ಚಿಕ್ಕಮಗಳೂರು: ಯುವಕನೊಬ್ಬನನ್ನು ಮರಕ್ಕೆ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಪ್ಪ ಠಾಣೆ ಪೊಲೀಸರು ಹಣದ ವಿಚಾರಕ್ಕೆ ಯುವಕನನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದ (beating) ಆರೋಪಿಗಳನ್ನೇ ಬಂಧಿಸಿದ್ದಾರೆ. ತಾಲೂಕಿನ ಸೋಮ್ಲಪುರ ರಸ್ತೆಯ ಪ್ಲಾಂಟೇಶನ್ನಲ್ಲಿ ಈ ಘಟನೆ ನಡೆದಿದೆ. ಕರ್ಕೇಶ್ವರ ಗ್ರಾಮದ ಸತೀಶ್ ಮೇಲೆ ಆರೋಪಿಗಲು ಹಲ್ಲೆ ನಡೆಸಿದ್ದರು.
ಮಹೇಶ್, ವಿಠಲ್, ಸಿರಿಲ್, ಸುನೀಲ್ ಮತ್ತು ಮಂಜು ಬಂಧಿತರು. ಸಾಲ ಪಡೆದು ಮರಳಿ ನೀಡದ ಹಿನ್ನೆಲೆಯಲ್ಲಿ ಯುವಕನನ್ನು ಮರಕ್ಕೆ ಕಟ್ಟಿ ಐವರು ಕೈ, ಕಾಲು ಕಟ್ಟಿ ಹಾಕಿ ಮದ್ಯಪಾನ ಮಾಡುತ್ತ ಯುವಕನಿಗೆ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೇ, ವಿಡಿಯೋ ರೆಕಾರ್ಡ್ ಕೂಡ ಮಾಡಿಕೊಂಡಿದ್ದು, ಅದು ವೈರಲ್ ಆಗಿತ್ತು.
ಘಟನೆಯಲ್ಲಿ ಸತೀಶ್ ಗಂಭೀರವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.