ಮೋದಿ ಬಗ್ಗೆ ತಮ್ಮ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿ ಅವರು ಹೇಳಿರೋದೇನು..?
ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್ ಮುಖೃ್ಜಿ ಅವರ ಆತ್ಮಚರಿತ್ರೆ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಈ ಆತ್ಮಚರಿತ್ರೆಯಲ್ಲಿ ಪ್ರಣಬ್ ಮುಖರ್ಜಿಯವರು ಅನೇಕ ಮಹತ್ವದ ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ‘ ದಿ ಪ್ರೆಸಿಡೆನ್ಸಿಯಲ್ ಇಯರ್ಸ್: 2012 -2017’ ಪುಸ್ತಕದಲ್ಲಿ ಇಂದಿರಾಗಾಂಧಿ, ನೆಹರೂ, ನೇಪಾಳವನ್ನೂ ಸಹ ಉಲ್ಲೇಖಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು, ಅವರ ಆಡಳಿತ ವೈಖರಿ ಬಗ್ಗೆಯೂ ಪ್ರಣಬ್ ಮುಖರ್ಜಿ ಅವರು ಉಲ್ಲೇಖಿಸಿ ಕೆಲ ಅಭಿಪ್ರಾಯಗಳನ್ನ ಹಂಚಿಕೊಂಡಿದ್ದಾರೆ.
ಬೇರೊಬ್ಬಳಿಗೆ ಪತಿಯನ್ನ ಬಿಟ್ಟು ಕೊಟ್ಟ ಪತ್ನಿ: 1.5 ಕೋಟಿ ರೂಪಾಯಿಗೆ ಪತಿಯ ಮಾರಾಟ..!
ಹೌದು ಪ್ರಮುಖವಾಗಿ ಪ್ರಧಾನಿ ಮೋದಿ 1000 ರೂಪಾಯಿ ಮತ್ತು 500 ರೂಪಾಯಿ ಮುಖಬೆಲೆಯ ನೋಟುಗಳನ್ನು ರದ್ದುಮಾಡುವ ವಿಷಯ ತಮಗೂ ಗೊತ್ತಿರಲಿಲ್ಲ ಎಂದು ಪ್ರಣಬ್ ಮುಖರ್ಜಿ ಅವರು ಬರೆದುಕೊಂಡಿದ್ದಾರೆ. ಹೌದು 2016 ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ನೋಟುಗಳನ್ನು ಅಮಾನ್ಯೀಕರಣಗೊಳಿಸುವ ಘೋಷಣೆ ಮಾಡಿದ್ದರು. ಅವರು ಘೋಷಣೆ ಮಾಡಿದ ನಂತರವೇ ನನಗೆ ಅದರ ಬಗ್ಗೆ ತಿಳಿಯಿತು. ಇಂತಹ ಮಹತ್ವದ ಕ್ರಮಗಳನ್ನು ಅಚ್ಚರಿಯ ಘೋಷಣೆ ಮಾಡುವುದು ಅಗತ್ಯ. ಮೊದಲೇ ವಿಪಕ್ಷಗಳೊಂದಿಗೆ ಚರ್ಚೆ ನಡೆಸಿದ್ದರೆ ನೋಟು ಅಮಾನ್ಯೀಕರಣಕ್ಕೆ ಮಹತ್ವ ಇರುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಆಶ್ಚರ್ಯವನ್ನು ತರಲಿಲ್ಲ. ಅದು ಅಗತ್ಯವಾಗಿತ್ತು ಕೂಡ ಎಂದು ತಿಳಿಸಿದ್ದಾರೆ.
ಅನೈತಿಕ ಸಂಬಂಧಕ್ಕೆ ಅಡ್ಡಿ: ಮಕ್ಕಳಿಗೆ ವಿಷ ಉಣಿಸಿದ ಪಾಪಿ ತಾಯಿ!
ಇದಲ್ಲದೆ 2015 ರಲ್ಲಿ ಪ್ರಧಾನಿ ಮೋದಿ ಲಾಹೋರ್ ಗೆ ದಿಢೀರ್ ಭೇಟಿ ನೀಡಿ, ಪಾಕ್ ಪ್ರಧಾನಿ ನವಾಜ್ ಷರೀಫ್ ಅವರಿಗೆ ಜನ್ಮದಿನದ ಶುಭಾಶಯ ಹೇಳುವ ಅಗತ್ಯವಿರಲಿಲ್ಲ. ಅವರಿಗೆ ವಿದೇಶಾಂಗ ನೀತಿಯ ಬಗ್ಗೆ ಅರಿವಿರಲಿಲ್ಲ ಎಂದು ಸಹ ಉಲ್ಲೇಖಿಸಿದ್ದಾರೆ. ಸದ್ಯ ಪ್ರಣಬ್ ಅವರು ಆತ್ಮಚರಿತ್ರೆಯಲ್ಲಿ ಇನ್ನೂ ಹಲವಾರು ವಿಚಾರಗಳ ಬಗ್ಗೆ ಬರೆದುಕೊಂಡಿದ್ದಾರೆ. ಇನ್ನೂ ನೆಹರೂ ಅವರ ಬದಲಾಗಿ ಇಂದಿರಾಗಾಂಧಿ ಪ್ರಧಾನಿಯಾಗಿದ್ರೆ ಇಷ್ಟೊತ್ತಿಗೆ ನೇಪಾಳ ಭಾರತದ ಭಾಗಗವಾಗ್ತಿತ್ತು ಎಂದು ಸಹ ಬರೆದುಕೊಂಡು ಅಚ್ಚರಿ ಮೂಡಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








