ರಾಜ್ಯದಲ್ಲಿ ಕೋವಿಡ್ ಸೋಂಕಿತರ ನರಳಾಟ ಸುಳ್ಳು : ಪ್ರಭು ಚೌವ್ಹಾಣ್
ಯಾದಗಿರಿ : ರಾಜ್ಯದಲ್ಲಿ ಆಕ್ಸಿಜನ್ ಸಿಗದೇ ಕೊರೊನಾ ಸೋಂಕಿತರು ಪರದಾಡುತ್ತಿದ್ದಾರೆ. ಎಷ್ಟೊ ಮಂದಿ ತಮ್ಮ ಪ್ರಾಣವನ್ನು ಕೂಡ ಕಳೆದುಕೊಂಡಿದ್ದಾರೆ.
ಆದ್ರೆ ಘನತೆಹೊತ್ತ ಪಶುಸಂಗೋಪನಾ ಸಚಿವರಾದ ಪ್ರಭು ಚೌವ್ಹಾಣ್ ಅವರು ರಾಜ್ಯದಲ್ಲಿ ಆಕ್ಸಿಜನ್ ಮತ್ತು ಇಂಜೆಕ್ಷನ್ ಸಮಸ್ಯೆ ಇಲ್ಲ. ಕೋವಿಡ್ ಸೋಂಕಿತರ ನರಳಾಟ ಸುಳ್ಳು ಎಂದು ಹೇಳಿಕೆ ನೀಡಿದ್ದಾರೆ.
ಯಾದಗಿರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿಫಲತೆ ಸುದ್ದಿಗಳು ಸುಳ್ಳು.
ಕೋವಿಡ್ ಸೋಂಕಿತರ ನರಳಾಟ ಸುಳ್ಳು. ರಾಜ್ಯದಲ್ಲಿ ಆಕ್ಸಿಜನ್ ಮತ್ತು ಇಂಜೆಕ್ಷನ್ ಸಮಸ್ಯೆ ಇಲ್ಲ, ಬೀದರ್ ಪ್ರಕರಣಗಳು ಸಹ ಸುಳ್ಳು. ಕಾಂಗ್ರೆಸ್ ನವರು ಮನೆಯಲ್ಲಿ ಕುಳಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿದರು.
ಇನ್ನು ಕಾಂಗ್ರೆಸ್ ಏನು ಅಂತಾ ರಾಜ್ಯದ ಜನರಿಗೆ ಗೊತ್ತಿದೆ. ಅವರು ಮನೆಯಲ್ಲಿ ಕುಳಿತು ಬೇಕಾಬಿಟ್ಟಿ ಮಾತನಾಡುತ್ತಾರೆ.
ಅವರದ್ದು ಮಾತನಾಡುವ ಕೆಲಸ ಅವರು ಮಾತನಾಡುತ್ತೀರಲಿ ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.