ಮೂರು ದಿನಗಳ ಹಿಂದೆಯಷ್ಟೇ ಸಾವನ್ನಪ್ಪಿದ್ದ ತಾಯಿಯ ಚಿತಾಭಸ್ಮ (ashes) ವಿಸರ್ಜಿಸಲು ತೆರಳಿದ್ದ ಮಗ (son) ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
ಎಚ್.ಜಿ. ಕೊಟ್ರೇಶ್ (40) ತಾಯಿಯ ಚಿತಾಭಸ್ಮ ನೀರಿಗೆ ಬಿಡಲು ಹೋದ ವೇಳೆ ಹಗರಿಬೊಮ್ಮನಹಳ್ಳಿ (Hagaribommanahalli) ರಸ್ತೆಯಲ್ಲಿನ ಮಳೆಹಳ್ಳದಲ್ಲಿನ ಚೆಕ್ ಡ್ಯಾಂಗೆ ತೆರಳಿದ್ದಾಗ ಅಯತಪ್ಪಿ ನೀರಿಗೆ ಬಿದ್ದಿದ್ದಾರೆ.
ಕೊಟ್ರೇಶ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಚೆಕ್ ಡ್ಯಾಂ ಬಳಿ ಗುರುವಾರ ಬೆಳಿಗ್ಗೆ ಬೈಕ್, ಚಪ್ಪಲಿ ಪತ್ತೆಯಾಗಿದ್ದರಿಂದ ನೀರು ಪಾಲಾಗಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಚೆಕ್ ಡ್ಯಾಂ ನಲ್ಲಿ ಶೋಧ ನಡೆಸಿದಾಗ ಶವ ಪತ್ತೆಯಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.