ಬೀದರ್: ರಣ ಬಿಸಿಲಿಗೆ ಹೈರಾಣಾಗಿದ್ದ ಬೀದರ್ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಅಕಾಲಿಕ ಧಾರಾಕಾರ ಮಳೆಯಿಂದಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಿರುವುದರಿಂದಾಗಿ ವಿದ್ಯುತ್ ಕಂಬ ನೆಲಕ್ಕುರುಳಿ ಅವಾಂತರ ಸೃಷ್ಠಿಯಾಗಿದೆ. ಯಾರೂ ಇಲ್ಲದ ಸಂದರ್ಭದಲ್ಲಿ ವಿದ್ಯುತ್ ಕಂಬ ನೆಲಕ್ಕುರುಳಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಸಿಡಿಲು ಬಡಿದು ತೆಂಗಿನ ಮರವೊಂದು ಕೂಡ ಹೊತ್ತಿ ಉರಿದಿದೆ.
ಭಾಲ್ಕಿ ತಾಲೂಕಿನ ಕೊಸಮ್ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಡಿಲು ಬಡಿದು ತೆಂಗಿನ ಮರ ಧಗಧಗ ಹೊತ್ತಿ ಉರಿದಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.