಂ ಒಕ್ಕೂಟ…

saaksha tv by saaksha tv
May 7, 2020
in Newsbeat, Samagra karnataka
Share on FacebookShare on TwitterShare on WhatsappShare on Telegram

ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಕೊರೊನಾ ಪರಿಸ್ಥಿತಿಯ ಅನಾಹುತಗಳನ್ನು ಅವಲೋಕಿಸಿ ಬಟ್ಟೆ, ಫ್ಯಾನ್ಸಿ ಮತ್ತು ಪಾದರಕ್ಷೆಯ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಬಾರದೆಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಆದರೆ ಜಿಲ್ಲಾಡಳಿತವು ನಾಳೆಯಿಂದ ಬಟ್ಟೆ, ಫ್ಯಾನ್ಸಿ ಮತ್ತು ಪಾದರಕ್ಷೆಯ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡುತ್ತಿರುವುದನ್ನು ನಾವು ಖಂಡಿಸಿದ್ದೇವೆ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈದುಲ್ ಫಿತ್ರ್ ಹಬ್ಬ ಸಮೀಪಿಸುತ್ತಿರುವಾಗ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಿ ಕೊಟ್ಟರೆ ಇದರಿಂದ ಜನಸಂದಣಿ ಹೆಚ್ಚಾಗಿ ಸೋಂಕು ಹರಡುವ ಭೀತಿಯಿದೆ.

ಆದ್ದರಿಂದ ಬಟ್ಟೆ, ಫ್ಯಾನ್ಸಿ ಮತ್ತು ಪಾದರಕ್ಷೆಯ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬಾರದು ಎಂದು ನಾವು ಮತ್ತು ಉಡುಪಿ ಖಾಝಿಯವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಅದನ್ನು ಕಡೆಗಣಿಸಿ ಜಿಲ್ಲಾಡಳಿತ ಅನುಮತಿ ನೀಡಿರುವುದು ಅತ್ಯಂತ ವಿಪರ್ಯಾಸದ ಸಂಗತಿಯಾಗಿದೆ. ಈ ಅಚಾತುರ್ಯದಿಂದ ಸೋಂಕು ಹರಡಿದರೆ ಇದರ ಹೊಣೆಯನ್ನು ಜಿಲ್ಲಾಡಳಿತ, ಸಂಸದರು, ಉಸ್ತುವಾರಿ ಸಚಿವರು, ಶಾಸಕರು ಹೊರಬೇಕು. ಈ ಹಿಂದೆ
ದೆಹಲಿಯಲ್ಲಿ ನಡೆದ ತಬ್ಲೀಕ್ ಜಮಾತ್ ನವರು ಆಯೋಜಿಸಿದ ಮುಸ್ಲಿಂ ಸಮಾವೇಶದಲ್ಲಿ ಭಾಗವಹಿಸಿದ ಕೆಲವರಿಗೆ ಕೊರೋನ ಸೋಂಕು ಹಬ್ಬಿದ ಕಾರಣ ಮುಸ್ಲಿಂ ಸಮುದಾಯವನ್ನೇ ದೂರಲಾಗುತ್ತಿದೆ. ಇನ್ನು ಈದ್ ಹಬ್ಬದ ಸಂದರ್ಭದಲ್ಲಿ ಕೊರೊನಾ ಸೋಂಕು ಜಿಲ್ಲಾಡಳಿತದ ಈ ನಿರ್ಧಾರದಿಂದ ಮುಸ್ಲಿಮರಿಗೆ ಬಾಧಿಸಿದರೆ ಇನ್ನಷ್ಟು ಮುಸ್ಲಿಮರನ್ನೇ ದೂರುವುದರಲ್ಲಿ ಸಂಶಯ ಇಲ್ಲ. ಅಷ್ಟೇ ಅಲ್ಲದೇ ಇಲ್ಲಿಯವರೆಗೆ ನಾವು ತೆಗೆದುಕೊಂಡಿರುವ ಮುಂಜಾಗ್ರತೆ ಸಂಪೂರ್ಣ ವ್ಯರ್ಥವಾಗಲಿದೆ ಎಂದು ಅಶ್ರಫ್ ತಿಳಿಸಿದ್ದಾರೆ. ಕೊರೋನಾ ಸೋಂಕು ನಿಯಂತ್ರಣದಲ್ಲಿ ಮುಸ್ಲಿಂ ಸಮುದಾಯ ಸರ್ಕಾರದ ತೆಗೆದುಕೊಂಡಿರುವ ಎಲ್ಲಾ ಕ್ರಮಗಳಿಗೂ ಬದ್ಧವಾಗಿ ನಡೆದುಕೊಂಡು ಸಹಕರಿಸಿದೆ. ಈಗ ಪವಿತ್ರ ರಂಜಾನ್ ತಿಂಗಳಾದರೂ ನಮಾಝ್ ಅನ್ನು ಮನೆಯಲ್ಲಿಯೇ ನಿರ್ವಹಿಸಲಾಗಿದೆ. ಅದೇ ರೀತಿ ಹಿಂದುಗಳು, ಕ್ರೈಸ್ತರು, ಜೈನರು ಸೇರಿದಂತೆ ಪ್ರತಿಯೊಬ್ಬರು ನಾಡಿನ ಹಿತದೃಷ್ಠಿಯ ಹಿನ್ನೆಲೆಯಿಂದ ದೇವರ ಆರಾಧನೆಯನ್ನು ಮನೆಯಲ್ಲಿಯೇ ಮಾಡುತ್ತಿದ್ದಾರೆ.

Related posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

September 5, 2026
ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

September 5, 2026

ಇಂತಹ ಸಂದರ್ಭದಲ್ಲಿ ಸರಕಾರ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಮಾಡಿ ಕೊಟ್ಟು ಜನರನ್ನು ಗುಂಪು ಸೇರಿ ಸಾರಾಯಿ ಕುಡಿಯುವಂತೆ ಮಾಡಿರುವುದು ಅತ್ಯಂತ ಹಾಸ್ಯಾಸ್ಪದ. ಅದೇ ರೀತಿ ಇದೀಗ ಕೆಲವು ಬಂಡವಾಳಶಾಹಿ ಬಟ್ಟೆ ವ್ಯಾಪಾರಿಗಳ ಒತ್ತಡಕ್ಕೆ ಮಣಿದು ಜಿಲ್ಲಾಡಳಿತ ಜವಳಿ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುತ್ತಿರುವುದು ಕೊರೋನವನ್ನು ಕೈ ಬೀಸಿ ಕರೆಯುತ್ತಿರುವಂತೆ ಭಾಸವಾಗುತ್ತಿದೆ. ಆದುದರಿಂದ ಜಿಲ್ಲಾಡಳಿತವು ಕೂಡಲೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಮಾಜಿ ಮೇಯರ್ ಕೆ.ಅಶ್ರಫ್ ರವರು ಒತ್ತಾಯಿಸಿದ್ದಾರೆ.

ಬಟ್ಟೆ, ಫ್ಯಾನ್ಸಿ ಮತ್ತು ಪಾದರಕ್ಷೆಯ ಅಂಗಡಿಗಳನ್ನು ಒಂದು ವೇಳೆ ತೆರೆದಲ್ಲಿ ಮುಸ್ಲಿಂ ಬಾಂಧವರು ಜಾಗ್ರತೆ ವಹಿಸಬೇಕು. ಕೊರೋನಾ ಮಹಾಮಾರಿಗೆ ಜನರು ಬಲಿಯಾಗುತ್ತಿರುವ ಈ ಸಂದರ್ಭದಲ್ಲಿ ಈದ್ ಹಬ್ಬವನ್ನು ಬಹಳ ಸರಳವಾಗಿ ಆಚರಿಸಬೇಕು. ಯಾವುದೇ ಕಾರಣಕ್ಕೂ ಈದ್ ಹಬ್ಬದ ಖರೀದಿಗಾಗಿ ಅಂಗಡಿಗಳಲ್ಲಿ ಗುಂಪು ಗುಂಪಾಗಿ ಮುಗಿ ಬೀಳಬಾರದು. ಈ ನಾಡಿನ ಸಂರಕ್ಷಣೆಗಾಗಿ ಎಲ್ಲರೂ ದೃಢ ಸಂಕಲ್ಪ ಮಾಡಬೇಕಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.

Tags: Dakshina kannada
ShareTweetSendShare
Join us on:

Related Posts

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ

by Shwetha
September 5, 2026
0

ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

ಉದ್ಯೋಗಿಯ ಗ್ರಾಚ್ಯುಟಿ ಹಣದಿಂದ ಸಂಸ್ಥೆಯ ಬಾಕಿ ವಸೂಲಿ ಮಾಡುವಂತಿಲ್ಲ: ಹೈಕೋರ್ಟ್

by Shwetha
September 5, 2026
0

ಉದ್ಯೋಗಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಿರುವ ಬಾಕಿ ಅಥವಾ ಬಡ್ಡಿ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಯಾವುದೇ ಕಾನೂನುಬದ್ಧ ಹಕ್ಕಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ...

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

ದೇಶದ ಆಂತರಿಕ ಭದ್ರತೆಗೆ ದಿಮಾಗಿ ನಕ್ಸಲಿಸಂನಿಂದ ಗಂಡಾಂತರ: ಜಾಗೃತಿಗೆ ಚಕ್ರವರ್ತಿ ಸೂಲಿಬೆಲೆ ಕರೆ

by Shwetha
September 5, 2026
0

ಬೆಂಗಳೂರು: ಶಸ್ತ್ರಸಜ್ಜಿತ ನಕ್ಸಲಿಸಂ ಗಿಂತಲೂ ಇಂದು ದೇಶವನ್ನು ಒಳಗಿನಿಂದಲೇ ನಶಿಸುವಂತೆ ಮಾಡುತ್ತಿರುವ ಬೌದ್ಧಿಕ ಅಥವಾ ದಿಮಾಗಿ ನಕ್ಸಲಿಸಂ ಅತ್ಯಂತ ಅಪಾಯಕಾರಿಯಾಗಿದೆ. ಈ ಅದೃಶ್ಯ ಶತ್ರುಗಳ ವಿರುದ್ಧ ಸಮಾಜದಲ್ಲಿ...

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

ಫೋಕ್ಸ್‌ವ್ಯಾಗನ್‌ಗೆ ಭಾರೀ ಪುನರ್‌ರಚನೆ: ವಿಶ್ವಾದ್ಯಂತ 1 ಲಕ್ಷ ಉದ್ಯೋಗ ಕಡಿತಕ್ಕೆ ನಿರ್ಧಾರ

by Shwetha
September 5, 2026
0

ಜಾಗತಿಕ ಆಟೋಮೊಬೈಲ್‌ ಕ್ಷೇತ್ರದಲ್ಲಿ ಪ್ರಮುಖ ಸ್ಥಾನ ಹೊಂದಿರುವ ಜರ್ಮನಿಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್‌ವ್ಯಾಗನ್‌ ಭಾರೀ ಪ್ರಮಾಣದ ಪುನರ್‌ರಚನೆಗೆ ಮುಂದಾಗಿದೆ. ಸಂಸ್ಥೆಯ ಕಾರ್ಯಾಚರಣಾ ವೆಚ್ಚವನ್ನು ಕಡಿಮೆ ಮಾಡುವುದು,...

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

ಉತ್ತರ ಪ್ರದೇಶದಲ್ಲಿ ಮತ್ತೆ ಅರಳಲಿದೆ ಕಮಲ:ಯುಪಿಯಲ್ಲಿ ಬಿಜೆಪಿಗೆ ಎದುರೇ ಇಲ್ಲ-2027ರಲ್ಲೂ ಬಿಜೆಪಿಗೆ ಭರ್ಜರಿ ಬಹುಮತ ಖಚಿತ ಯೋಗಿ ಭವಿಷ್ಯ

by Shwetha
September 5, 2026
0

ಮಥುರಾ: ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಅಭೂತಪೂರ್ವ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಥುರಾದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram